• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

‘ಲೋಕ’ ಎಲೆಕ್ಷನ್ ನಲ್ಲಿ ಕಾಂಗ್ರೆಸ್ 40 ಸ್ಥಾನ ಗೆಲ್ಲೋದಿಲ್ಲ : ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

ಪ್ರತಿಧ್ವನಿ by ಪ್ರತಿಧ್ವನಿ
April 11, 2024
in ಇದೀಗ, ಕರ್ನಾಟಕ, ರಾಜಕೀಯ
0
‘ಲೋಕ’ ಎಲೆಕ್ಷನ್ ನಲ್ಲಿ ಕಾಂಗ್ರೆಸ್ 40 ಸ್ಥಾನ ಗೆಲ್ಲೋದಿಲ್ಲ : ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ
Share on WhatsAppShare on FacebookShare on Telegram

ಕಾಂಗ್ರೆಸ್ 40 ಸ್ಥಾನ ಗೆಲ್ಲುವುದಿಲ್ಲ: ಬಸವರಾಜ ಬೊಮ್ಮಾಯಿ ಭವಿಷ್ಯ

ADVERTISEMENT

ಗದಗ:(ರೋಣ) ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದೇಶ್ಯಾದ್ಯಂತ 40ಸ್ಥಾನ ಗೆಲ್ಲುವುದು ಕಷ್ಟವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರೋಣ ವಿಧಾನಸಭಾ ಕ್ಷೇತ್ರದ ಹಿರೇಹಾಳ, ಶಾಂತಗೇರಿ, ಮುಶಿಗೇರಿ ಹಾಗೂ ಇಟಗಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು. ಭಾರತ ಬದಲಾಗುತ್ತಿದೆ. ಬೇರೆ ದೇಶಗಳಿಗೆ ಪೈಪೋಟಿ ಕೊಟ್ಟು ಬೆಳೆಯುತ್ತಿದೆ. ಕೇವಲ ರಸ್ತೆ, ನೀರು ಕೊಡುವುದಷ್ಟೆ ಅಲ್ಲ. ಮಾಧ್ಯಮ, ಮೊಬೈಲ್ ಮೂಲಕ ಪ್ರತಿಯೊಬ್ಬರ ಕೈಯಲ್ಲಿ ಮಾಹಿತಿ ದೊರೆಯುವುದರಿಂದ ಜಗತ್ತಿನ ಎಲ್ಲ ಮಾಹಿತಿ ದೊರೆಯುವಂತಾಗಿದೆ. ಎಲ್ಲರ ಕೈಗೆ ಮಾಹಿತಿ ತಂತ್ರಜ್ಞಾನ ನೀಡಿದ್ದು ಪ್ರಧಾನಿ ನರೆಂದ್ರ ಮೋದಿಯವರು ಎಂದರು.
ಕಾಂಗ್ರೆಸ್ ನವರು ಗರಿಬಿ ಹಠಾವೊ ಅಂತ ಹೇಳಿದರು. ಆದರೆ ಇದುವರೆಗೂ ಬಡತನ ನಿರ್ಮೂಲನೆ ಆಗಲಿಲ್ಲ. ಕಳೆದ ಹತ್ತು ವರ್ಷದಲ್ಲಿ ಮೋದಿಯವರು 15 ಕೋಟಿ ಜನರನ್ನು ಬಡತನ ರೇಖೆಗಿಂತ ಮೇಲೆ ತಂದಿದ್ದಾರೆ. ರಾಜ್ಯದಲ್ಲಿ 36 ಲಕ್ಷ ಜನರಿಗೆ ಮುದ್ರಾ ಯೋಜನೆ ಅಡಿಯಲ್ಲಿ ಸಾಲ ದೊರೆತಿದೆ. 58 ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ದೊರೆತಿದೆ.12 ಲಕ್ಷ ಗ್ಯಾಸ್ ಸಂಪರ್ಕ ನೀಡಿದ್ದಾರೆ. ಇದೆಲ್ಲವನ್ನು ಗ್ರಾಮೀಣ ಜನರಿಗೆ ತಲುಪಿಸುವ ಕೆಲಸವನ್ಬು ಮೋದಿಯವರು ಮಾಡಿದ್ದಾರೆ. ಮೋದಿಯವರು ಅಕ್ಕಿ ಕೊಡುತ್ತಿದ್ದಾರೆ. ಇವರು ತಮ್ಮದೇ ಭಾಗ್ಯ ಅಂತ ಹೇಳಿಕೊಳ್ಳುತ್ತಿದ್ದಾರೆ ಎಂದರು.ಈಗ ನಡೆದಿರುವ ಸಮೀಕ್ಷೆ ಪ್ರಕಾರ ದೇಶದಲ್ಲಿ ಕಾಂಗ್ರೆಸ್ ಈ ಚುನಾವಣೆಯಲ್ಲಿ 40 ಸ್ಥಾನ ಗೆಲ್ಕುವುದು ಕಷ್ಟವಿದೆ. ಸಮೀಕ್ಷೆ ಪ್ರಕಾರ ಬಿಜೆಪಿ 400 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುತ್ತದೆ. ಕಾಂಗ್ರೆಸ್ 40 ಸ್ಥಾನ ಮಾತ್ರ ಗೆಲ್ಲುತ್ತದೆ ಎಂದು ಸಮೀಕ್ಷೆ ಹೇಳಿದೆ.INDI ಒಕ್ಕೂಟದ 26 ಪಕ್ಷಗಳಲ್ಲಿ ಪಿಎಂ ಆಗುವ ಅರ್ಹತೆ ಇರುವವರು ಯಾರೂ ಇಲ್ಲ. ಮೋದಿಯವರ ಸಮಾನಾದ ನಾಯಕರು ಯಾರೂ ಇಲ್ಲ.‌ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ಎಂದು ಹೆಸರು ಹೆಳಿದರು. ಆದರೆ, ಸಿದ್ದರಾಮಯ್ಯ ರಾಹುಲ್ ಗಾಂಧಿ ಅಂತ ಹೇಳಿದರು. ರಾಹುಲ್ ಗಾಂಧಿ ನಾನು ಪ್ರಧಾನಿ ಆಗುವುದಿಲ್ಲ ಅಂತ ಹೇಳಿದ್ದಾರೆ. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ. ಅದು ರಾಹುಲ್ ಗಾಂಧಿ. ಸವಾಲನ್ನು ಸ್ವೀಕಾರ ಮಾಡಿ ಅದನ್ನು ಗೆಲುವಾಗಿ ಪರಿವರ್ತಿಸುವ ಛಲ ನರೇಂದ್ರ ಮೋದಿಯವರಿಗೆ ಮಾತ್ರ ಇದೆ. ಹೀಗಾಗಿ ಮೋದಿಯವರು ಜನರ ನಾಯಕ ಆಗಿದ್ದಾರೆ ಎಂದು ಹೇಳಿದರು.

Tags: BasavarabommaiBJPRahul Gandhiನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಕೊತ್ವಾಲ್ ರಾಮಚಂದ್ರನ ಶಿಷ್ಯನಿಗೆ ನಾನು ಲೆಕ್ಕಕ್ಕಿಲ್ಲ.. ಜನರೇ ತೀರ್ಮಾನಿಸ್ತಾರೆ : ಡಿಕೆಶಿಗೆ ಹೆಚ್ಡಿಕೆ ಡಿಚ್ಚಿ

Next Post

ನಿರ್ಮಲಾನಂದನಾಥ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ಆಗಿರೋ ಬಗ್ಗೆ ದಾಖಲೆ ಇದೆ : ಡಿಸಿಎಂ ಡಿಕೆಶಿ ಬಾಂಬ್

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ಒಕ್ಕಲಿಗರು ಮಾತ್ರವಲ್ಲ, ಎಲ್ಲಾ ವರ್ಗದ ಜನರು ಕಾಂಗ್ರೆಸ್ ಬೆಂಬಲಿಸುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಿರ್ಮಲಾನಂದನಾಥ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ಆಗಿರೋ ಬಗ್ಗೆ ದಾಖಲೆ ಇದೆ : ಡಿಸಿಎಂ ಡಿಕೆಶಿ ಬಾಂಬ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada