• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಯಶಸ್ಸಿನ ಸಂಭ್ರಮದಲ್ಲಿ “ಯುವ”

ಪ್ರತಿಧ್ವನಿ by ಪ್ರತಿಧ್ವನಿ
April 14, 2024
in ಸಿನಿಮಾ
0
ಯಶಸ್ಸಿನ ಸಂಭ್ರಮದಲ್ಲಿ “ಯುವ”
Share on WhatsAppShare on FacebookShare on Telegram

ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆ .

ADVERTISEMENT

ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

ರಾಜ್ಯದ ಜನತೆ “ಯುವ” ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ ಎಂದು ಮಾತನಾಡಿದ ನಾಯಕ ಯುವ ರಾಜಕುಮಾರ್, ಪ್ರಥಮವಾಗಿ ನಾನು ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

ನನ್ನ ಮಗನ ಮೊದಲ ಚಿತ್ರವನ್ನು ನಿರ್ಮಾಣ ಮಾಡಿದ ಹೊಂಬಾಳೆ ಸಂಸ್ಥೆಗೆ ಮೊದಲು ಧನ್ಯವಾದ ಹೇಳುತ್ತೇನೆ. ನಂತರ ನನ್ನ ಮಗನ ಒಂದು ಬ್ರಾಂಡ್ ಗೆ ಸೀಮಿತ ಮಾಡದೆ ಎಲ್ಲಾ ರೀತಿಯ ನಟನೆಯನ್ನು ಅವನಿಂದ ಎಲ್ಲಾ ರೀತಿಯ ನಟನೆಯನ್ನು ಮಾಡಿಸಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ಧನ್ಯವಾದ ಹೇಳುತ್ತಾ, ಯುವನ ಸಿನಿಮಾ ಹಾದಿ ಈಗಷ್ಟೇ ಆರಂಭವಾಗಿದೆ. ‌ಮುಂದೆ ಬೇರೆಬೇರೆ ಪಾತ್ರಗಳಲ್ಲಿ ಅವನು ನಟಿಸಿ ಜನರಿಂದ ಸೈ ಎನಿಸಿಕೊಳ್ಳಬೇಕು ಎಂದು ರಾಘವೇಂದ್ರ ರಾಜಕುಮಾರ್ ತಿಳಿಸಿದರು.

ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಾಯಕಿ ಸಪ್ತಮಿ ಗೌಡ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಹೇಳಿದರು

ಚಿತ್ರದಲ್ಲಿ ಅಭಿನಯಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರಾಘು ಶಿವಮೊಗ್ಗ ಹಾಗೂ ಛಾಯಾಗ್ರಾಹಕ ಶ್ರೀಶ ಕುದುವಳ್ಳಿ “ಯುವ” ಚಿತ್ರದ ಗೆಲುವನ್ನು ‌ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.

Tags: celebrationvictoryಕನ್ನಡಯುವಯುವರಾಜಕುಮಾರ್ರಾಘವೇಂದ್ರ ರಾಜ್‌ ಕುಮಾರ್ವಿಜಯ್ ಕಿರಗಂದೂರ್ಸಪ್ತಮಿಗೌಡಸಿನಿಮಾಹೊಂಬಾಳೆ
Previous Post

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್‌ ಜಯಂತಿ ಆಚರಣೆ..!

Next Post

ಪ್ರೀತಿಸಿ ಮದುವೆ ಆಗಿದ್ದು ಎಂಟೇ ತಿಂಗಳಿಗೆ ಅಂತ್ಯವಾಗಿದ್ಯಾಕೆ..? ಸಾವು ಹಿಂದಿನ ಸೀಕ್ರೆಟ್‌‌..

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಪ್ರೀತಿಸಿ ಮದುವೆ ಆಗಿದ್ದು ಎಂಟೇ ತಿಂಗಳಿಗೆ ಅಂತ್ಯವಾಗಿದ್ಯಾಕೆ..? ಸಾವು ಹಿಂದಿನ ಸೀಕ್ರೆಟ್‌‌..

ಪ್ರೀತಿಸಿ ಮದುವೆ ಆಗಿದ್ದು ಎಂಟೇ ತಿಂಗಳಿಗೆ ಅಂತ್ಯವಾಗಿದ್ಯಾಕೆ..? ಸಾವು ಹಿಂದಿನ ಸೀಕ್ರೆಟ್‌‌..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada