BJP-JDS ನವರು ಮಂಡ್ಯಕ್ಕೆ ಬೆಂಕಿ ಹಚ್ಚೋ ಪ್ರಯತ್ನ ಮಾಡ್ತಿದ್ದಾರೆ. ಆದರೆ ಮಂಡ್ಯದಲ್ಲಿ ಬೆಂಕಿ ಹಚ್ಚೋಕೆ ಸಾಧ್ಯವಿಲ್ಲ ಅಂತ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ತಿರುಗೇಟು ನೀಡಿದ್ದಾರೆ.
ನಾವು ಹಿಂದೂ ವಿರೋಧಿ ಅಲ್ಲ, ಯಾವುದೇ ಧ್ವಜದ ವಿರೋಧಿಗಳೂ ಅಲ್ಲ. ಪಂಚಾಯತಿಯಲ್ಲಿ ರಾಷ್ಟ್ರ ಧ್ವಜ, ನಾಡ ಧ್ವಜಕ್ಕೆ ಅನುಮತಿ ಕೊಟ್ಟಿದ್ದರು, ಆದ್ರೆ ಬೇರೆ ಧ್ವಜ ಹಾರಿಸಿದ್ದಾರೆ. ಪಂಚಾಯತಿಯಲ್ಲಿ ನಿರ್ಣಯವನ್ನ ವಜಾ ಮಾಡಿದ್ದಾರೆ. ಜ.26ರಂದು ರಾಷ್ಟ್ರಧ್ವಜ ಹಾರಿಸಿ ಸಂಜೆ ಇಳಿಸಿದ್ದಾರೆ. ಮಂಡ್ಯದಲ್ಲಿ ಅನೇಕ ಜನರು ಶಾಂತಿ ಹಾಳುಮಾಡೋಕೆ ಬರೋದು ಬೇಡ, ಮಂಡ್ಯದ ನೆಮ್ಮದಿ ಹಾಳು ಮಾಡಬೇಡಿ ಅಂತ ಕೇಳಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಬಿಜೆಪಿ-ಜೆಡಿಎಸ್ ಅವರು ಜನರನ್ನ ಪ್ರವೋಕ್ ಮಾಡ್ತಿದ್ದಾರೆ. ಕುಮಾರಸ್ವಾಮಿ ಮತ್ತು ಅಶೋಕ್ ತೀಟೆ ಮಾಡೋಕೆ ಹೋಗ್ತಿದ್ದಾರೆ. ಮಂಡ್ಯದಲ್ಲಿ ಇದು ನಡೆಯಲ್ಲ. ಬಂದ್ ಬೇಡ ಅಂತ ಜನರೇ ಮನವಿ ಮಾಡಿದ್ದಾರೆ. ಮಂಡ್ಯಕ್ಕೆ ಬೆಂಕಿ ಹಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಅಂತ ಕುಮಾರಸ್ವಾಮಿ, ಅಶೋಕ್ ವಿರುದ್ಧ ಕಿಡಿಕಾರಿದ್ದಾರೆ.
#Cheluraayaswamy #Bjp #Jds #congress #mandyapolitics #RAshok #Hdkumaraswamy