• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕೋಟೆ ನಾಡು ಚಿತ್ರದುರ್ಗದಲ್ಲಿ ‘ಬಂಡಾಯದ ಕಮಲ’ಕ್ಕೆ ಶಾಕ್‌..!!

ಪ್ರತಿಧ್ವನಿ by ಪ್ರತಿಧ್ವನಿ
March 30, 2024
in Uncategorized
0
ಕೋಟೆ ನಾಡು ಚಿತ್ರದುರ್ಗದಲ್ಲಿ ‘ಬಂಡಾಯದ ಕಮಲ’ಕ್ಕೆ ಶಾಕ್‌..!!
Share on WhatsAppShare on FacebookShare on Telegram

ADVERTISEMENT

ಚಿತ್ರದುರ್ಗ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಶಾಸಕ ಚಂದ್ರಪ್ಪ ಪುತ್ರ ರಘು ಚಂದನ್‌‌ಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಬಿಜೆಪಿ ವರಿಷ್ಠರ ವಿರುದ್ದ ರಘು ಚಂದನ್‌ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ SG ಕನ್ವೆನ್ಷನ್ ಹಾಲ್‌ನಲ್ಲಿ ಸ್ವಾಭಿಮಾನಿ ಹೆಸರಲ್ಲಿ ಕಾರ್ಯಕರ್ತರ ಸಭೆ ನಡೆಸಿದ, ರಘು ಚಂದನ್‌ ಬಿಜೆಪಿ ನಾಯಕರ ಮೇಲೆ ಅಸಮಾಧಾನ ಹೊರ ಹಾಕಿದ್ದಾರೆ. ಸಭೆ ಬಳಿಕ ಮಾತನಾಡಿದ ಶಾಸಕ ಎಂ.ಚಂದ್ರಪ್ಪ, 8 ಕ್ಷೇತ್ರಗಳ ಕಾರ್ಯಕರ್ತರು ನಮಗೆ ಬೆಂಬಲ ಕೊಟ್ಟಿದ್ದಾರೆ. ಏಪ್ರಿಲ್ 3ನೇ ತಾರೀಕು ನಾವು ನಾಮಿನೇಷನ್ ಮಾಡೋದು ಪಕ್ಕಾ ಅಂತ ಹೇಳಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಚಿತ್ರದುರ್ಗಕ್ಕೆ ಎಂಟ್ರಿಕೊಟ್ಟ ಕಾರಜೋಳಗೆ ಬೆಂಬಲಿಗರಿಂದ ಬಿಸಿ ಮುಟ್ಟಿದೆ.

ಚಿತ್ರದುರ್ಗ ಟಿಕೆಟ್ ಘೋಷಣೆ ಬಳಿಕ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ. ಚಿತ್ರದುರ್ಗ ನಗರಕ್ಕೆ ಬರುತ್ತಿದ್ದಂತೆ ರಸ್ತೆ ತಡೆದು, ರಘುಚಂದನ್ ಬೆಂಬಲಿತ ಕಾರ್ಯಕರ್ತರು ಗೋವಿಂದ ಕಾರಜೋಳ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗಿದ್ರು. ಈ ವೇಳೆ ಕಾರ್ಯಕರ್ತರು ಜಮಾಯಿಸಿದ್ದನ್ನು ಕಂಡು ಗಾಡಿ ನಿಲ್ಲಿಸದೆ ಗೋವಿಂದ ಕಾರಜೋಳ ಹೆದ್ದಾರಿಯಲ್ಲೇ ಎಸ್ಕೇಪ್ ಆದ್ರು. ನಂತರ ಪೊಲೀಸ್ ಸರ್ಪಗಾವಲಿನಲ್ಲಿ BJP ಕಚೇರಿಗೆ ಕಾರಜೋಳ ಆಗಮಿಸಿದ್ರು. ಅಲ್ಲಿಗೂ ಬಂದ ರಘುಚಂದನ್ ಬೆಂಬಲಿಗರು, ಕಚೇರಿಗೆ ನುಗ್ಗಿ ಗೋ ಬ್ಯಾಕ್ ಕಾರಜೋಳ ಘೋಷಣೆ ಕೂಗಿದ್ರು. ಕೂಡಲೇ ಎಚ್ಚೆತ್ತ ಪೊಲೀಸರು, ಬೆಂಬಲಿಗರನ್ನ ವಶಕ್ಕೆ ಪಡೆದು ಅಲ್ಲಿಂದ ಕರೆದೊಯ್ದರು

ಚಿತ್ರದುರ್ಗಕ್ಕೆ ಶುಕ್ರವಾರ ಸಂಜೆ ಎಂಟ್ರಿ ಕೊಡ್ತಿದ್ದ ಹಾಗೆ BJP ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ಆಕ್ರೋಶ ಹೊರಬಿದ್ದಿದೆ. ಚಿತ್ರದುರ್ಗ ಪ್ರವೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ತೀರ್ಮಾನದಂತೆ ನಾನು ಚಿತ್ರದುರ್ಗಕ್ಕೆ ಬಂದಿರುವೆ. ಕೋರ್ ಕಮಿಟಿ ಸಭೆಯಲ್ಲಿ ನನ್ನ ಹೆಸರು ಪೈನಲ್ ಆಗಿತ್ತು. ಈ ಎಲ್ಲಾ ಬೆಳವಣಿಗೆ ಕುರಿತು ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಚಿತ್ರದುರ್ಗದಿಂದ ದೆಹಲಿಯವರೆಗೂ ಎಲ್ಲರೂ ಶಿಪ್ಪಾರಸ್ಸು ಮಾಡಿದ್ದಾರೆ. ಯಡಿಯೂರಪ್ಪ ಅವರು ಆ ರೀತಿಯಲ್ಲಿ ಮಾತನಾಡಲ್ಲ.. ಸಂಸತ್ ಸದಸ್ಯ ಎ.ನಾರಾಯಣ ಸ್ವಾಮಿ ನಿಲ್ಲೋದಿಲ್ಲ ಎಂದಿದ್ದರು. ಹಾಗಾಗಿ ನಾನು ಸ್ಪರ್ಧೆ ಮಾಡುವ ಅನಿವಾರ್ಯ ಬಂದಿದೆ ಎಂದಿದ್ದಾರೆ. ಇನ್ನು ಇದೇ ವೇಳೆ ಮೊಟ್ಟೆ, ಕಪ್ಪು ಬಟ್ಟೆಯನ್ನು ರಘು ಚಂದನ್‌ ಆಪ್ತರ ಕಾರಿನಲ್ಲಿ ವಶಕ್ಕೆ ಪಡೆಯಲಾಗಿದೆ.

ಎಲ್ಲಾ ಹಿರಿಯರು, ಮಾಜಿ ಶಾಸಕರು, ಕೋರ್ ಕಮಿಟಿ ಸದಸ್ಯರನ್ನ ಕರೆದು ಕೇಳಿದ್ದಾರೆ. ರಾಜ್ಯ ಚುನಾವಣಾ ಸಮಿತಿ ನನ್ನ ಹೆಸರು ಶಿಫಾರಸ್ಸು ಮಾಡಿದ್ದರು. ಹೈಕಮಾಂಡ್ ಸೂಚನೆಯನ್ನು ನಾನು ಪಾಲಿಸುತ್ತಿದ್ದೇನೆ. ಪಕ್ಷವನ್ನ ತಾಯಿಯ ಸ್ಥಾನದಲ್ಲಿ ನಾನು ನೋಡಿದವನು. ಪಕ್ಷದ ಆದೇಶ ಧಿಕ್ಕರಿಸುವ ಮನಸ್ಸು ನನಗಿಲ್ಲ. ಪಕ್ಷದ ಎಲ್ಲರೂ ಕೂಡಾ ಚುನಾವಣಾ ಪ್ರಕ್ರಿಯೆ ಆರಂಭ ಮಾಡುತ್ತಾರೆ. ರಾಜ್ಯದ 28 ಸ್ಥಾನವನ್ನೂ ನಾವು ಗೆಲ್ಲುತ್ತೇವೆ. ಬಿಜೆಪಿ ಜೊತೆ ಜೆಡಿಎಸ್ ಕೂಡ ಮೈತ್ರಿ ಆಗಿದೆ. ಹಾಲು – ಜೇನಿನಂತೆ ನಾನು ಕೆಲಸ ಮಾಡುತ್ತೇವೆ. ಎರಡು ಪಕ್ಷದ ನಾಯಕರು ಅಣ್ಣ ತಮ್ಮಂದಿರಂತೆ ಚುನಾವಣೆ ಮಾಡಿ ಎಂದು ದೇವೆಗೌಡರು ಸೂಚಿಸಿದ್ದಾರೆ ಎಂದಿದ್ದಾರೆ.

ಆದ್ರೆ ಟಿಕೆಟ್‌ ವಂಚಿತ ರಘು ಚಂದನ್‌ ಬೆಂಬಲಿಗರು ಕಾರಜೋಳಗೆ ಮೊಟ್ಟೆ ಹೊಡೆದು ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದರು ಎನ್ನುವುದು ಬಯಲಾಗಿದೆ. ಬಿಜೆಪಿ ಅಭ್ಯರ್ಥಿಯಾಗಿರುವ ಗೋವಿಂದ ಕಾರಜೋಳ ಮೇಲೆ ಮೊಟ್ಟೆ ಎಸೆಯಲು ಪ್ರಯತ್ನ ನಡೆದಿದ್ದು, ಕಾರಜೋಳಗೆ ಮುತ್ತಿಗೆ ಹಾಕ್ತಿದ್ದ ಹಾಗೆ ಪೊಲೀಸರು ಅಲರ್ಟ್‌ ಆಗಿದ್ದಾರೆ. ರಘು ಚಂದನ್ ಬೆಂಬಲಿಗರ ಕಾರಲ್ಲಿದ್ದ ಮೊಟ್ಟೆ, ಕಪ್ಪು ಬಾವುಟ ವಶಕ್ಕೆ ಪಡೆದಿದ್ದಾರೆ. ಕಪ್ಪು ಬಾವುಟ ತೋರಿಸಿ ಘೇರಾವ್ ಹಾಕಲು ಪ್ಲಾನ್ ನಡೆದಿತ್ತು ಎನ್ನಲಾಗಿದೆ. ಒಟ್ಟಾರೆ ಕಾಂಗ್ರೆಸ್‌ಗೆ ಕೋಲಾರ ಬಿಸಿ ತುಪ್ಪ ಆಗಿದ್ರೆ, ಅತ್ತ ಬಿಜೆಪಿಗೆ ಚಿತ್ರದುರ್ಗ ಅಗ್ನಿ ಕುಂಡ ಆಗಿದೆ ಅನ್ನಬಹುದು.

ಕೃಷ್ಣಮಣಿ

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಮುಖಂಡನ ದರ್ಪ..!

Next Post

ದೇಶದಲ್ಲಿ ಕಾಂಗ್ರೆಸ್‌ಗೆ ಒಂದು ನ್ಯಾಯ.. BJPಗೆ ಬೇರೊಂದು ನ್ಯಾಯನಾ..? ಖರ್ಗೆ ಪ್ರಶ್ನೆ..

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ದೇಶದಲ್ಲಿ ಕಾಂಗ್ರೆಸ್‌ಗೆ ಒಂದು ನ್ಯಾಯ.. BJPಗೆ ಬೇರೊಂದು ನ್ಯಾಯನಾ..? ಖರ್ಗೆ ಪ್ರಶ್ನೆ..

ದೇಶದಲ್ಲಿ ಕಾಂಗ್ರೆಸ್‌ಗೆ ಒಂದು ನ್ಯಾಯ.. BJPಗೆ ಬೇರೊಂದು ನ್ಯಾಯನಾ..? ಖರ್ಗೆ ಪ್ರಶ್ನೆ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada