ಶಿವಮೊಗ್ಗ (Shivamogga) : ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜೂಗೌಡ (ನರಸಿಂಹ ನಾಯಕ್) ಅವರೇ ಅಭ್ಯರ್ಥಿ ಎಂದು ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ (B Y Vijayendra) ಅವರು ಘೋಷಿಸಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದ ಕಾರ್ಯಕ್ರಮ ಮಾತನಾಡಿದ ಅವರು, ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದಿನ 6 ತಿಂಗಳೊಳಗೆ ಸುರಪುರ ಕ್ಷೇತ್ರದಲ್ಲಿ ಉಪಚುನಾವಣೆ ನಿಗದಿಯಾಗಲಿದ್ದು, ರಾಜೂಗೌಡ ಅವರೇ ಬಿಜೆಪಿ ಅಭ್ಯರ್ಥಿಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುರಪುರ ಕ್ಷೇತ್ರದ ಮಾಜಿ ಶಾಸಕ ರಾಜೂಗೌಡ ಅವರಿಗೆ, ನೀವೇ ಅಭ್ಯರ್ಥಿ ಅನುಮಾನವೇ ಬೇಡ. ಕ್ಷೇತ್ರದಲ್ಲಿ ಓಡಾಟ ಮಾಡಿ. ಉಪ-ಚುನಾವಣೆಯಲ್ಲಿ ಆಯ್ಕೆಯಾಗಿ ಮತ್ತೊಮ್ಮೆ ವಿಧಾನಸಭೆಗೆ ಬನ್ನಿ ಎಂದಿದ್ದಾರೆ.
ಕಳೆದ 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ರಾಜೂಗೌಡ ಅವರು ಕಾಂಗ್ರೆಸ್ನ ರಾಜಾ ವೆಂಕಟಪ್ಪ ನಾಯಕ್ ವಿರುದ್ಧ ಪರಾಭವಗೊಂಡಿದ್ದರು.
#Karnataka #shivamogga #byvijayendra #bjp #rajugowda #surapura #byelection






