ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಸೌಂದರ್ಯ ಜಗದೀಶ್ ಬ್ಯುಸಿನೆಸ್ ಪಾರ್ಟನರ್ಸ್ ಮೇಲೂ ಈಗ ಎಫ್ ಐ ಆರ್ ದಾಖಲಿಸಲಾಗಿದೆ. ಸೌಂದರ್ಯ ಜಗದೀಶ್ ಬಿಸಿನೆಸ್ ಪಾರ್ಟನರ್ಗಳಾದ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವವರ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಆತ್ಮಹತ್ಯೆ ಪ್ರಕರಣ ಸಂಬಂಧ ಜಗದೀಶ್ ವ್ಯವಹಾರಿಕ ಪಾಲುದಾರರಾಗಿರುವ ಕಾರಣ, ಮೂವರ ವಿರುದ್ಧ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ.

ಇತ್ತ ಎಫ್ ಐ ಆರ್ ಗೆ ಕಾರಣ ಡೆತ್ ನೋಟ್ ಎನ್ನಲಾಗಿದ್ದು, ಸೌಂದರ್ಯ ಜಗದೀಶ್ ಮನೆಯಲ್ಲಿ ಕೆಲವೇ ಸಾಲುಗಳು ಬರೆದಿದ್ದ ಡೆತ್ ನೋಟ್ ಪತ್ತೆಯಾಗಿತ್ತು. ಅದರ ಆಧಾರದ ಮೇಲೆ ಈಗ ಎಫ್ ಐ ಆರ್ ದಾಖಲಿಸಲಾಗಿದೆ. ಇದರಲ್ಲಿ ಸೌಂದರ್ಯ ಕನ್ಸ್ಟ್ರಕ್ಷನ್ ಸಂಬಂಧ ಬ್ಯುಸಿನೆಸ್ ಲಾಸ್ ಬಗ್ಗೆ ಮಾಹಿತಿ ಇದೆ. ಪಾಲುದಾರರು ಕಾರಣ ಎಂದು ಉಲ್ಲೇಖಿಸಲಾಗಿದೆ. ಸುಮಾರು 60 ಕೋಟಿ ನಷ್ಟವಾಗಿರುವ ಬಗ್ಗೆ ಉಲ್ಲೇಖವಿದೆ.

ಈ ಡೆತ್ ನೋಟ್ ಅಧರಿಸಿ ಪತ್ನಿ ಶಶಿರೇಖಾರಿಂದ ಮಹಾಲಕ್ಷ್ಮಿಲೇಔಟ್ ಪೊಲೀಸ್ ಠಾಣೆಗೆ ದೂರು ಈ ಮೊದಲು ದಾಖಲಾಗಿದ್ದು, ಸದ್ಯ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪಾಲುದಾರರ ಮೇಲೆ ಎಫ್ ಐ ಆರ್ ದಾಖಲು ಮಾಡಲಾಗಿದೆ.