Big boss ಮೊದಲನೇ ರನ್ನರ್ ಅಪ್ ಆದ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿಯು ಡ್ರೋನ್ ಪ್ರತಾಪ್ (Drone prathap) ಅವರಿಗೆ ಮತ್ತೊಂದು ಬಿಗ್ ಆಫರ್ ನೀಡಿದೆ. ಅತ್ಯಂತ ಜನಪ್ರಿಯ ಶೋ ಗಿಚ್ಚಿಗಿಲಿಗಿಲಿ ಕಾರ್ಯಕ್ರಮದಲ್ಲಿ ಡ್ರೋನ್ ಪ್ರತಾಪ್ ಕಂಟೆಸ್ಟೆಂಟ್ ಆಗಿ ಆಯ್ಕೆಯಾಗಿದ್ದಾರೆ.
ಇಂದಿನಿಂದ ರಿಯಾಲಿಟಿ ಶೋದ ಚಿತ್ರೀಕರಣ ಕೂಡ ನಡೆಯುತ್ತಿದೆ. ಡ್ರೋನ್ ಪ್ರತಾಪ್ ಮಾತ್ರವಲ್ಲ, ತುಕಾಲಿ ಸಂತೋಷ್, ಮೈಕಲ್ ಮತ್ತು ಇಶಾನಿ ಕೂಡ ಈ ಬಾರಿ ಗಿಚ್ಚಿಗಿಲಿಗಿಲಿಯಲ್ಲಿ ಪ್ರೇಕ್ಷಕರನ್ನು ನಕ್ಕು ನಗಿಸಲಿದ್ದಾರೆ. ಮೂವರು ಕೂಡ ಇಂದಿನಿಂದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಶ್ರುತಿ, ಕೋಮಲ್, ಸಾಧು ಕೋಕಿಲಾ ಈ ಕಾರ್ಯಕ್ರಮದ ಜಡ್ಜ್ ಆಗಿದ್ದಾರೆ.
ಡ್ರೋನ್ ಪ್ರತಾಪ್ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಹಲವಾರು ರೀತಿಯಲ್ಲಿ ಅವರ ಮೇಲೆ ಆರೋಪ ಮಾಡಲಾಗಿತ್ತು. ಡಾ.ಪ್ರಯಾಗ್ ಮಾನನಷ್ಟ ದಾವೆ ಹೂಡಿದ್ದರೆ, ಸಾರಂಗ ಎನ್ನುವವರು ಹಣಕಾಸಿನ ವಿಷಯದಲ್ಲಿ ತಮಗೆ ಮೋಸವಾಗಿದೆ ಎಂದು ಆರೋಪ ಮಾಡಿದ್ದರು. ಈಗ ಎಲ್ಲದಕ್ಕೂ ಪ್ರತಾಪ್ ಉತ್ತರ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಪ್ರತಾಪ್, ಕೆಲವು ವಿಷಯಗಳ ಬಗ್ಗೆ ಮಾತನಾಡಬಾರದು. ಸಕಾರಾತ್ಮಕ ವಿಷಯಗಳ ಬಗ್ಗೆ ಮಾತನಾಡೋಣ. ಸಾರಂಗ ಅವರ ಆರೋಪದ ಬಗ್ಗೆ ಶೀಘ್ರದಲ್ಲೇ ನಾವು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ ಪ್ರತಾಪ್.
ಬಿಗ್ ಬಾಸ್ ಫಿನಾಲೆ ಹಂತಕ್ಕೆ ತಲುಪುತ್ತಿದ್ದಂತೆಯೇ ಡಾ.ಪ್ರಯಾಗ್ ಎನ್ನುವವರು ಡ್ರೋನ್ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದರು. ಇದಾದ ಕೆಲವು ದಿನಗಳ ನಂತರ ತಮಗೆ ಡ್ರೋನ್ ಪ್ರತಾಪ್ ಲಕ್ಷ ಲಕ್ಷ ದೋಖಾ ಮಾಡಿದ್ದಾರೆ ಎಂದು ಸಾರಂಗ ಎನ್ನುವವರು ಆರೋಪ ಮಾಡಿದ್ದರು.
ಬಿಗ್ ಬಾಸ್ ಫಿನಾಲೆ ಹಂತಕ್ಕೆ ತಲುಪುತ್ತಿದ್ದಂತೆಯೇ ಡಾ.ಪ್ರಯಾಗ್ ಎನ್ನುವವರು ಡ್ರೋನ್ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದರು. ಇದಾದ ಕೆಲವು ದಿನಗಳ ನಂತರ ತಮಗೆ ಡ್ರೋನ್ ಪ್ರತಾಪ್ ಲಕ್ಷ ಲಕ್ಷ ದೋಖಾ ಮಾಡಿದ್ದಾರೆ ಎಂದು ಸಾರಂಗ ಎನ್ನುವವರು ಆರೋಪ ಮಾಡಿದ್ದರು.
#Gicchigiligili #Droneprathap #bigboss