• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಾನೇ ಚಿವುಟಿದ ಮಗುವನ್ನು ಸಮಾಧಾನ ಮಾಡುವ ಪ್ರಯತ್ನ.. ಕಾರಣ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
March 22, 2024
in Top Story, ದೇಶ, ರಾಜಕೀಯ, ವಿಶೇಷ
0
ತಾನೇ ಚಿವುಟಿದ ಮಗುವನ್ನು ಸಮಾಧಾನ ಮಾಡುವ ಪ್ರಯತ್ನ.. ಕಾರಣ ಏನು..?
Share on WhatsAppShare on FacebookShare on Telegram

ತಾನೇ ಚಿವುಟಿದ ಮಗುವನ್ನು ಸಮಾಧಾನ ಮಾಡುವ ಪ್ರಯತ್ನ.. ಕಾರಣ ಏನು..?

ADVERTISEMENT

ತುಮಕೂರಿನಲ್ಲಿ ಮಾಜಿ ಸಚಿವ ವಿ ಸೋಮಣ್ಣ ಅಭ್ಯರ್ಥಿ ಆಗುವ ಆಸಕ್ತಿ ತೋರಿಸಿದ್ದರು. ಚುನಾವಣಾ ಕಾವು ಪಡೆಯುವ ಮೊದಲೇ ವಿ ಸೋಮಣ್ಣ ತುಮಕೂರು ಕ್ಷೇತ್ರವನ್ನು ಆಯ್ದುಕೊಂಡಿದ್ದರು. ಹಾಲಿ ಸಂಸದ ಬಸವರಾಜ್​​ ನಿವೃತ್ತರಾಗುವ ಸುಳಿವು ಸಿಕ್ಕ ಕೂಡಲೇ ಹೈಕಮಾಂಡ್​​ನಿಂದ ಅನುಮತಿ ಪಡೆದು ಸುತ್ತಾಡುತ್ತಿದ್ದರು. ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಾ ಅಡ್ಡಾಡುತ್ತಿದ್ದರೆ, ಸೋಮಣ್ಣ ವಿರುದ್ಧ ಮಾಧುಸ್ವಾಮಿಯನ್ನು ಎತ್ತಿಕಟ್ಟುವ ಕೆಲಸವನ್ನು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮಾಡಿದ್ದರು. ಮೊದಲಿಗೆ ಲೋಕಸಭಾ ಚುನಾವಣೆ ಬಗ್ಗೆ ಆಸಕ್ತಿ ತೋರಿಸದ ಮಾಧುಸ್ವಾಮಿ, ಯಡಿಯೂರಪ್ಪ ಹೇಳಿದರು ಅನ್ನೋ ಕಾರಣಕ್ಕೆ ಚುನಾವಣೆಗೆ ನಿಲ್ಲುವ ಮನಸ್ಸು ಮಾಡಿದ್ದರು. ಇದೀಗ ಯಡಿಯೂರಪ್ಪ ಸೋಮಣ್ಣ ಪರವಾಗಿ ಬ್ಯಾಟ್​ ಬೀಸಿದ್ದಾರೆ. ಮಾಧುಸ್ವಾಮಿ ಉಲ್ಟಾ ಹೊಡೆದಿದ್ದಾರೆ.

ನೊಣಂಬ ಸಮುದಾಯ ಬಿಜೆಪಿ ವಿರುದ್ಧ ನಿಲ್ಲುವ ಶಂಕೆ..

ಮಾಧುಸ್ವಾಮಿ ನೊಣಂಬ ಸಮುದಾಯಕ್ಕೆ ಸೇರಿದವರು. ಮಾಧುಸ್ವಾಮಿ ಹೇಳಿರುವ ಪ್ರಕಾರ, ನನಗೆ ಯಡಿಯೂರಪ್ಪನವರೇ ಲೋಕಸಭೆ ಚುನಾವಣೆಗೆ ನಿಲ್ಲಲು ಸೂಚನೆ ಕೊಟ್ಟಿದ್ದರು. ಎರಡ್ಮೂರು ಬಾರಿ ನಾನು ನಿರಾಕರಿಸಿದಾಗಲೂ ಒತ್ತಾಯ ಮಾಡಿ ಚುನಾವಣೆ ಮಾಡಲು ಹೇಳಿದ್ದರು. ನಾನು ಯಡಿಯೂರಪ್ಪರನ್ನ ಬೆಂಬಲಿಸಿ ಜೆಡಿಯು ಬಿಟ್ಟು ಬಿಜೆಪಿಗೆ ಬಂದವನು. ನಾನು ಈಗಲೂ ಹೇಳ್ತಿದ್ದೇನೆ. ಯಡಿಯೂರಪ್ಪ ಹೇಳಿದಕ್ಕೆ ನಾನು ಲೋಕಸಭಾ ಚುನಾವಣೆಗೆ ರೆಡಿಯಾಗಿದ್ದೆ. ಯಡಿಯೂರಪ್ಪ ಪಕ್ಷ ಬಿಡೊದು ಬೇಡ ಅಂದಿದ್ದಾರೆ. ನಾನು ಸುಮ್ಮನೆ ಆಗ್ತೀನಿ. ಬಿಜೆಪಿ ಪಕ್ಷ ಬಿಡುವುದ್ದಕ್ಕೆ ಪ್ಲ್ಯಾನ್ ಮಾಡಿದ್ದೆ. ಈ ಬಗ್ಗೆ ಯಡಿಯೂರಪ್ಪಗೂ ಹೇಳಿದ್ದೆ‌. ಅವರು ಬೇಡ ಅಂದಿದ್ದಾರೆ. ಯಡಿಯೂರಪ್ಪ ಜೊತೆಗೆ ಪಕ್ಷದ ವಿಚಾರ ಅಷ್ಟೇ ಚರ್ಚೆ ಮಾಡಿದ್ದೀನಿ. ಸೋಮಣ್ಣರಿಗೆ ಬೆಂಬಲ ನೀಡೋ ಬಗ್ಗೆ ಚರ್ಚೆ ಆಗಿಲ್ಲ ಎಂದಿದ್ದಾರೆ.

ಸೋಮಣ್ಣಗೆ ಬೆಂಬಲ ಕೊಡೋದು ಅವರಿಗೆ ಬಿಟ್ಟದ್ದು..!

ಮಾಧುಸ್ವಾಮಿ ಜೊತೆಗೆ ಮಾತುಕತೆ ನಡೆಸಿದ ಯಡಿಯೂರಪ್ಪ, ಮಾಧುಸ್ವಾಮಿ ಗೊಂದಲದಲ್ಲಿ ಇದ್ದರು ನಾನು ಬಂದು ಮಾತನಾಡಿದ್ದೇನೆ. ಮುಂದಿನ ದಿನಗಳಲ್ಲಿ ಮಾಧುಸ್ವಾಮಿಗೆ ಒಳ್ಳೆಯ ಸ್ಥಾನಮಾನ ಸಿಗಲಿದೆ. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲಾ, ಖುಷಿ ಆಗಿದೆ‌. ನಾವು ಎಲ್ಲಾ ಚರ್ಚೆ ಮಾಡಿದ್ದೇನೆ, ಎಲ್ಲಾ ಸಮಸ್ಯೆ ಬಗೆಹರಿದಿದೆ. ಸೋಮಣ್ಣ ಪರವಾಗಿ ಕೆಲಸ ಮಾಡೋದು ಬಿಡೋದು ಅವರಿಗೆ ಬಿಟ್ಟಿದ್ದು. ಅದ್ಯಾವುದರ ಬಗ್ಗೆಯೂ ಚರ್ಚೆ ಮಾಡಿಲ್ಲ. ಮುಂದೆ‌ ಎಲ್ಲವೂ ಸರಿ ಹೋಗಲಿದೆ ಎಂದಿದ್ದಾರೆ. ಬಹಳ ವರ್ಷಗಳಿಂದ ಪಕ್ಷ ಕಟ್ಟಿದವರು, ಅವರು ಪಕ್ಷದಲ್ಲೆ ಇರಬೇಕು. ಟಿಕೆಟ್ ಕೊಟ್ಟಿದ್ದು ರಾಷ್ಟ್ರೀಯ ನಾಯಕರು, ನಾನು ಟಿಕೆಟ್​ ಕೊಟ್ಟಿಲ್ಲ ಎನ್ನುವ ಮೂಲಕ ಸೋಮಣ್ಣ ಬೆಂಬಲದ ಬಗ್ಗೆ ಚಕಾರ ಇಲ್ಲ ಎಂದಿದ್ದಾರೆ.

ಸೋಮಣ್ಣಗೆ ಯಡಿಯೂರಪ್ಪ ಬೆಂಬಲ ಇಲ್ವಾ..?

ಲೋಕಸಭಾ ಚುನಾವಣೆಯಲ್ಲಿ ಒತ್ತಡ ಹಾಕಬೇಡಿ ಅಂತಾ ಯಡಿಯೂರಪ್ಪಗೆ ಹೇಳಿದ್ದೇನೆ ಎನ್ನುವ ಮೂಲಕ ಸೋಮಣ್ಣ ಪರ ಕೆಲಸ ಮಾಡಲ್ಲ ಎನ್ನುವುದನ್ನು ಮಾಧುಸ್ವಾಮಿ ಕೂಡ ಸ್ಪಷ್ಟಪಡಿಸಿದ್ದಾರೆ. ಸದ್ಯಕ್ಕೆ ಪಕ್ಷ ಬಿಡಲ್ಲ. ಆದರೆ ಸೋಮಣ್ಣಗೆ ಬೆಂಬಲ ನೀಡುವ ಬಗ್ಗೆ ಚಿಂತಿಸಿಲ್ಲ ಅಂತಾನೂ ಸ್ಪಷ್ಟಪಡಿಸಿದ್ದಾರೆ. ಯಡಿಯೂರಪ್ಪ ಕೂಡ ಅದನ್ನೇ ಹೇಳಿದ್ದಾರೆ. ಅಂದರೆ ಯಡಿಯೂರಪ್ಪ ಸೋಮಣ್ಣ ಗೆಲುವಿಗಾಗಿ ಸಂಧಾನ ಮಾಡಲಿಲ್ಲ. ಆದರೆ ನೊಣಂಬ ಸಮುದಾಯ ದಾವಣಗೆರೆ, ಶಿವಮೊಗ್ಗದಲ್ಲೂ ಹೆಚ್ಚಾಗಿದ್ದು, ಮಾಧುಸ್ವಾಮಿ ಮುನಿಸಿಕೊಂಡರೆ ರಾಘವೇಂದ್ರ ಗೆಲುವಿಗೆ ಅಡ್ಡಿಯಾಗುವ ಸಾಧ್ಯತೆಯಿದೆ. ಅದೇ ಕಾರಣಕ್ಕೆ ಮಾಧುಸ್ವಾಮಿ ಜೊತೆಗೆ ಸಂಧಾನ ಮಾಡಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್​ಗೆ ಹೋಗುವುದು ಬೇಡ ಎಂದಿದ್ದಾರೆ. ಅಂದರೆ ಲೋಕಸಭೆಗೆ ನಿಲ್ಲುವುದಕ್ಕೆ ಮಾಧುಸ್ವಾಮಿಯನ್ನೂ ಚಿವುಟಿದ್ದೂ ಯಡಿಯೂರಪ್ಪ, ಸದ್ಯಕ್ಕೆ ಕಾಂಗ್ರೆಸ್​ಗೆ ಹೋಗಬೇಡ ಎಂದು ಸಂಧಾನ ಮಾಡುವ ಮೂಲಕ ಮಗನಿಗೆ ತೊಂದರೆ ಆಗದಂತೆ ಯೋಜನೆ ಮಾಡಿದ್ದೂ ಯಡಿಯೂರಪ್ಪ. ಇನ್ನು ಸೋಮಣ್ಣಗೆ ಬೆಂಬಲಿಸುವುದು ಅವರಿಗೆ ಬಿಟ್ಟ ವಿಚಾರ ಎನ್ನುವ ಮೂಲಕ ಸೋಮಣ್ಣ ಬಗ್ಗೆ ಕೆಂಗಣ್ಣು ಬೀರಿದ್ದೂ ಯಡಿಯೂರಪ್ಪ. ಒಟ್ಟಾರೆ, ಬಿಜೆಪಿಯಲ್ಲಿ ನಾಯಕನಿಂದ ಕಾರ್ಯಕರ್ತನ ತನಕವೂ ಗೊಂದಲ ಇದೆ ಎನ್ನುವುದು ಸಾಬೀತಾದಂತೆ ಆಗಿದೆ

Tags: bjppoliticsloksabhaelection2024madhuswamytumukuruvsomannaYediyurappa
Previous Post

ಕಾಂಗ್ರೆಸ್ ಸರ್ಕಾರದಲ್ಲಿ ‘ಸಂಘಿ’ಗಳಿಗೆ ಮನ್ನಣೆ..? ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆಯನ್ನ ರೆಕಮೆಂಡ್ ಮಾಡಿದವರು ಯಾರು..?

Next Post

ಸದ್ಯಕ್ಕೆ ಪಕ್ಷ ಬಿಡುವ ನಿರ್ಧಾರ ಮಾಡೋದಿಲ್ಲ ! ಚುನಾವಣೆ ನಂತರ ಕಾದುನೋಡುವೆ ! – ಜೆಸಿ ಮಾಧುಸ್ವಾಮಿ

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಸದ್ಯಕ್ಕೆ ಪಕ್ಷ ಬಿಡುವ ನಿರ್ಧಾರ ಮಾಡೋದಿಲ್ಲ ! ಚುನಾವಣೆ ನಂತರ ಕಾದುನೋಡುವೆ ! – ಜೆಸಿ ಮಾಧುಸ್ವಾಮಿ

ಸದ್ಯಕ್ಕೆ ಪಕ್ಷ ಬಿಡುವ ನಿರ್ಧಾರ ಮಾಡೋದಿಲ್ಲ ! ಚುನಾವಣೆ ನಂತರ ಕಾದುನೋಡುವೆ ! - ಜೆಸಿ ಮಾಧುಸ್ವಾಮಿ

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada