• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಾಂಗ್ರೆಸ್‌ ಗೆಲುವಿಗಾಗಿ ಪಾಕಿಸ್ತಾನದಲ್ಲಿ ಪ್ರಾರ್ಥನೆ.. ಇದೆಂಥಾ ಮಾತು..?

ಪ್ರತಿಧ್ವನಿ by ಪ್ರತಿಧ್ವನಿ
May 27, 2024
in ದೇಶ
0
ಸೋನಿಯಾ ಗಾಂಧಿ ಸೂಚಿಸಿದರೆ ಸ್ಪರ್ಧೆಗೆ ಸಿದ್ದ; ಮಲ್ಲಿಕಾರ್ಜುನ ಖರ್ಗೆ ಆಪ್ತ ವಲಯ
Share on WhatsAppShare on FacebookShare on Telegram

ದೇಶದಲ್ಲಿ ಲೋಕಸಭೆ ಚುನಾವಣಾ ಪ್ರಚಾರದ ಅಂತಿಮ ಹಂತಕ್ಕೆ ತಲುಪುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಷಾ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಘಟಾನುಘಟಿ ನಾಯಕರು ಮತದಾರರನ್ನು ಸೆಳೆಯಲು ಅಬ್ಬರದ ಪ್ರಚಾರ ಮಾಡಿದ್ದಾರೆ. ಜೂನ್‌ 1ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಚುನಾವಣಾ ಅಖಾಡದಲ್ಲಿ ಅಬ್ಬರದ ಪ್ರಚಾರ ಮಾಡಿದ್ದಾರೆ.

ADVERTISEMENT

ಲೋಕಸಭೆ ಚುನಾವಣೆ ಆರಂಭವಾದ ಬಳಿಕ ಮಾತಿನ ಹಾದಿ ತಪ್ಪಿರುವ ಪ್ರಧಾನಿ ನರೇಂದ್ರ ಮೋದಿ ಮತ್ತೆ ತಮ್ಮ ಮಾತನ್ನು ಹರಿ ಬಿಟ್ಟಿದ್ದಾರೆ. ಇನ್ನೊಂದು ಹಂತದ ಮತದಾನ ಮಾತ್ರ ಬಾಕಿಯಿರುವ ಈ ಸಮಯದಲ್ಲಿ ಮತ ಸೆಳೆಯಲು ಪಾಕಿಸ್ತಾವನ್ನು ಎಳೆದು ತಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿರುಸಿನ ಪ್ರಚಾರ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿ ಎಂದು ಪಾಕಿಸ್ತಾನದಲ್ಲಿ ಪ್ರಾರ್ಥನೆ ಮಾಡಲಾಗ್ತಿದೆ ಎಂದಿದ್ದಾರೆ.

ಪ್ರಗತಿಯಲ್ಲಿರೋ ಭಾರತವನ್ನು ಕಂಡು ಕೆಲವರಿಗೆ ಹೊಟ್ಟೆಕಿಚ್ಚು ಶುರುವಾಗಿದೆ. ಕೆಲವರು ಜೂನ್​ 4ರಂದು ಅಧಿಕಾರಕ್ಕೆ ಬರೋ ಕನಸು ಕಾಣ್ತಿದ್ದಾರೆ. ಕಾಂಗ್ರೆಸ್​ ಹಾಗು ಸಮಾಜವಾದಿ ಪಾರ್ಟಿಗೆ ಪಾಕಿಸ್ತಾನ ಮೂಲದ ಕೈಗಳಿಂದ ಸಹಕಾರ ಸಿಗ್ತಿದೆ. INDIA ಮೈತ್ರಿಕೂಟದ ಗೆಲುವಿಗಾಗಿ ಪಾಕಿಸ್ತಾನದಲ್ಲಿ ಪ್ರಾರ್ಥನೆ ಮಾಡಲಾಗ್ತಿದೆ. ಜಿಹಾದಿಗಳು ಗಡಿ ಆಚೆಯಿಂದ ಕಾಂಗ್ರೆಸ್​ ಹಾಗು ಎಸ್​ಪಿಗೆ ಬೆಂಬಲ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ಮತ್ತು ಎಸ್​ಪಿ ‘ವೋಟ್-ಜಿಹಾದ್’ಗೆ ಮನವಿ ಮಾಡುತ್ತಿವೆ ಎಂದಿದ್ದಾರೆ.

ಬಿಹಾರದ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಅಮಿತ್‌ ಷಾ, ಹಿಂದುಳಿದ, ಅತ್ಯಂತ ಹಿಂದುಳಿದ ಸಮಾಜವನ್ನ ಕಾಂಗ್ರೆಸ್​ ಪಕ್ಷ ವಿರೋಧಿಸುವ ಕೆಲಸ ಮಾಡಿದೆ. ಕಾಕಾ ಕಾಲೇಲ್ಕರ್ ಆಯೋಗದ ವರದಿ ಹತ್ತಿಕ್ಕಿದ್ದು ಕಾಂಗ್ರೆಸ್‌. ಹಿಂದುಳಿದ ವರ್ಗಗಳ ಮೀಸಲಾತಿಗೆ ಅಡೆತಡೆ ಸೃಷ್ಟಿಸಿದ್ದು ಕಾಂಗ್ರೆಸ್‌‌. ಮಂಡಲ್ ಆಯೋಗ ಬಂದಾಗ ಅದನ್ನ ತಡೆಯುವ ಕೆಲಸ ಮಾಡಿದ್ದು ಕಾಂಗ್ರೆಸ್‌ ಪಕ್ಷ. ಮಂಡಲ್ ಆಯೋಗದ ವರದಿಯನ್ನ ಅಂಗೀಕರಿಸಿದಾಗ ರಾಹುಲ್ ಬಾಬಾ ತಂದೆ ರಾಜೀವ್ ಗಾಂಧಿ ವಿರೋಧಿಸಿದ್ರು ಎಂದಿದ್ದಾರೆ.

ಒಟ್ಟಾರೆ ಪಾಕಿಸ್ತಾನ ಬೇರೆ ದೇಶಗಳಿಂದ ನೆರವು ಸಿಗುತ್ತಾ ಎಂದು ಕಣ್ಣು ಬಾಯಿ ಬಿಟ್ಟುಕೊಂಡು ನೋಡುತ್ತಿರುವ ಈ ಸಮಯದಲ್ಲಿ ಕಾಂಗ್ರೆಸ್‌ ಹಾಗು ಸಮಾಜವಾದಿ ಪಾರ್ಟಿಗೆ ಪಾಕಿಸ್ತಾನದಿಂದ ನೆರವು ಸಿಗುತ್ತಿದೆ ಎಂದು ಹೇಳಿರುವುದು ಹಾಸ್ಯಾಸ್ಪದ ಎನಿಸುವಂತಿದೆ. ಅದರಲ್ಲೂ ಓರ್ವ ಪ್ರಧಾನಿ, ಎರಡು ಬಾರಿ ನಿರಂತರವಾಗಿ ದೇಶವನ್ನು ಆಳ್ವಿಕೆ ಮಾಡಿರುವಂತಹ ವ್ಯಕ್ತಿ ಇಷ್ಟೊಂದು ಕೀಳು ಮಟ್ಟಕ್ಕೆ ಇಳಿದು ಭಾಷಣ ಮಾಡುತ್ತಿದ್ದಾರೆ ಎನ್ನುವುದೇ ಅಚ್ಚರಿಯ ವಿಚಾರ ಎನ್ನುವಂತಾಗಿದೆ.

ಕೃಷ್ಣಮಣಿ

Tags: BJPcongressElectionPakistanprayers
Previous Post

ಪ್ರಧಾನಿ ನರೇಂದ್ರ ಮೋದಿಗೆ ಸೋಲುವ ಭೀತಿ, ಆತ್ಮವಿಶ್ವಾಸ ಕುಸಿದಿದ್ಯಾ..?

Next Post

ಮಳೆಗೆ ಬ್ರೇಕ್; ಹಲವೆಡೆ ಭಾರೀ ಮಳೆಯ ಮುನ್ಸೂಚನೆ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಈ ಜಿಲ್ಲೆಗಳಲ್ಲಿ ಮೇ 28ರ ವರೆಗೂ ಭರ್ಜರಿ ಮಳೆಯ ಮುನ್ಸೂಚನೆ

ಮಳೆಗೆ ಬ್ರೇಕ್; ಹಲವೆಡೆ ಭಾರೀ ಮಳೆಯ ಮುನ್ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada