• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದಕ್ಷಿಣ ಕನ್ನಡ ಗೆಲ್ಲಲು ಪುತ್ತಿಲ ಪರಿವಾರ ಪೀಸ್‌ ಪೀಸ್‌..

Krishna Mani by Krishna Mani
March 13, 2025
in Top Story, ಕರ್ನಾಟಕ, ರಾಜಕೀಯ
0
ದಕ್ಷಿಣ ಕನ್ನಡ ಗೆಲ್ಲಲು ಪುತ್ತಿಲ ಪರಿವಾರ ಪೀಸ್‌ ಪೀಸ್‌..
Share on WhatsAppShare on FacebookShare on Telegram

ADVERTISEMENT

-ಕೃಷ್ಣಮಣಿ

ದಕ್ಷಿಣ ಕನ್ನಡದಲ್ಲಿ ಬಿಜೆಪಿ ಗೆಲುವು ಸಾಧಿಸುವ ಬಗ್ಗೆ ಬಿಜೆಪಿ ನಾಯಕರು ಆತ್ಮವಿಶ್ವಾಸದಿಂದ ಹೇಳುವುದು ನಿಶ್ಚಿತ. ಆದರೆ ಕಳೆದ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಎದುರಾಳಿಯಾಗಿ ಸೋಲಿಗೆ ಕಾರಣ ಆಗಿದ್ದು ಅರುಣ್‌ ಪುತ್ತಿಲ ಎಂಬ ಸಂಘಪರಿವಾರದ ನಾಯಕ. ಇದೀಗ ಲೋಕಸಭಾ ಚುನಾವಣೆಗೂ (MP ELECTION) ಅರುಣ್‌ ಪುತ್ತಿಲ ಬಿಜೆಪಿ ಟಿಕೆಟ್‌ಗೆ ಆಕಾಂಕ್ಷಿ ಆಗಿದ್ದರು. ಆದರೆ ಬಿಜೆಪಿ ಪಕ್ಷದಿಂದ ಅವಮಾನ ಆಗಿದೆ ಎನ್ನುವ ಕಾರಣಕ್ಕೆ ಪುತ್ತೂರು ಕ್ಷೇತ್ರದ ಬಿಜೆಪಿ (BJP) ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಷರತ್ತು ಇಟ್ಟಿದ್ದರು. ಆದರೆ ಪುತ್ತಿಲ ಕ್ಷಮೆ ಕೇಳಬೇಕು ಎಂದು ಬಿಜೆಪಿ ನಾಯಕರು ಷರತ್ತು ಹಾಕಿದ್ದು, ಪಕ್ಷ ಸೇರ್ಪಡೆಗೆ ಅಡ್ಡಿಯಾಗಿತ್ತು. ಅದೇ ಕಾರಣದಿಂದ ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕಿಳಿಯುವ ಸವಾಲು ಎಸೆದಿದ್ದರು. ಇದೀಗ ಪುತ್ತಿಲ ಪರಿವಾರ ಒಡೆಯುವ ಕೆಲಸಕ್ಕೆ ಬಿಜೆಪಿ ಕೈ ಹಾಕಿದೆ.

ಪುತ್ತಿಲ ಪರಿವಾರದಲ್ಲಿ ಒಡಕು ಮೂಡಿದ್ದು, ಪರಿವಾರದ ಪ್ರಮುಖ ಮುಖಂಡ ಪುತ್ತಿಲ ಪರಿವಾರದಿಂದ ಹೊರಕ್ಕೆ ಬಂದಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿವಾರದಿಂದ ಹೊರಬಂದ ವಿಚಾರ ಹಂಚಿಕೊಂಡಿರುವ ಮುಖಂಡ ರಾಜಾರಾಮ್ ಭಟ್, ಪುತ್ತಿಲ ಪರಿವಾರದಿಂದ ಹೊರಬಂದಿದ್ದೇನೆ ಎಂದಿದ್ದಾರೆ. ಪುತ್ತಿಲ ಪರಿವಾರದ ಪ್ರಮುಖ ಆಧಾರ ಸ್ತಂಭವಾಗಿದ್ದ ರಾಜಾರಾಮ್ ಭಟ್, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದೆ, ಕಾಯಾ, ವಾಚಾ, ಮನಸಾ, ಪರಿವಾರದ ಪರವಾಗಿ ಕೆಲಸ ಮಾಡಿದ್ದೇನೆ. ಎಲ್ಲಾ ಸಭೆ ಸಮಾರಂಭಗಳಿಗೆ ಸಹಾಯ ಮಾಡಿದ್ದೇನೆ. ರಾಜಕೀಯ ಮಾಡಬೇಕು ಎನ್ನುವ ಉದ್ದೇಶಕ್ಕೆ ನಾನು ಪರಿವಾರಕ್ಕೆ ಬಂದಿಲ್ಲ ಎಂದಿದ್ದಾರೆ.

ಮಾತೃ ಪಕ್ಷ ಬಿಜೆಪಿಯಲ್ಲಿ ವ್ಯವಸ್ಥೆ ಸರಿಯಿಲ್ಲ, ಸರಿಮಾಡಬೇಕು ಎನ್ನುವ ಕಾರಣಕ್ಕೆ ಪರಿವಾರಕ್ಕೆ ಬಂದಿದ್ದೆ. ಆ ಮೂಲಕ ಮತದಾರರಿಗೆ ನ್ಯಾಯ ಸಿಗಬೇಕು ಎಂದು ಪರಿವಾರ ಸಂಘಟನೆ ರಚನೆಯಾಯಿತು. ಅದರಲ್ಲಿ ಎಷ್ಟೋ ಜನರ ಹಿತ್ತಾಳೆ ಬುದ್ಧಿತನ ನಮಗೆ ಕಂಡು ಬಂತು. ದೊಡ್ಡ ನಾಯಕರ ದರಿದ್ರ ಮಾನಸಿಕತೆ ಕಂಡು ಬಂತು. ಆದರೆ ಪರಿವಾರದ ಒಳಗೆ ಇಳಿದ ನಂತರ ನಮಗೆ ಗೊತ್ತಾಯಿತು, ರಾಜಕೀಯ ಇಷ್ಟು ಹೊಲಸಾ ಎಂದು. ನಾನು ಯಾವುದೇ ನನ್ನ ಸ್ವಾರ್ಥ ಲಾಭಲ್ಕಾಗಿ ಈ ವ್ಯವಸ್ಥೆಯೊಳಗೆ ಗುರುತಿಸಿಕೊಂಡವನಲ್ಲ. ಆ ಕಾರಣಕ್ಕೆ ನಾನು ಎಲ್ಲಾ ಸಂಘಟನೆ, ಪರಿವಾರ, ಸಕ್ರೀಯ ರಾಜಕಾರಣದಿಂದ ಸಂಪೂರ್ಣ ನಿವೃತ್ತಿ ಪಡೆಯುತ್ತಿದ್ದೇನೆ. ಇವತ್ತಿನಿಂದ ನಾನು ಸ್ವತಂತ್ರ ಮತದಾರ. ನಾನು ಯಾವ ಪರಿವಾರದ, ಸಂಘಟನೆ ವಕ್ತಾರನಲ್ಲ. ನಾನು ಇನ್ನು ಮುಂದೆ ಪುತ್ತಿಲ ಪರಿವಾರದ ಸದಸ್ಯನಾಗಿರುವುದಿಲ್ಲ ಎಂದಿದ್ದಾರೆ.

ಪುತ್ತಿಲ ಪರಿವಾರದಲ್ಲಿ ರಾಜಕೀಯ ಮಾಡಿದರೂ ಗೆಲುವು ಸಾಧ್ಯವಿಲ್ಲ ಎನ್ನುವುದು ಅರುಣ್‌ ಕುಮಾರ್‌ ಪುತ್ತಿಲಗೂ ಗೊತ್ತಿದೆ. ಆದರೆ ಸಂಘಪರಿವಾರದಲ್ಲಿ ಅಷ್ಟು ವರ್ಷಗಳ ಕಾಲ ನಾನು ಸಂಘಟನೆ ಮಾಡಿಕೊಂಡು ಬಂದರೂ ಟಿಕೆಟ್‌ ನೀಡದ ಬಿಜೆಪಿಗೆ ತಿರುಗೇಟು ಕೊಡುವ ಕೆಲಸಕ್ಕೆ ಮುಂದಾಗಿದ್ದಾರೆ. ಬಿ.ಎಲ್‌ ಸಂತೋಷ್‌ ಮೂಲಕ ಪಕ್ಷಕ್ಕೆ ಸೇರ್ಪಡೆ ಆಗುವ ಪ್ರಯತ್ನ ಮಾಡಿದರು, ಆದರೂ ಪ್ರಯೋಜನ ಆಗಲಿಲ್ಲ. ಈಗ ಪುತ್ತಿಲ ಗೆಲ್ಲದೆ ಇದ್ದರೂ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಭೀತಿಯನ್ನು ಸೃಷ್ಟಿಸಿದ್ದಾರೆ. ಹೀಗಾಗಿ ಪುತ್ತಿಲ ಪರಿವಾರದ ಒಬ್ಬೊಬ್ಬರೇ ಸದಸ್ಯರನ್ನು ಹೊರಕ್ಕೆ ಕಳುಹಿಸುವ ಕೆಲಸ ಮಾಡುತ್ತಿದ್ದು, ಚುನಾವಣೆಯಲ್ಲಿ ಸೋಲಿನ ಭೀತಿ ದೂರ ಮಾಡುವ ಪ್ರಯತ್ನ ಭಾರತೀಯ ಜನತಾ ಪಾರ್ಟಿಯದ್ದು ಎನ್ನಲಾಗ್ತಿದೆ.

ಕೃಷ್ಣಮಣಿ

Previous Post

ಸರ್ಕಾರಿ ಕಾರ್ಯಕ್ರಮದಲ್ಲಿ ಚುನಾವಣಾ ಪ್ರಚಾರ ಆರೋಪ: ಕಾಂಗ್ರೆಸ್‌ ವಿರುದ್ಧ ಬಿಜೆಪಿ ದೂರು

Next Post

ಮೈತ್ರಿ‌ ಧರ್ಮ ಪಾಲಿಸುತ್ತಾರಾ ಸುಮಲತಾ ಅಂಬರೀಶ್?

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post
ಮೈತ್ರಿ‌ ಧರ್ಮ ಪಾಲಿಸುತ್ತಾರಾ ಸುಮಲತಾ ಅಂಬರೀಶ್?

ಮೈತ್ರಿ‌ ಧರ್ಮ ಪಾಲಿಸುತ್ತಾರಾ ಸುಮಲತಾ ಅಂಬರೀಶ್?

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada