• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ದಟ್ಟ ಕಾನನದ ಮಧ್ಯೆ ʻಕಪ್ಪು ಬಿಳುಪಿನ ನಡುವೆʼ: ಬರುತ್ತಿದೆ ಕನ್ನಡದ ಮತ್ತೊಂದು ಹಾರಾರ್ ಚಿತ್ರ…

Pratidhvani by Pratidhvani
February 8, 2024
in ಸಿನಿಮಾ
0
ದಟ್ಟ ಕಾನನದ ಮಧ್ಯೆ ʻಕಪ್ಪು ಬಿಳುಪಿನ ನಡುವೆʼ: ಬರುತ್ತಿದೆ ಕನ್ನಡದ ಮತ್ತೊಂದು ಹಾರಾರ್ ಚಿತ್ರ…
Share on WhatsAppShare on FacebookShare on Telegram

ಇತ್ತೀಚಿನ ದಿನಗಳಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಪ್ರಯೋಗಗಳ ಚಿತ್ರಗಳು ಸಾಲು ಸಾಲಾಗಿ ಬರುತ್ತಿವೆ. ಹಿರಿಯ ಕಲಾವಿದರ ನಡುವೆಯೂ ಹೊಸಬರ ಚಿತ್ರಗಳು ಸಹ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಒಂದಿಲ್ಲೊಂದು ಹೊಸ ಪ್ರಯೋಗಗಳ ಚಿತ್ರಗಳ ಸಾಲಿಗೆ ಇದೀಗ ಮತ್ತೊಂದು ಚಿತ್ರ ಸೇರ್ಪಡೆಯಾಗಲು ಸಜ್ಜಾಗಿದೆ. ಕನ್ನಡದಲ್ಲಿ ಹೊಸ ಪ್ರಯತ್ನಗಳಿಗೆ ಕನ್ನಡಿಗರು ಬೆಂಬಲ ನೀಡುತ್ತಾ ಬಂದಿದ್ದಾರೆ. ಅದೇ ರೀತಿ ಹೊಸ ಹಾಗೂ ವಿಭಿನ್ನ ಕಥೆಯ ಹಾರಾರ್ ಚಿತ್ರ “ಕಪ್ಪು ಬಿಳುಪಿನ ನಡುವೆ”. ವೃತ್ತಿಯಲ್ಲಿ ಪಾರಂಪರಿಕ ಆಯುರ್ವೇದ ವೈದ್ಯರಾಗಿರುವ ಧರ್ಮೇಂದ್ರ ಅವರು ನಿರ್ಮಿಸಿರುವ ಹಾಗೂ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ವಸಂತ್ ವಿಷ್ಣು ಮೊದಲ ಬಾರಿಗೆ ನಿರ್ದೇಶಿಸಿ, ನಾಯಕರಾಗೂ ನಟಿಸಿರುವ ಈ ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚಿಗೆ ನಡೆಯಿತು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.

ADVERTISEMENT

ನಿರ್ದೇಶಕನಾಗಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಹಾಗೂ ನಾಯಕ ವಸಂತ್ ವಿಷ್ಣು, ನಾನು ಈ ಹಿಂದೆ ನಾಲ್ಕು ಚಿತ್ರಗಳಲ್ಲಿ ಪ್ರಮುಖಪಾತ್ರದಲ್ಲಿ ನಟಿಸಿದ್ದೇನೆ. ನಿರ್ದೇಶನ ವಿಭಾಗದಲ್ಲೂ ಕಾರ್ಯ ನಿರ್ವಹಿಸಿದ್ದೇನೆ. ಸ್ವತಂತ್ರವಾಗಿ ನಿರ್ದೇಶಿಸಿರುವ ಪ್ರಥಮಚಿತ್ರವಿದು. “ಕಪ್ಪು ಬಿಳುಪಿನ ನಡುವೆ” ಚಿತ್ರದ ಕುರಿತು ಹೇಳಬೇಕೆಂದರೆ, “ಕಪ್ಪು ಬಿಳುಪನ್ನು” ಕತ್ತಲು, ಬೆಳುಕಿಗೆ ಹೋಲಿಸಬಹುದು. ಪಾಸಿಟಿವ್ ಹಾಗೂ ನೆಗಟಿವ್ ಎನರ್ಜಿ ಅಂತಲೂ ಎನ್ನಬಹುದು. ಇದೊಂದು ಯೂಟ್ಯೂಬರ್ ಗಳ ಕುರಿತಾದ ಚಿತ್ರ. ಹಾರಾರ್ ಚಿತ್ರವೂ ಹೌದು. ಹಾಗಂತ ಇಲ್ಲಿ ಭಯ ಪಡಿಸುವ ದೆವ್ವಗಳಿಲ್ಲ. ಹಾರಾರ್ ಜಾನರ್ ನಲ್ಲೇ ಹೊಸಪ್ರಯತ್ನವಿದು. ಇನ್ನೂ ಕನಕಪುರದಿಂದ ಮೂವತ್ತು ಕಿಲೋಮೀಟರ್ ದೂರದ ದಟ್ಟ ಕಾನಾನದಲ್ಲಿ ಚಿತ್ರದ ಹೆಚ್ಚಿನ ಚಿತ್ರೀಕರಣವಾಗಿದೆ. ಕನ್ನಡ ಹಾಗೂ ತಮಿಳಿನಲ್ಲಿ ನಿರ್ಮಾಣವಾಗಿರುವ ಈ ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಸದ್ಯದಲ್ಲೇ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ‌. ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ನನ್ನ ತಂಡಕ್ಕೆ ಧನ್ಯವಾದ ಎಂದರು.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಪ್ರೇಕ್ಷಕರಿಗೆ ಉತ್ತಮ ಸಂದೇಶವಿರುವ ಚಿತ್ರ ಕೊಡುವ ಆಸೆಯಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಧರ್ಮೇಂದ್ರ. ಚಿತ್ರದಲ್ಲಿ ಮೂರು ಹಾಡುಗಳಿದೆ. ಡಾ||ವಿ.ನಾಗೇಂದ್ರಪ್ರಸಾದ್ ಮೂರು ಹಾಡುಗಳನ್ನು ಬರೆದಿದ್ದಾರೆ. “ಕೆ.ಜಿ.ಎಫ್” ಖ್ಯಾತಿಯ ಸಂತೋಷ್ ವೆಂಕಿ ಹಾಗೂ ಶ್ರೀಧರ್ ಕಶ್ಯಪ್ ಹಾಡಿದ್ದಾರೆ. ಜೀ music ಸೌತ್ ಮೂಲಕ ಹಾಡುಗಳು ಬಿಡುಗಡೆಯಾಗಿದೆ ಎಂದರು ಸಂಗೀತ ನಿರ್ದೇಶಕ ರಿಶಾಲ್ ಸಾಯಿ.

ಚಿತ್ರದಲ್ಲಿ ನಟಿಸಿರುವ ಹಿರಿಯ ನಟ ಬಿರಾದಾರ್, ಹಾಸ್ಯ ನಟ ಹರೀಶ್, ನವೀನ್, ಮಾಹೀನ್ ಮತ್ತು ತೇಜಸ್ವಿನಿ ತಮ್ಮ ಪಾತ್ರಗಳ ಕುರಿತು ಮಾಹಿತಿ ನೀಡಿದರು. ಪ್ರಮುಖಪಾತ್ರದಲ್ಲಿ ಖ್ಯಾತ ನಟ ಶರತ್ ಲೋಹಿತಾಶ್ವ ಹಾಗೂ ನಾಯಕಿಯಾಗಿ ವಿದ್ಯಾಶ್ರೀ ಗೌಡ “ಕಪ್ಪು ಬಿಳುಪಿನ ನಡುವೆ” ಚಿತ್ರದಲ್ಲಿ ನಟಿಸಿದ್ದಾರೆ. ಲಿಂಗೇಗೌಡ ಹಾಗೂ ಶಣ್ಮಗಸುಂದರಂ ನಿರ್ಮಾಣದ ಉಸ್ತುವಾರಿ ಈ ಚಿತ್ರಕ್ಕಿದೆ.

#KannadaFilm #Sandalwood #Movie #Horror

Previous Post

ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಗುಜರಾತ್ ವಿಧಾನ ಸಭೆಯಲ್ಲಿ ನಿರ್ಣಯ

Next Post

ಮೋದಿ ʻಶ್ವೇತಪತ್ರ’ಕ್ಕೆ ಪ್ರತಿಯಾಗಿ ಕಾಂಗ್ರೆಸ್ ʻಕಪ್ಪು ಪತ್ರ’ !!

Related Posts

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

by ಪ್ರತಿಧ್ವನಿ
October 10, 2025
0

ರೂಪ ಬಾಯಿ ಹಾಗೂ ಕೃಷ್ಣೋಜಿ ರಾವ್ ಅವರು ನಿರ್ಮಿಸಿರುವ ಹಾಗೂ ಕೃಷ್ಣೋಜಿ ರಾವ್ ಅವರೆ ನಿರ್ದೇಶಿಸಿರುವ ಹಾಗೂ ಮಿಲನ ನಾಗರಾಜ್, ಜಗನ್, ಕಿರಣ್ ರಾಜ್ , ಶಿಲ್ಪ...

Read moreDetails

Maruta Kannada Cinema: ಸೆನ್ಸಾರ್ ಮೆಚ್ಚಿದ “ಮಾರುತ”.

October 8, 2025

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ “ಎಸ್ ವಿ ಆರ್ 50” ಸಮಾರಂಭ

October 7, 2025
ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

October 7, 2025

ಕಾಂತಾರದ ಹಾಡಿನ ಮೂಲಕ ಕನ್ನಡಕ್ಕೆ ಬಂದ ಕೆನಡಾ ಮೂಲದ ಭಾರತೀಯ ಗಾಯಕ ಅಬ್ಬಿವಿ

October 6, 2025
Next Post
ಮೋದಿ ʻಶ್ವೇತಪತ್ರ’ಕ್ಕೆ ಪ್ರತಿಯಾಗಿ ಕಾಂಗ್ರೆಸ್ ʻಕಪ್ಪು ಪತ್ರ’ !!

ಮೋದಿ ʻಶ್ವೇತಪತ್ರ'ಕ್ಕೆ ಪ್ರತಿಯಾಗಿ ಕಾಂಗ್ರೆಸ್ ʻಕಪ್ಪು ಪತ್ರ' !!

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada