• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

DCM D.K. Shivakumar Advocates Utilizing GAFX Technologies Across Education and Health Sectors

Any Mind by Any Mind
January 29, 2024
in ಕರ್ನಾಟಕ
0
MLA Pradeep Eshwar Bahuparak for CM Siddhu opposite DK
Share on WhatsAppShare on FacebookShare on Telegram

ADVERTISEMENT

ಬೆಂಗಳೂರು : ಜಿಎಎಫ್ಎಕ್ಸ್ ತಂತ್ರಜ್ಞಾನಗಳಿಂದಾಗಿ ಸಿನಿಮಾ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಈ ತಂತ್ರಜ್ಞಾನವನ್ನು ಶಿಕ್ಷಣ, ಆರೋಗ್ಯ ಹಾಗೂ ಇತರೆ ಸಾಮಾಜಿಕ ಕ್ಷೇತ್ರಗಳಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (Dkshivakumar) ಅವರು ತಿಳಿಸಿದರು.

5ನೇ ಆವೃತ್ತಿಯ ಜಿಎಎಫ್ಎಕ್ಸ್ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು;

ನಮ್ಮ ಬೆಂಗಳೂರಿನಲ್ಲಿ ಪ್ರತಿ ಮೂರ್ನಾಲ್ಕು ಕುಟುಂಬದಲ್ಲಿ ಒಬ್ಬ ಟೆಕ್ಕಿ ಇದ್ದೇ ಇರುತ್ತಾನೆ. ಬೆಂಗಳೂರಿನ್ಲ್ಲಿ ಸುಮಾರು 400ಕ್ಕೂ ಹೆಚ್ಚು ಸಂಸ್ಥೆಗಳಿದ್ದು, ತಂತ್ರಜ್ಞಾನವಿಲ್ಲದೆ ಶಿಕ್ಷಣ ಅಸಾಧ್ಯ ಎಂಬಂತಹ ಪರಿಸ್ಥಿತಿಗೆ ಬಂದಿದ್ದೇವೆ. ತಂತ್ರಜ್ಞಾನವಿಲ್ಲದ ಕ್ಷೇತ್ರವೇ ಇಲ್ಲ. ನೀವು ತಂತ್ರಜ್ಞಾನಗಳಿಂದ ಎಲ್ಲೇ ತಪ್ಪಿಸಿಕೊಂಡರು ಚಿತ್ರಮಂದಿರಗಳಲ್ಲಿ ತಪ್ಪಿಸಿಕೊಳ್ಳಲು ಆಗುವುದಿಲ್ಲ.

ಇತ್ತೀಚಿನ ದಿನಗಳಲ್ಲಿ ಚಲನಚಿತ್ರ ಕ್ಷೇತ್ರದಲ್ಲಿ ತಂತ್ರಜ್ಞಾನಗಳ ಅಭಿವೃದ್ಧಿ ಹಾಗೂ ಅಳವಡಿಕೆ ಬಹಳ ಅಚ್ಚರಿಯಾಗುತ್ತದೆ. ಬೆಂಗಳೂರು ಗೇಮಿಂಗ್, ಅನಿಮೇಷನ್, ಸಿನಿಮಾ ಇತರೆ ಮನರಂಜನಾ ಕ್ಷೇತ್ರಗಳ ತಂತ್ರಜ್ಞಾನ(ಜಿಎಎಫ್ಎಕ್ಸ್)ದಲ್ಲಿ ದಾಪುಗಾಲಿಡುತ್ತಿದೆ. ನಾವು ಜಾಗತಿಕವಾಗಿ ಸ್ಪರ್ಧೆ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ಜಿಎಎಫ್ಎಕ್ಸ್ ತಂತ್ರಜ್ಞಾನವನ್ನು ಬಳಸಿಕೊಂಡು ಇನ್ನಷ್ಟು ಅತ್ಯುತ್ತಮ ಚಿತ್ರಗಳನ್ನು ತಯಾರಿಸುವ ಭರವಸೆಯಿದೆ.

ಈಗ ಕೃತಕ ಬುದ್ಧಿಮತ್ತೆ ಆಗಮನದಿಂದಾಗಿ ಈ ಕ್ಷೇತ್ರಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ. ಈ ತಂತ್ರಜ್ಞಾನಗಳು ನಮ್ಮ ಮಕ್ಕಳ ಬದುಕಿನಲ್ಲಿ ದೊಡ್ಡ ಪ್ರಮಾಣದ ಬದಲಾವಣೆಯನ್ನು ತಂದಿವೆ. ಈ ಉದ್ಯಮ ಮತ್ತಷ್ಟು ಬೆಳೆಯಲು ಸರ್ಕಾರ ಸಂಪೂರ್ಣ ಸಹಕಾರ ನೀಡಲು ಬದ್ಧವಾಗಿದೆ. ಹೊಸ ಹೊಸ ತಂತ್ರಜ್ಞಾನಗಳನ್ನು ಬೆಂಗಳೂರು ಅಯಸ್ಕಾಂತದಂತೆ ವೇಗವಾಗಿ ಸೆಳೆದುಕೊಳ್ಳುತ್ತದೆ.

ಕೈಗಾರಿಕಾ ಕ್ರಾಂತಿಗೆ ಬೆಂಗಳೂರು ಸ್ಪಂದಿಸಿದೆ:

ದೇಶದಲ್ಲಿ 1950, 60, 70ರ ದಶಕದಲ್ಲಿ ಸಾರ್ವಜನಿಕ ಉದ್ದಿಮೆಗಳ ಕ್ರಾಂತಿಯಾಯಿತು. ಈ ಸಂದರ್ಭದಲ್ಲಿ ನಮ್ಮ ನಾಯಕರಾದ ಜವಾಹರ್ ಲಾಲ್ ನೆಹರೂ, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ಬೆಂಗಳೂರಿನಲ್ಲಿ ಅನೇಕ ಬೃಹತ್ ಉದ್ದಿಮೆಗಳನ್ನು ಸ್ಥಾಪಿಸಿದರು. ಬಿಇಎಲ್, ಬೆಮೆಲ್, ಇಸ್ರೋ, ಬಿಎಚ್ಇಎಲ್ ಸೇರಿದಂತೆ ಅನೇಕ ಉದ್ದಿಮೆ ಆರಂಭಿಸಿದರು.

ನಂತರ ನಡೆದ ಕೈಗಾರಿಕಾ ಕ್ರಾಂತಿ ಸಂದರ್ಭದಲ್ಲಿ ಬೆಂಗಳೂರು ಅನೇಕ ಕೈಗಾರಿಕ ಪ್ರದೇಶಗಳನ್ನು ಸ್ಥಾಪಿಸಿ ಸಕಾರಾತ್ಮಕವಾಗಿ ಸ್ಪಂದಿಸಿತು. ಕೈಗಾರಿಕೆಗಳನ್ನು ಬೆಂಗಳೂರು ಬಹಳ ಆತ್ಮೀಯವಾಗಿ ಅಪ್ಪಿಕೊಳ್ಳುತ್ತದೆ. ಕೈಗಾರಿಕೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ನಮ್ಮ ಸರ್ಕಾರ ಐಟಿ ಕ್ಷೇತ್ರೆಕ್ಕೆ ಆದ್ಯತೆ ನೀಡಿದ ಪರಿಣಾಮ ಐಟಿ ಕ್ಷೇತ್ರ ಬೆಂಗಳೂರಿನಲ್ಲಿ ಬೆಳೆಯಿತು.

ನವೋದ್ಯಮಗಳ ಕ್ರಾಂತಿ ಕೂಡ ಬೆಂಗಳೂರಿನಲ್ಲಿ ಆರಂಭಿವಾಗಿ ದೇಶದಲ್ಲಿ ನವೋದ್ಯಮಗಳ ರಾಜಧಾನಿಯಾಗಿದೆ. ಬೆಂಗಳೂರು ಕೈಗಾರಿಕೆಗಳಿಗೆ ಪೂರಕವಾದ ಅನ್ವೇಷಣೆ, ತಂತ್ರಜ್ಞಾನ, ಸಂಸ್ಕೃತಿಯನ್ನು ಹೊಂದಿದ್ದು, ಕೈಗಾರಿಕೆಗಳಿಗೆ ಬೆಂಗಳೂರು ಮೊದಲ ಆಯ್ಕೆಯಾಗಿ ಪರಿಣಮಿಸಿದೆ.

ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ವಿಚಾರವಾಗಿ ನಾವು ನೂತನ ನೀತಿಯನ್ನು ತರುತ್ತಿದ್ದೇವೆ. 20 ವರ್ಷಗಳ ಹಿಂದೆ ನಾವು ತಂದ ಐಟಿ ನೀತಿಯಿಂದಾಗಿ ಬೆಂಗಳೂರಿನಲ್ಲಿ ಅಪಾರ ಪ್ರಮಾಣದ ಅವಕಾಶಗಳನ್ನು ಸೃಷ್ಟಿಸಿದೆವು. ಪರಿಣಾಮ ಬೆಂಗಳೂರು ಐಟಿ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಎಲ್ಲಾ ಕ್ಷೇತ್ರದಲ್ಲೂ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿ ಬೆಳವಣಿಗೆ ಕಾಣುತ್ತಿದ್ದು, ನಮ್ಮ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಇದಕ್ಕಾಗಿ ಶ್ರಮಿಸುತ್ತಿದ್ದಾರೆ. ನಮ್ಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಐಟಿ ಬಿಟಿ ಕ್ಷೇತ್ರದ ವೇಗದ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ.

ತಂತ್ರಜ್ಞಾನ ಉದ್ಯಮಕ್ಕೆ ನೂತನ ನೀತಿ ಅಳವಡಿಕೆ:
ಮನರಂಜನಾ ಕ್ಷೇತ್ರದಲ್ಲಿ ತಂತ್ರಜ್ಞಾನಗಳ ಬಳಕೆ ಹೆಚ್ಚಾಗುತ್ತಿದೆ. ಹಾಲಿವುಡ್ ಹಾಗೂ ಟಿವಿ ಕ್ಷೇತ್ರದಲ್ಲಿ ತಂತ್ರಜ್ಞಾನಗಳನ್ನು ದೊಡಡ ಪ್ರಮಾಣದಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ಪ್ರತ್ಯೇಕ ನೀತಿಗಳನ್ನು ಅಳವಡಿಸಿಕೊಂಡಿದ್ದಾರೆ. ಹೀಗಾಗಿ ನಾವು ಕೂಡ ಈ ವಿಚಾರದಲ್ಲಿ ನೂತನ ನೀತಿ ರೂಪಿಸಿಕೊಳ್ಳಬೇಕಿದೆ. ನೂತನ ನೀತಿ ಕೈಗಾರಿಕಾ ಸ್ನೇಹಿತವಾಗಿದ್ದು, ಬಂಡವಾಳ ಹೂಡಿಕೆ ಆಕರ್ಷಣೆಗೆ ಸಹಕಾರಿಯಾಗಿದೆ.

ಈ ಉದ್ಯಮ ಪ್ರತಿ ಒಂದೆರಡು ವರ್ಷಗಳಲ್ಲಿ ಬದಲಾವಣೆಯನ್ನು ಕಾಣುತ್ತಿರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಉದ್ಯಮಕ್ಕೆ ಎದುರಾಗುವ ಸವಾಲುಗಳನ್ನು ಎದುರಿಸಲು, ಅವುಗಳನ್ನು ಬಲಪಡಿಸಲು ಸರ್ಕಾರ ಸಂಪೂರ್ಣ ಸಹಕಾರ ನೀಡುವುದು. ಈ ಉದ್ಯಮದ ಅಭಿವೃದ್ಧಿಗೆ ಕರ್ನಾಟಕ ಬದ್ಧವಾಗಿದೆ.

ನಮ್ಮ ನೂತನ ನೀತಿಯಲ್ಲಿ ಅನ್ವೇಶಣೆ, ಜಾಗತಿಕ ಮಟ್ಟದ ಸ್ಪರ್ಧೆಗೆ ಅವಕಾಶ ನೀಡಿ 2029ರ ವೇಳೆಗೆ ರಾಜ್ಯದಲ್ಲಿ ಈ ಉದ್ಯಮದಲ್ಲಿ 30 ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಇದು ಕೇವಲ ಅಂಕಿ ಅಂಶವಲ್ಲ, ಈ ಉದ್ಯಮದ ಬೆಳವಣಿಗೆಗೆ ಸರ್ಕಾರದ ಬದ್ಧತೆಯಾಗಿದೆ. ಕರ್ನಾಟಕವನ್ನು ಜಾಗತಿಕ ಕೌಶಲ್ಯ ಕೇಂದ್ರವಾಗಿ ಮಾಡುವ ಗುರಿ ಇದೆ. ನಮ್ಮ ಸರ್ಕಾರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ನೂತನ ನೀತಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಇಂದು ಈ ಕಾರ್ಯಕ್ರಮದಲ್ಲಿ ಯುವ ಹೊಸ ಉದ್ಯಮಿಗಳನ್ನು ನೋಡುತ್ತಿದ್ದೇನೆ. ಈ ಕಾರ್ಯಕ್ರಮ ಕೇವಲ ವೃತ್ತಿಪರರ ಕಾರ್ಯಕ್ರಮವಲ್ಲ, ಇದು ಕ್ರಿಯಾಶೀಲತೆಯ ಸಂಭ್ರಮ. ನೀವು ಬಲಿಷ್ಠವಾಗಿ ಬೆಳೆದಷ್ಟು ಇಡೀ ಉದ್ಯಮವೇ ಬೆಳೆಯುತ್ತದೆ. ಅದಕ್ಕೆ ಬೇಕಾದ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡಲಿದೆ.”

Previous Post

NDA Candidate A.P. Ranganath Submits Nomination for Bengaluru Teachers Constituency By-election

Next Post

Kumaraswamy Criticizes Chief Minister Siddaramaiah’s Alleged Lack of Decorum

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
NDA Candidate A.P. Ranganath Submits Nomination for Bengaluru Teachers Constituency By-election

Kumaraswamy Criticizes Chief Minister Siddaramaiah's Alleged Lack of Decorum

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada