ನವದೆಹಲಿ (NewDelhi): ಕಾಂಗ್ರೆಸ್ ನೇತೃತ್ವದ INDI ಮಿತ್ರಕೂಟ ಅಧಿಕಾರಕ್ಕೆ ಬಂದರೆ ರೈತರಿಗೆ ಬೆಂಬಲ ಬೆಲೆ ಘೋಷಣೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.
ದೆಹಲಿಯಲ್ಲಿ ಬೆಂಬಲ ಬೆಲೆಗೆ ಆಗ್ರಹಿಸಿ ಮತ್ತೆ ರೈತರು ಬೃಹತ್ ಪ್ರತಿಭಟನೆ ಕೈಗೊಂಡಿದ್ದರೆ ಇತ್ತ ರಾಹುಲ್ ಗಾಂಧಿ ಈ ಘೋಷಣೆ ಮಾಡಿದ್ದಾರೆ.
ಭಾರತ್ ಜೋಡೋ ನ್ಯಾಯ್ ಯಾತ್ರೆ ವೇಳೆ ದೆಹಲಿಯಲ್ಲಿನ ರೈತರ ಪ್ರತಿಭಟನೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election) ವಿರೋಧ ಪಕ್ಷದ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಖಾತ್ರಿಪಡಿಸುವ ಕಾನೂನನ್ನು I.N.D.I.A ಬ್ಲಾಕ್ ತರಲಿದೆ ಎಂದು ಹೇಳಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ದೇಶಾದ್ಯಂತ ರೈತರ ಬಹುಕಾಲದ ಬೇಡಿಕೆಯಾಗಿದೆ. ವಿವಿಧ ಕೃಷಿ ಉತ್ಪನ್ನಗಳಿಗೆ ಎಂಎಸ್ಪಿಯನ್ನು ರಕ್ಷಿಸುವ ಕಾನೂನನ್ನು ಜಾರಿಗೊಳಿಸುವ ಭರವಸೆಯು ಕಾಂಗ್ರೆಸ್ ನಾಯಕತ್ವದಿಂದ ನಿರ್ಣಾಯಕ ಭರವಸೆಯಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಐತಿಹಾಸಿಕ ಪ್ರತಿಜ್ಞೆ ತೆಗೆದುಕೊಂಡಿದ್ದು, ಸ್ವಾಮಿನಾಥನ್ ಸಮಿತಿ ವರದಿ ಪ್ರಕಾರ ಎಂಎಸ್ಪಿ ಕಾನೂನು ರೂಪಿಸುವ ಮೂಲಕ ರೈತರಿಗೆ ನ್ಯಾಯಯುತ ಬೆಲೆಯನ್ನು ಖಾತರಿಪಡಿಸುತ್ತೇವೆ. ಇದರಿಂದ 15 ಕೋಟಿ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
#MSP #RahulGandhi #farmers #farmersprotest