ಕೋಲಾರ (Kolar): ಲೋಕಸಭಾ ಚುನಾವಣೆಯಲ್ಲಿ (Loksabha Election)ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumarswamy) ಅವರ ಸ್ಪರ್ಧೆಗೆ ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರದಿಂದ ಒತ್ತಾಯ ಕೇಳಿ ಬರುತ್ತಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಅವರು, ಕಾರ್ಯಕರ್ತರು, ಜನರು ಪ್ರೀತಿಯಿಂದ ಅವರ ಭಾವನೆಯನ್ನು ವ್ಯಕ್ತಪಡಿಸುತ್ತಿರುವುದು ಸತ್ಯ ಎಂದರು.

ರಾಜ್ಯ ಬಿಟ್ಟು ದೆಹಲಿಗೆ ಹೋಗಬೇಕೇ ಎಂಬ ವಿಚಾರವಾಗಿ ಅವರು ಯೋಚಿಸುತ್ತಿದ್ದಾರೆ. ರಾಷ್ಟ್ರೀಯ ನಾಯಕರ ಸಲಹೆ, ನಿರ್ದೇಶನ ಹಾಗೂ ಪಕ್ಷದ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಂಡ್ಯ, ಕೋಲಾರ, ಹಾಸನ, ತುಮಕೂರು ಸೇರಿದಂತೆ ಹಳೆ ಮೈಸೂರು ಪ್ರಾಂತ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅತಿ ಹೆಚ್ಚು ಮತ ಪಡೆದಿದೆ. ಹೀಗಾಗಿ ಪಕ್ಷದ ವರಿಷ್ಠರು ಈ ಕ್ಷೇತ್ರದ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದಾರೆ. ಮೈತ್ರಿಕೂಟದಲ್ಲಿ ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.
ಕೆಲವೇ ದಿನಗಳಲ್ಲಿ ಕುಮಾರಸ್ವಾಮಿ ಅವರು ಹಾಗೂ ನಾನು ದೆಹಲಿಗೆ ತೆರಳಲಿದ್ದು, ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದೇವೆ. ಮುಂದೆ ಜೆಡಿಎಸ್ ಹಾಗೂ ಬಿಜೆಪಿಯ ಜಂಟಿ ಸಭೆಗಳು ನಡೆಯಲಿವೆ ಎಂದರು.
#karnataka #kolar #mpelection #nikhilkumarswamy #kumarswamy #jds #bjp