ನವದೆಹಲಿ (Newdelhi): ಲೋಕಸಭಾ ಚುನಾವಣೆಗೆ (Loksabha Election) ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಹಲವು ತಂತ್ರಗಳನ್ನು ರೂಪಿಸುತ್ತಿರುವ ಬಿಜೆಪಿ, ಪ್ರಬಲ ಲಿಂಗಾಯತ ಸಮುದಾಯದಿಂದ ಇವರಿಬ್ಬರು ಕಣಕ್ಕಿಳಿಸುವ ಸಾಧ್ಯತೆ ಇದೆ.
ಈ ಕುರಿತು ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಸುಳಿವು ನೀಡಿದ್ದಾರೆ. ಬೊಮ್ಮಾಯಿ, ಶೆಟ್ಟರ್ ಸೇರಿದಂತೆ ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಅವರೊಂದಿಗೆ ಚರ್ಚೆ ನಡೆದಿದೆ. ಆದರೆ ಇನ್ನೂ ಅಂತಿಮವಾಗಿಲ್ಲ ಎಂದಿದ್ದಾರೆ.
ನಿನ್ನೆ ಅಮಿತ್ ಶಾ, ಜೆಪಿ ನಡ್ಡಾ ಮತ್ತು ನಾನು ಕರ್ನಾಟಕದ ಎಲ್ಲಾ ಲೋಕಸಭಾ ಕ್ಷೇತ್ರಗಳ ಕುರಿತು ಚರ್ಚಿಸಿದ್ದೇವೆ. ಆದರೆ, ಇಲ್ಲಿಯವರೆಗೆ ಯಾವುದನ್ನೂ ಅಂತಿಮಗೊಳಿಸಿಲ್ಲ. ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿದ ನಂತರ ಅವರು ಕೆಲವು ತೀರ್ಮಾನಕ್ಕೆ ಬರುತ್ತಾರೆ. ಮುಂದಿನ 2-3 ದಿನಗಳಲ್ಲಿ ಎಲ್ಲವನ್ನೂ ಅಂತಿಮಗೊಳಿಸಲಾಗುವುದು ಎಂದು ಮಾಜಿ ಸಿಎಂ ಹೇಳಿದ್ದಾರೆ.
ಬಿಜೆಪಿಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿರುವ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ಗೆ ಎರಡು-ಮೂರು ಸ್ಥಾನಗಳನ್ನು ನೀಡಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ರಾಷ್ಟ್ರೀಯ ನಾಯಕತ್ವ ಸೀಟು ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.
ದೇಶಾದ್ಯಂತ ಒಟ್ಟು 543 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ ಈಗಾಗಲೇ 195 ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
#newdelhi #loksabhaelection #bsyediyurappa #basavarajbommai #jagdishshettar #bjp #meeting #karnataka







