ಬೆಂಗಳೂರು (Bengaluru): ಕನ್ನಡ (Kannada) ನಾಮಫಲಕ ಅಳವಡಿಕೆಗೆ ರಾಜ್ಯ ಸರ್ಕಾರ ಎರಡು ವಾರ ಗಡುವು ವಿಸ್ತರಿಸಿದೆ.
ಬೆಂಗಳೂರಿನಲ್ಲಿ ಹೋಟೆಲ್, ಅಂಗಡಿ ಸೇರಿದಂತೆ ಎಲ್ಲಾ ವ್ಯಾಪಾರಿ ಕೇಂದ್ರಗಳ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಇರಬೇಕು ಎಂದು ಕಡ್ಡಾಯಗೊಳಿಸಲಾಗಿದ್ದು, ನಿಯಮಬದ್ಧ ಫಲಕ ಅಳವಡಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಎರಡು ವಾರಗಳವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DKShivakumar) ಅವರು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದಿದ್ದಾರೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದು ಹೇಳಿದ್ದಾರೆ.
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವು ಗುರುವಾರ ಅಂತ್ಯವಾಗಿದ್ದು, ಈಗ ಗಡುವು ವಿಸ್ತರಿಸಲಾಗಿದೆ. ಎರಡು ವಾರಗಳ ನಂತರ ಆದೇಶ ಪಾಲನೆ ಮಾಡದ ಮಳಿಗೆಗಳ ವ್ಯಾಪಾರ ಪರವಾನಗಿ ರದ್ದುಪಡಿಸಿ, ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ.
#karnataka #bengaluru #kannada #kannadanameplate #dkshivakumar