ರಾಜ್ಯದ ಗಮನ ಸೆಳೆದಿರುವ ಮೈಸೂರು-ಕೊಡಗು(Mysore-Kodagu) ಲೋಕಸಭಾ(Loka Saba) ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಸಂಸದ ಪ್ರತಾಪ್ ಸಿಂಹ(PrathapSimha) ಬದಲಿಗೆ ರಾಜವಂಶಸ್ಥ ಯದುವೀರ್ ಒಡೆಯರ್(Yaduveer) ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.
ಈ ಎಲ್ಲ ಬೆಳವಣಿಗೆಗಳ ನಡುವೆಯೇ ರಾಜವಂಶಸ್ಥ ಯದುವೀರ್ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿಕೊಡುವ ಕುರಿತಂತೆ ಸಾರ್ವಜನಿಕ ವಲಯದಲ್ಲಿ ದೊಡ್ಡಮಟ್ಟದ ಚರ್ಚೆ ನಡೆಯುತ್ತಿದೆ. ಯದುವೀರ್ ಒಡೆಯರ್ ಅವರು ಅವರು ಚುನಾವಣೆಗೆ ಸ್ಪರ್ಧೆ ಮಾಡುವ ವಿಷಯದ ಕುರಿತಂತೆ ಪ್ರಮುಖವಾಗಿ ಸೋಶಿಯಲ್ ಮೀಡಿಯಾ(Social Media)ದಲ್ಲಿ ಚರ್ಚೆ ನಡೆಯುತ್ತಿದೆ.

ರಾಜವಂಶಸ್ಥ ಯದುವೀರ್ ಒಡೆಯರ್ ಬಿಜೆಪಿ ಅಭ್ಯರ್ಥಿ ಆಗುತ್ತಾರೆ ಎಂಬ ಸಂಗತಿ ಹೊರಬೀಳುತ್ತಿದ್ದಂತೆ ಹಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಕೂಡ ಆರಂಭಿಸಿದ್ದಾರೆ. ಯದುವೀರ್ ಒಡೆಯರ್ ಅವರು ರಾಜಕೀಯಕ್ಕೆ ಬರದಂತೆ ಪೋಸ್ಟರ್ ಅಭಿಯಾನ ಆರಂಭಿಸಿದ್ದು, “ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ” ಎಂದು ಮನವಿ ಮಾಡಿದ್ದಾರೆ.
#MysoreKodagu #Yaduveer #OnlineCampaing #MPElection #BJPKarnataka





