ಬೆಂಗಳೂರು: ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಸುಳಿವು ಸಿಗುತ್ತಿಲ್ಲ. ಈ ಮಧ್ಯೆ ಭವಾನಿ ರೇವಣ್ಣ ಅವರ ಕಾರು ಚಾಲಕನಿಗೆ ಎಸ್ ಐಟಿ ಸಮನ್ಸ್ ಜಾರಿ ಮಾಡಿದೆ.
![](https://pratidhvani.com/wp-content/uploads/2024/05/HD-Revanna.webp)
ಸಂತ್ರಸ್ತೆಯನ್ನು ಚಾಲಕ ಅಜಿತ್ ಕಾರಿನಲ್ಲಿ ಕರೆದೊಯ್ದಿದ್ದ ಆರೋಪ ಕೇಳಿ ಬಂದಿದೆ. ಹೀಗಾಗಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಎಸ್ ಐಟಿ ಈಗಾಗಲೇ 2 ಬಾರಿ ಸಮನ್ಸ್ ನೀಡಲಾಗಿದೆ. ಆದರೆ, ಅಜಿತ್ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಭವಾನಿ ಅವರಿಗೂ ಸಂಕಷ್ಟ ತಪ್ಪಿದ್ದಲ್ಲ ಎನ್ನಲಾಗುತ್ತಿದೆ.
![](https://pratidhvani.com/wp-content/uploads/2024/05/prajwal-revanna-1-1-1-1024x576.webp)
ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಹೆಸರನ್ನು ಕೂಡ ಉಲ್ಲೇಖಿಸಲಾಗಿದೆ. ಭವಾನಿ ಕರೆದಿದ್ದಾರೆ ಎಂದು ಹೇಳಿಯೇ ಮಹಿಳೆಯನ್ನು ಕರೆಯಲಾಗಿದೆ ಎಂಬ ಆರೋಪವಿದ್ದು, ಇದಕ್ಕೆ ಪೂರಕ ಸಾಕ್ಷಿ ಇದ್ದರೆ, ಭವಾನಿ ಅವರಿಗೆ ಸಂಕಷ್ಟ ಶುರುವಾಗಲಿದೆ.