ಬೆಂಗಳೂರು (Bengaluru): ರಾಜ್ಯದಲ್ಲಿ ನಡೆಯುತ್ತಿರುವ ಬಜೆಟ್ (Budget) ಅಧಿವೇಶನದ ಹಿನ್ನೆಲೆಯಲ್ಲಿ, ಇಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯುತ್ತಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯರ (siddaramaiah) ನೇತೃತ್ವದಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (dkshivakumar), ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೇವಾಲ (randeep singh Surjewala), ಸಚಿವರಾದ ಡಾ.ಜಿ.ಪರಮೇಶ್ವರ್ (gparmeshwar), ಸತೀಶ್ ಜಾರಕಿಹೊಳಿ (satishjarkiholi), ಡಾ.ಹೆಚ್.ಸಿ. ಮಹದೇವಪ್ಪ (hcmahadevappa), ಡಾ.ಎಂ.ಸಿ. ಸುಧಾಕರ್ (mcsudhakar), ಪ್ರಿಯಾಂಕ್ ಖರ್ಗೆ (priyank kharge) ಸೇರಿದಂತೆ ಎಲ್ಲಾ ನಾಯಕರು ಉಪಸ್ಥಿತರಿದ್ದರು.

#bengaluru #meeting






