• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯದಲ್ಲಿ ಅತಿಥಿ ಶಿಕ್ಷಕಿಯನ್ನು ಕೊಂದಿದ್ಯಾರು..? ಕಾರಣ ಏನು ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
January 24, 2024
in ಕರ್ನಾಟಕ
0
ಮಂಡ್ಯದಲ್ಲಿ ಅತಿಥಿ ಶಿಕ್ಷಕಿಯನ್ನು ಕೊಂದಿದ್ಯಾರು..? ಕಾರಣ ಏನು ಗೊತ್ತಾ..?
Share on WhatsAppShare on FacebookShare on Telegram

ಮಂಡ್ಯದ ಮೇಲುಕೋಟೆಯಲ್ಲಿ (Melukote) ಅತಿಥಿ ಶಿಕ್ಷಕಿಯ ಕೊಲೆ (Murder) ನಡೆದಿದೆ. ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ಅತಿಥಿ ಶಿಕ್ಷಕಿಯ ಶವ ಪತ್ತೆಯಾಗಿದೆ. ಮೇಲುಕೋಟೆಯ ಯೋಗಾ ನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಶಿಕ್ಷಕಿಯ ಮೃತ ದೇಹ ಪತ್ತೆಯಾಗಿದ್ದು. ಕೊಲೆಯಾಗಿರುವ ಶಿಕ್ಷಕಿಯನ್ನು ಮಾಣಿಕ್ಯನಹಳ್ಳಿಯ ದೀಪಿಕಾ (28) ಎಂದು ಗುರುತಿಸಲಾಗಿದೆ. ಮಾಣಿಕ್ಯನಹಳ್ಳಿಯ ವೆಂಕಟೇಶ್ ಎಂಬುವರ ಮಗಳಾದ ದೀಪಿಕಾ. ಅದೇ ಗ್ರಾಮದ ಲೋಕೇಶ್ ಎಂಬಾತನನ್ನು ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗಳಿಗೆ 8 ವರ್ಷದ ಮಗು ಸಹ ಇದೆ. ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದ ದೀಪಿಕಾ, ಶನಿವಾರ ಮಧ್ಯಾಹ್ನ ತರಗತಿ ಮುಗಿಸಿ ಸ್ಕೂಟರ್​ನಲ್ಲಿ ವಾಪಸ್ ಮನೆಗೆ ಹೋಗಿದ್ದರು. ಶನಿವಾರ ಸಂಜೆ ವೇಳೆ ಸ್ಕೂಟರ್ ಬೆಟ್ಟದ ತಪ್ಪಲಿನಲ್ಲಿ ನಿಂತಿರೋದನ್ನ ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ADVERTISEMENT

ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಕೂಟರ್ ವಶಕ್ಕೆ ಪಡೆದು ಅದರ ನಂಬರ್ ನೆರವಿನಿಂದ ಶಿಕ್ಷಕಿಯ ಊರು ಪತ್ತೆ ಹಚ್ಚಿದ್ದ ಮೇಲುಕೋಟೆ ಪೊಲೀಸರು, ನಂತರ ಬೆಟ್ಟದ ತಪ್ಪಲಿನಲ್ಲೇ ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿದ್ದ ಶಿಕ್ಷಕಿಯ ಶವವನ್ನೂ ಪತ್ತೆ ಹಚ್ಚಿದ್ದರು. ಆ ಬಳಿಕ ಅತಿಥಿ ಉಪನ್ಯಾಸಕಿ ಹತ್ಯೆ ಮಾಡಿದ್ಯಾರು ಅನ್ನೋ ಬಗ್ಗೆ ತನಿಖೆ ಕೈಗೊಂಡಿದ್ದರು. ಹತ್ಯೆ ದಿನ ದೀಪಿಕಾ ಮತ್ತು ಅವರ ಜೊತೆಗಿದ್ದವನ ನಡುವೆ ಜಗಳ ನಡೆದಿತ್ತು. ಜಗಳ ನಡೆಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ಪ್ರವಾಸಿಗರ ಮೊಬೈಲ್​ನಲ್ಲಿ ವಿಡಿಯೋ ಸೆರೆ ಸಿಕ್ಕಿದೆ. ವಿಡಿಯೋದಲ್ಲಿ ಗೆಳೆಯ ಮತ್ತು ದೀಪಿಕಾ ಜಗಳ ನಡೆದಿರುವುದು ಪತ್ತೆಯಾಗಿದೆ. ಇದೀಗ ಮೇಲುಕೋಟೆ ಪೊಲೀಸರು ವಿಡಿಯೋ ಸಮೇತ ಮಾಹಿತಿ ನೀಡಿದ್ದಾರೆ ಪ್ರವಾಸಿಗರು.

ಮೇಲುಕೋಟೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ದೀಪಿಕಾ ಹತ್ಯೆ ಮಾಡಿರುವುದು ಮಾಣಿಕ್ಯನಹಳ್ಳಿ ಗ್ರಾಮದ 22 ವರ್ಷದ ಯುವಕ ಅನ್ನೋ ಬಗ್ಗೆ ದೀಪಿಕಾ ಪತಿ ಅನುಮಾನ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ದೀಪಿಕಾ ಪತಿ ಲೋಕೇಶ್ ಮಾತನಾಡಿದ್ದು, ನಾವು ಪ್ರೀತಿಸಿ ಮದುವೆ ಆಗಿದ್ದೆವು. ಎಂಟು ವರ್ಷದ ಒಬ್ಬ ಮಗನಿದ್ದಾನೆ. ನಮಗೆ ಯಾವುದಕ್ಕೂ ಕೊರತೆ ಇರಲಿಲ್ಲ. ನನ್ನ ಹೆಂಡತಿ ದೀಪಿಕಾ ನನ್ನ ಹಾಗೂ ಮಗನನ್ನ ಬಿಟ್ಟು ಒಂದು ಗಂಟೆಯೂ ಇರುತ್ತಿರಲಿಲ್ಲ. ನಮ್ಮ ಗ್ರಾಮದ 22 ವರ್ಷದ ಯುವಕನ ಪರಿಚಯ ಇತ್ತು. ಆತ ದೀಪಿಕಾಳನ್ನ ಅಕ್ಕ ಅಕ್ಕ ಎಂದು ಕರೆಯುತ್ತಿದ್ದ. ಆಕೆ ಶಾಲೆಗೆ ಯಾವಾಗಲೂ ಬಸ್​ನಲ್ಲೇ ಹೋಗಿ ಬರ್ತಿದ್ದಳು. ಆದರೆ ಅಂದು ಬಸ್ ಮಿಸ್​ ಆಗಿದ್ದರಿಂದ ಸ್ಕೂಟರ್​ನಲ್ಲಿ ತೆರಳಿದ್ದಳು ಎಂದಿದ್ದಾರೆ.

ಶನಿವಾರ ಮಧ್ಯಾಹ್ನ 12 ಗಂಟೆಗೆ ಶಾಲೆ ಮುಗಿಸಿ 12.30 ರ ವೇಳೆಗೆ ಶಾಲೆಯಿಂದ ಹೊರ ಬಂದಿದ್ದಾಳೆ. ಆ ವೇಳೆ ಆಕೆಗೆ ಒಂದು ಫೋನ್ ಕಾಲ್ ಬಂದಿದೆ. ಫೋನ್​ನಲ್ಲಿ ಮಾತಾಡಿಕೊಂಡು ಹೊರ ಬಂದಿದ್ದಾರೆ. ಅವರು ಹೊರ ಬಂದ ಒಂದು ಗಂಟೆ ವೇಳೆಗೆ ನಾನು ಪೋನ್ ಮಾಡಿದಾಗ ಸ್ವಿಚ್ಡ್ ಆಫ್ ಆಗಿತ್ತು. ಇನ್ನು ದೀಪಿಕಾ ಮೃತ ದೇಹ ಸಿಕ್ಕ ದಿನದಿಂದ ಆ ಯುವಕ ನಾಪತ್ತೆಯಾಗಿದ್ದಾನೆ. ಅವರ ತಂದೆಗೆ ನನ್ನನ್ನು ಹುಡುಕಬೇಡಿ ಎಂದು ಹೇಳಿದ್ದಾನಂತೆ. ಅಕ್ಕನಿಗೆ ಒಳ್ಳೆಯ ಕಡೆ ಗಂಡನ್ನು ಹುಡುಕಿ ಮದುವೆ ಮಾಡಿ ಎಂದು ಹೇಳಿ ಹೋಗಿದ್ದಾನಂತೆ ಎಂದಿದ್ದಾರೆ. ಇನ್ನೂ ನಾನು ಏನೇ ಮಾಡಿದ್ರೂ ನಮ್ಮ ಅಪ್ಪ ಬಿಡಿಸಿಕೊಂಡು ಬರ್ತಾರೆ ಅನ್ನೊ ಧಿಮಾಕು ಆತನಿಗೆ. ದೀಪಿಕಾಳಿಗೆ ಕಡೆದಾಗಿ ಫೋನ್ ಮಾಡಿದ್ದು ಆ ಯುವಕನೇ. ಆತನನ್ನ ಹಿಡಿದು ದಂಡಿಸಬೇಕು. ನನ್ನ ಹಾಗೂ ನನ್ನ ಮಗನ ಜೀವನ ಹಾಳು ಮಾಡಿದ ಆತನಿಗೆ ಜೀವಾವಧಿ ಶಿಕ್ಷೆ ಆಗಬೇಕು ಎಂದಿದ್ದಾರೆ ಪತಿ ಲೋಕೇಶ್.

ಆದರೆ ಈ ಕೊಲೆ ಕೇಸ್​ನಲ್ಲಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗುತ್ತಿದ್ದು, ಕೊಲೆಯಾದ ದೀಪಿಕಾ, ಆ ಹುಡುಗ ಕರೆ ಮಾಡಿದ ಎನ್ನುವ ಕಾರಣಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದು ಯಾಕೆ..? ಅನುಮಾನಿತ ಆರೋಪಿ ಹುಡುಗ ಅಕ್ಕ ಎಂದು ಕರೆಯುತ್ತಿದ್ದ ಎಂದು ದೀಪಿಕಾ ಪತಿ ಲೋಕೇಶ್​ ಹೇಳಿದ್ದಾರೆ. ಕೊಲೆ ನಡೆದಿರುವ ದಿನ ಆ ಯುವಕನ ಹುಟ್ಟುಹಬ್ಬ ಇತ್ತು ಎನ್ನಲಾಗಿದೆ. ಆ ಹುಡುಗನಿಗೆ ಸಿಗುವ ಉದ್ದೇಶದಿಂದಲೇ ಬಸ್​ ಮಿಸ್​ ಮಾಡಿಕೊಂಡಂತೆ ಮಾಡಿ ಬೈಕ್​ನಲ್ಲಿ ಹೋಗಿದ್ದರ..? ಈ ಬಗ್ಗೆ ಮೊದಲೇ ನಿಶ್ಚಯ ಆಗಿತ್ತಾ..? ಅನ್ನೋ ಬಗ್ಗೆಯೂ ಪೊಲೀಸರಿಗೆ ಅನುಮಾನಗಳು ಕಾಡುತ್ತಿವೆ. ಒಂದು ವೇಳೆ ಮೊದಲು ಬೇರೆ ಎಲ್ಲಿಗೋ ಹೋಗಲು ಅಥವಾ ಬೇರೆ ಅನ್ಯ ಉದ್ದೇಶಗಳಿಗೆ ಪ್ಲ್ಯಾನ್​ ಮಾಡಿ ಆ ಬಳಿಕ ಉಲ್ಟಾ ಹೊಡೆದಿದ್ದಾರಾ..? ಗೊತ್ತಿಲ್ಲ. ಆದರೂ ಜಗಳ ಆಗಿರುವುದಕ್ಕೆ ವಿಡಿಯೋ ಸಾಕ್ಷಿ ಇದೆ. ಅದು ಪ್ರೇಮಿಗಳ ಕಲಹ ಎಂದುಕೊಂಡ ಭಕ್ತರು ತಮ್ಮ ಪಾಡಿಗೆ ತಾವು ಹೋಗಿದ್ದಾರೆ. ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ದೀಪಿಕಾ ಕೊಲೆಗೆ ನಿಖರ ಖಾರಣ ತನಿಖೆಯಿಂದ ಅಷ್ಟೇ ಗೊತ್ತಾಗಬೇಕಿದೆ.

ಕೃಷ್ಣಮಣಿ

Previous Post

ಸುಂದರಿ ಟೀಚರ್ ಹತ್ಯೆಗೈದಿದ್ದ ಹಂತಕ ಅರೆಸ್ಟ್ : ಮೇಲುಕೋಟೆಯಲ್ಲಿ ನಡೆದ ಮರ್ಡರ್ ಕೇಸ್ ಆಗಂತುಕ ಖಾಕಿ ಬಲೆಗೆ

Next Post

ದೊಡ್ಡವರೇ ಹೇಳಿದ್ದಾರೆ ಹಾಸನಕ್ಕೆ ನಾನೇ ಅಭ್ಯರ್ಥಿ : ಪ್ರಜ್ವಲ್ ರೇವಣ್ಣ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ದೊಡ್ಡವರೇ ಹೇಳಿದ್ದಾರೆ ಹಾಸನಕ್ಕೆ ನಾನೇ ಅಭ್ಯರ್ಥಿ : ಪ್ರಜ್ವಲ್ ರೇವಣ್ಣ

ದೊಡ್ಡವರೇ ಹೇಳಿದ್ದಾರೆ ಹಾಸನಕ್ಕೆ ನಾನೇ ಅಭ್ಯರ್ಥಿ : ಪ್ರಜ್ವಲ್ ರೇವಣ್ಣ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada