• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೋಲಾರ ಕ್ಷೇತ್ರವನ್ನು ಜೆಡಿಎಸ್​​-ಬಿಜೆಪಿ ಮೈತ್ರಿಗೆ ಬಿಟ್ಟು ಕೊಡುತ್ತಾ ಕಾಂಗ್ರೆಸ್..?

ಪ್ರತಿಧ್ವನಿ by ಪ್ರತಿಧ್ವನಿ
March 22, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೋಲಾರ ಕ್ಷೇತ್ರವನ್ನು ಜೆಡಿಎಸ್​​-ಬಿಜೆಪಿ ಮೈತ್ರಿಗೆ ಬಿಟ್ಟು ಕೊಡುತ್ತಾ ಕಾಂಗ್ರೆಸ್..?
Share on WhatsAppShare on FacebookShare on Telegram

ಕೋಲಾರದಲ್ಲಿ ಕಾಂಗ್ರೆಸ್​ ಪ್ರಬಲ ಪಕ್ಷ ಎಂದರೆ ಸುಳ್ಳಲ್ಲ. ಆದರೆ ಲೋಕಸಭಾ ಅಭ್ಯರ್ಥಿ ಆಯ್ಕೆ ವಿಚಾರ ಸೇರಿದಂತೆ ಎಲ್ಲಾ ವಿಚಾರಗಳಲ್ಲೂ ಕಾಂಗ್ರೆಸ್​ ನಾಯಕರು ತೆಗೆದುಕೊಳ್ಳುತ್ತಿರುವ ನಿರ್ಧಾರ, ಹಾಗು ಕೋಲಾರದಲ್ಲಿ ಮನೆ ಮಾಡಿರುವ ಗೊಂದಲ ಹಾಗು ಬಣ ರಾಜಕೀಯವನ್ನು ಬಗೆಹರಿಸದೆ ರಾಜ್ಯ ನಾಯಕತ್ವ ಸೋತಿರುವ ಪರಿಣಾಮ ಈ ಬಾರಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಆಯ್ಕೆಗೆ ರೆಡ್​ ಕಾರ್ಪೆಟ್​ ಹಾಕುತ್ತಿರುವ ಅನುಮಾನ ಮೂಡುತ್ತಿದೆ. ಮೈತ್ರಿ ಪಕ್ಷದ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ತಿಳಿದಿಲ್ಲ, ಆದರೂ ಕಾಂಗ್ರೆಸ್​ ಪಕ್ಷದ ನಡೆಯುತ್ತಿರುವ ಬೆಳವಣಿಗೆ ಸೋಲಿನ ಸುಳಿವು ನೀಡುತ್ತಿದೆ ಎನ್ನಬಹುದಾಗಿದೆ. 

ADVERTISEMENT

ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣ ಕ್ಷೇತ್ರದಲ್ಲಿ ಈಗಾಗಲೇ ಸುತ್ತಾಡಿದ್ದು, ರಾಜಕೀಯ ಮಾಡಲು ಉತ್ಸುಕರಾಗಿದ್ದಾರೆ. ಕೆ.ಆರ್​ ಪುರದಲ್ಲಿ ರಿಜಿಸ್ಟ್ರಾರ್​ ಆಗಿರುವ ಚಿಕ್ಕಪೆದ್ದಣ್ಣ, ಆರ್ಥಿಕವಾಗಿಯೂ ಸದೃಢವಾಗಿದ್ದಾರೆ. ಆದರೆ ರಮೇಶ್​ ಕುಮಾರ್​ ಬಣದ ಒತ್ತಡಕ್ಕೆ ಮಣಿದು ಎಲ್​ ಹನುಮಂತಯ್ಯ ಅವರಿಗೆ ಟಿಕೆಟ್​​ ನೀಡಲಾಗುತ್ತದೆ ಎನ್ನುವ ಮಾಹಿತಿ ಹೊರಬಿದ್ದಿದ್ದು, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಸುಲಭವಾಗಿ ಗೆಲ್ಲುವಂತೆ ಕಾಂಗ್ರೆಸ್​​ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್​ ನಾಯಕರ ನಿರ್ಧಾರ, ಕಾಂಗ್ರೆಸ್​ ಕಾರ್ಯಕರ್ತರನ್ನೇ ಗೊಂದಲಕ್ಕೆ ಈಡು ಮಾಡುತ್ತಿದೆ. 

ಮೈತ್ರಿ ಅಭ್ಯರ್ಥಿಗೆ ಸವಾಲಾಗ್ತಾರಾ ಎಲ್​ ಹನುಮಂತಯ್ಯ​..? 

ಎಲ್​ ಹನುಮಂತಯ್ಯ ದಲಿತ ಸಮುದಾಯಕ್ಕೆ ಸೇರಿದ ಹಿರಿಯ ಸಾಹಿತಿ. ಈಗಿನ ಚುನಾವಣಾ ರಾಜಕಾರಣದಲ್ಲಿ ಆರ್ಥಿಕ ಶಕ್ತಿಯೂ ಲೆಕ್ಕಕ್ಕೆ ಬರಲಿದ್ದು, ಜೆಡಿಎಸ್​-ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸುವ ಸಾಧ್ಯತೆಯಿದೆ ಎನ್ನುವುದು ಕಾಂಗ್ರೆಸ್​ ಕಾರ್ಯಕರ್ತರ ಅಸಮಧಾನಕ್ಕೆ ಕಾರಣವಾಗಿದೆ. ಆದರೆ ಚಿಕ್ಕಪೆದ್ದಣ್ಣ ಹಾಗು ಹನುಮಂತಯ್ಯ ಇಬ್ಬರೂ ವಿದ್ಯಾವಂತರಾಗಿದ್ದು, ಕಾಂಗ್ರೆಸ್​ ಟಿಕೆಟ್​ ಆಯ್ಕೆ ಮೇಲೆ ಕೋಲಾರ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಅಥವಾ ಸೋಲನ್ನು ಒಪ್ಪಿಕೊಳ್ಳುವ ನಿರ್ಧಾರ ಹೊರಬೀಳಲಿದೆ. ಹಣವೊಂದೇ ಮಾನದಂಡ ಆಗುತ್ತಾ ಎಂದರೆ ಇಲ್ಲ ಎನ್ನಬಹುದು. ಆದರೆ ಮುನಿಯಪ್ಪ ಬಣದ ನಿರ್ಧಾರ ಏನಾಗಲಿದೆ ಎನ್ನುವುದು ಗಮನಿಸಬೇಕಾದ ಸಂಗತಿ.

ಸಚಿವ ಕೆ.ಹೆಚ್​ ಮುನಿಯಪ್ಪ ಕೋಲಾರ ಕ್ಷೇತ್ರದಲ್ಲಿ ಅತ್ಯಂತ ಪ್ರಭಾವಶಾಲಿ ನಾಯಕರಾಗಿದ್ದು, ಇದೀಗ ದೇವನಹಳ್ಳಿಯಿಂದ ಸ್ಪರ್ಧೆ ಮಾಡಿ ಗೆದ್ದು ಸಚಿವರಾಗಿದ್ದಾರೆ. ಈಗಿರುವಾಗ ಮುನಿಯಪ್ಪ ಜೊತೆಗೆ ಸಿಎಂ ಸಿದ್ದರಾಮಯ್ಯ ಅರ್ಧ ಗಂಟೆಗೂ ಹೆಚ್ಚುಕಾಲ ಚರ್ಚೆ ಮಾಡಿದ್ದಾರೆ. ಆದರೆ ನಿಮಗೆ ಇಷ್ಟ ಬಂದವರಿಗೆ ಟಿಕೆಟ್​ ಕೊಡುವುದಾರೆ ನಾನು ಕೋಲಾರ ಕ್ಷೇತ್ರಕ್ಕೆ ಹೋಗಲ್ಲ. ದೇವನಹಳ್ಳಿ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸೇರಲಿದ್ದು, ನಾನು ಇಲ್ಲೇ ಇರುತ್ತೇನೆ ಫಲಿತಾಂಶದ ಬಗ್ಗೆ ನನ್ನ ಬಳಿ ಏನನ್ನೂ ಕೇಳುವಂತಿಲ್ಲ ಎಂದಿದ್ದಾರೆ ಎನ್ನಲಾಗ್ತಿದೆ. ಅಲ್ಲಿಗೆ ಕಾಂಗ್ರೆಸ್​ ಏನಾದರೂ ರಮೇಶ್​ ಕುಮಾರ್​ ಬಣವನ್ನು ಒಪ್ಪಿಸಿ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್​ ಕೊಡದಿದ್ದರೆ ಮೈತ್ರಿ ಅಭ್ಯರ್ಥಿಯನ್ನು ಲೋಕಸಭೆಗೆ ಕಳುಹಿಸುವುದು ನಿಶ್ಚಿತ ಎನ್ನುವಂತಾಗಿದೆ. 

Tags: BJPCongress PartyKolarmuniyappaRamesh Kumarಬಿಜೆಪಿಸಿದ್ದರಾಮಯ್ಯ
Previous Post

ಕೇಜ್ರಿವಾಲ್ ಈ ಪ್ರಕರಣದ ಕಿಂಗ್ ಪಿನ್ ಎಂದ ED ! ಧಿಡೀರ್ ಅರವಿಂದ್ ಕೇಜರಿವಾಲ್ ಗೆ ಲೋ ಬಿಪಿ !

Next Post

ಅರವಿಂದ್ ಕೇಜ್ರಿವಾಲ್ 7 ದಿನ ಇಡಿ ಕಸ್ಟಡಿಗೆ ! ದೆಹಲಿ ರಾಜಕಾರಣದಲ್ಲಿ ರೋಚಕ ಬೆಳವಣಿಗೆ !

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಅರವಿಂದ್ ಕೇಜ್ರಿವಾಲ್ 7 ದಿನ ಇಡಿ ಕಸ್ಟಡಿಗೆ ! ದೆಹಲಿ ರಾಜಕಾರಣದಲ್ಲಿ ರೋಚಕ ಬೆಳವಣಿಗೆ !

ಅರವಿಂದ್ ಕೇಜ್ರಿವಾಲ್ 7 ದಿನ ಇಡಿ ಕಸ್ಟಡಿಗೆ ! ದೆಹಲಿ ರಾಜಕಾರಣದಲ್ಲಿ ರೋಚಕ ಬೆಳವಣಿಗೆ !

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada