ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಪ್ರಕರಣದಿಂದ ಬೇಸರಗೊಂಡಿರುವ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD kumaraswamy) ಕುಟುಂಬ ಇದೀಗ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿದ್ದಾರೆ.ಕೇರಳದ (Kerala) ವೈನಾಡ್ ಕಡೆಗೆ ಹೆಚ್ಡಿಕೆ ಹೊರಟಿದ್ದಾರೆ.
![](https://pratidhvani.com/wp-content/uploads/2024/03/hdk1-1552101589.jpg)
ಅನಿತಾ ಕುಮಾರಸ್ವಾಮಿ (Anita kumaraswamy),ನಿಖಿಲ್ ಕುಮಾರಸ್ವಾಮಿ (Nikhil kumaraswamy), ಸೊಸೆ ರೇವತಿ ಸೇರಿದಂತೆ ಇಡೀ ಕುಟುಂಬವೇ ತೆರಳಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇಂದು ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರ ಬಂಧನವಾಗುವ ಸಾಧ್ಯತೆ ಇರೋದ್ರಿಂದ ಈ ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
3 ದಿನಗಳ ಕಾಲ ಅಲ್ಲೇ ಇದ್ದು ಲೋಕಸಭಾ ಚುನಾವಣೆಯ ಫಲಿತಾಂಶದ ಹಿಂದಿನ ದಿನ ವಾಪಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.