ಬೆಂಗಳೂರು ಗ್ರಾಮಾಂತರದ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ಡಾ.ಸಿ.ಎನ್ ಮಂಜುನಾಥ್ ನಾಮಪತ್ರ ಸಲ್ಲಿಸಿದರು.ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬಿಜೆಪಿ ಅಭ್ಯರ್ಥಿ ಅ ಡಾ.ಸಿ.ಎನ್ ಮಂಜುನಾಥ್ ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಡಾ.ಸಿ.ಎನ್ ಮಂಜುನಾಥ್ ಅವರು, ನಂತರ ಮೆರವಣಿಗೆ ಮೂಲಕ ಪಿಡಬ್ಲ್ಯುಡಿ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಸಾಗಿ ಬಳಿಕ ನಾಮಪತ್ರ ಸಲ್ಲಿಸಿದರು
ಡಿಕೆ ಬ್ರದರ್ಸ್ ಟಾರ್ಗೆಟ್..!
ಬಿಜೆಪಿ ಹೈಕಮಾಂಡ್ ನಾಯಕರಿಗೆ ಸುರೇಶ್ ಜತೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡ ಟಾರ್ಗೆಟ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಮೊದಲು ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ.ಇನ್ನು ಡಿ.ಕೆ. ಸುರೇಶ್ ಎದುರು ಡಾ. ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸುವುದರ ಹಿಂದೆ ಮೆಗಾ ಮಾಸ್ಟರ್ ಪ್ಲ್ಯಾನ್ ಇದೆ. ಏಕೆಂದರೆ ಕೇಂದ್ರ ಹೈಕಮಾಂಡ್ ನಾಯಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಲೆನೋವಾಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಡಿಕೆಶಿ ಬ್ರೇಕ್ ಹಾಕಿದ್ದರು. ಒಕ್ಕಲಿಗ ಸಮುದಾಯವನ್ನು ಹಿಡಿತದಲ್ಲಿಟ್ಟುಕೊಳ್ಳಲು ಡಿಕೆ ಬ್ರದರ್ಸ್ ಮುಂದಾಗಿರುವುದು ಬಿಜೆಪಿ ತಲೆನೋವಿಗೆ ಕಾರಣವಾಗಿದೆ.ಒಂದು ವೇಳೆ ಡಿಕೆ ಬ್ರದರ್ಸ್ ಲೆಕ್ಕಾಚಾರಗಳು ಉಲ್ಟಾ ಆಗಿ ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ. ಸುರೇಶ್ ಸೋತರೆ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗುವ ಕನಸು ಭಗ್ನವಾಗುತ್ತದೆ. ಡಿಕೆಶಿ ವರ್ಚಸ್ಸು ಕಳೆದುಕೊಂಡರೆ ರಾಜ್ಯದಲ್ಲಿ ಮುಂದೆ ಬಿಜೆಪಿಗೆ ಹೆಚ್ಚು ಲಾಭವಾಗಲಿದೆ. ಕಾಂಗ್ರೆಸ್ನ ಡಿಕೆಶಿ ಎಂಬ ಬ್ರಹ್ಮಾಸ್ತ್ರವನ್ನು ಈಗಲೇ ಪ್ರತ್ಯಸ್ತ್ರವನ್ನು ಬಿಟ್ಟು ನಾಶ ಮಾಡಲು ಚುನಾವಣಾ ಚಾಣಕ್ಯ ಅಮಿತ್ ಶಾ ರಣತಂತ್ರ ಹೂಡಿದ್ದಾರೆ. ಡಾ. ಮಂಜುನಾಥ್ ವಿದ್ಯಾವಂತ, ಬುದ್ಧಿವಂತ, ಜನರ ಕಷ್ಟಕ್ಕೆ ಸ್ಪಂದಿಸುವ ಹೃದಯವಂತ ಎಂಬ ಟ್ರಂಪ್ ಕಾರ್ಡ್ ಅನ್ನು ಬಳಕೆ ಮಾಡಲು ಬಿಜೆಪಿ ಪ್ಲ್ಯಾನ್ ಮಾಡಿದೆ.