ದೇಶಾದ್ಯಂತ ಇಂದು ಲೋಕಸಭೆ 6ನೇ ಹಂತದ ಮತದಾನ ನಡೆಲಿದ್ದು, 57 ಕ್ಷೇತ್ರಗಳಲ್ಲಿ ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ. 7 ರಾಜ್ಯಗಳ 57 ಕ್ಷೇತ್ರಗಳಲ್ಲಿ ಸಕಲ ತಯಾರಿ ಮಾಡಿಕೊಂಡಿದ್ದು, 889 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಆಗಲಿದೆ. ಬಿಹಾರ – 7, ಹರಿಯಾಣ – 10, ಒಡಿಶಾ – 6, ಉತ್ತರಪ್ರದೇಶ – 14, ಪಶ್ಚಿಮ ಬಂಗಾಳ – 8, ಜಾರ್ಖಂಡ್ – 4, ದೆಹಲಿ – 7 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

6ನೇ ಹಂತದ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯ ಧರ್ಮೇಂದ್ರ ಪ್ರಧಾನ್, ಹರಿಯಾಣ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್, ಮನೋಜ್ ತಿವಾರಿ, ಬನ್ಸೂರಿ ಸ್ವರಾಜ್, ಕೇಂದ್ರದ ಮಾಜಿ ಸಚಿವೆ ಮನೇಕಾ ಗಾಂಧಿ, ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲಿದ್ದಾರೆ. ಹರಿಯಾಣದಲ್ಲಿ 223 ಗರಿಷ್ಠ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇಂದು 6ನೇ ಹಂತದ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ರೆ, ಎಲ್ಲಾ ರಾಜಕೀಯ ಪಕ್ಷಗಳು ಕೊನೆಯ ಹಾಗು 7ನೇ ಹಂತದ ಮತ ಕ್ಷೇತ್ರಗಳಲ್ಲಿ ಪ್ರಚಾರದ ಅಬ್ಬರ ಶುರು ಮಾಡಿದ್ದಾರೆ. ನರೇಂದ್ರ ಮೋದಿ, ಅಮಿತ್ ಶಾ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು ಅಖಾಡದಲ್ಲಿ ಅಬ್ಬರಿಸ್ತಿದ್ದಾರೆ. ಪಂಜಾಬ್ನ ಗುರುದಾಸ್ಪುರದಲ್ಲಿ ಪ್ರಚಾರ ಮಾಡಿರುವ ಪ್ರಧಾನಿ ಮೋದಿ.. ಇಂಡಿಯಾ ಒಕ್ಕೂಟದ ವಿರುದ್ಧ ಹರಿಹಾಯ್ದಿದ್ದಾರೆ. ಅತ್ತ ಜಾರ್ಖಂಡ್ನ ದಿಯೋಘರ್ನಲ್ಲಿ ಪ್ರಚಾರ ಮಾಡಿದ ಮಲ್ಲಿಕಾರ್ಜುನ್ ಖರ್ಗೆ, ಬಿಜೆಪಿ ದೇಶ ಒಡೆಯುವ ಕೆಲಸ ಮಾಡ್ತಿದೆ ಅಂತ ವಾಗ್ದಾಳಿ ಮಾಾಡಿದ್ದಾರೆ.






