• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in Top Story, ಕರ್ನಾಟಕ, ರಾಜಕೀಯ
0
ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಡಿಸಿಎಂ
Share on WhatsAppShare on FacebookShare on Telegram

ಬೆಂಗಳೂರು, ಮೇ 30: “ನನ್ನ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಕೇರಳದಲ್ಲಿ ತಂತ್ರಿಗಳನ್ನು ಬಳಸಿಕೊಂಡು “ಶತ್ರು ಭೈರವಿ ಯಾಗ” ಪ್ರಯೋಗ ನಡೆಸ ಲಾಗುತ್ತಿದೆ. ಈ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ನಂಬಿರುವ ಶಕ್ತಿ, ದೇವರು ಹಾಗೂ ಜನರ ಆಶೀರ್ವಾದ ನಮ್ಮನ್ನು ಕಾಪಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಈ ವಿಷಯ ತಿಳಿಸಿದರು.

“ಕೇರಳದಲ್ಲಿ ನನ್ನ, ಮುಖ್ಯಮಂತ್ರಿಗಳ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾಗ ಮಾಡಲಾಗುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಾಲಯದ ಆಸುಪಾಸಿನ ನಿರ್ಜನ ಪ್ರದೇಶದಲ್ಲಿ ಶತ್ರು ಸಂಹಾರ ಉದ್ದೇಶದ “ರಾಜಕಂಟಕ”, “ಮಾರಣ ಮೋಹನ ಸ್ತಂಭನ” ಯಾಗ ಪ್ರಯೋಗ ನಡೆಸಲಾಗುತ್ತಿದೆ. ಯಾರು ಈ ಯಾಗ ಮಾಡಿಸುತ್ತಿದ್ದಾರೆ ಎಂಬ ವಿವರವನ್ನು ಈ ಯಾಗದಲ್ಲಿ ಪಾಲ್ಗೊಂಡವರೇ ನಮಗೆ ತಿಳಿಸಿದ್ದಾರೆ ಎಂದರು.

ಅಘೋರಿಗಳ ಮೂಲಕ ಈ ಯಾಗ ನಡೆಯುತ್ತಿದೆ. ಇದಕ್ಕಾಗಿ ಪಂಚ ಬಲಿ ನೀಡಲಾಗುತ್ತಿದ್ದು, ಕೆಂಪು ಬಣ್ಣದ 21 ಮೇಕೆ, 3 ಎಮ್ಮೆ, ಕಪ್ಪು ಬಣ್ಣದ 21 ಕುರಿ ಹಾಗೂ 5 ಹಂದಿಗಳ ಬಲಿ ಮೂಲಕ ಈ ಮಾಂತ್ರಿಕಯಾಗ ನಡೆಯುತ್ತಿದೆ.

ಅವರ ಪ್ರಯತ್ನ ಅವರು ಮಾಡಲಿ, ಆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರವರ ನಂಬಿಕೆ ಅವರದು. ಹೀಗಾಗಿ ಇಂತಹ ಪ್ರಯತ್ನ ಮಾಡುತ್ತಾರೆ. ಅವರು ನಮ್ಮ ಮೇಲೆ ಏನೇ ಪ್ರಯೋಗ ಮಾಡಿದರೂ ನಾನು ನಂಬಿರುವ ಶಕ್ತಿ ನಮ್ಮನ್ನು ಕಾಪಾಡಲಿದೆ. ನಾನು ಪ್ರತಿನಿತ್ಯ ಮನೆಯಿಂದ ಹೊರಡುವ ಮುನ್ನ ದೇವರಿಗೆ ಒಂದು ನಿಮಿಷ ಕೈಮುಗಿದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಈ ಪ್ರಯೋಗ ಮಾಡಿಸುತ್ತಿರುವುದು ಬಿಜೆಪಿಯವರಾ ಅಥವಾ ಜೆಡಿಎಸ್ ನವರಾ ಎಂದು ಕೇಳಿದಾಗ, “ಯಾರು ಮಾಡಿಸುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದರು.

“ನಿಂಬೆ ಹಣ್ಣು ನಿಪುಣರು” ಇದನ್ನು ಮಾಡಿಸುತ್ತಿದ್ದಾರೆಯೇ ಎಂದು ಮಾಧ್ಯಮದವರು ಕೇಳಿದಾಗ, “ನನ್ನ ಬಾಯಿಂದ ಹೇಳಿಸುವುದರ ಬದಲು ನೀವೇ ಈ ಬಗ್ಗೆ ತನಿಖಾ ವರದಿ ಮಾಡಿ ಎಂದರು.

ನಿಮ್ಮನ್ನೇ ಏಕೆ ಗುರಿ ಮಾಡುತ್ತಾರೆ, ನಿಮ್ಮ ರಕ್ಷಣೆಗಾಗಿ ನೀವೂ ವಾಪಾಸ್ ಏನಾದರೂ ಮಾಡುತ್ತಿರಾ ಎಂದು ಕೇಳಿದಾಗ, “ಯಾವಾಗಲೂ ರಾಜಕೀಯವಾಗಿ ಚಟುವಟಿಕೆಯಿಂದ ಇರುವವರು ವಿರೋಧಿಗಳ ಕೆಂಗಣ್ಣಿಗೆ ಗುರಿ ಆಗುತ್ತಾರೆ. ಅವರು ಮಾಡೋದು ಮಾಡಲಿ, ನನ್ನ ಶಕ್ತಿ ನನ್ನ ರಕ್ಷಣೆಗೆ ಇದೆ. ನಾನು ಅಂತಹ ಯಾವುದೇ ಚಟುವಟಿಕೆ ಮಾಡುವುದಿಲ್ಲ. ದೇವರನ್ನು ಮಾತ್ರ ನಂಬಿದ್ದೇನೆ” ಎಂದರು.

Tags: dcmDK ShivakumarKerala
Previous Post

LH 764 ಫೈಟ್‌ ನ Seat no. 8G ಯಲ್ಲಿ ಕುಳಿತಿರುವ ಪ್ರಜ್ವಲ್ ರೇವಣ್ಣ ! 

Next Post

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ತುಷಾರ್ ಗಿರಿ ನಾಥ್ : ವಲಯ ಆಯುಕ್ತರು, ಮುಖ್ಯ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ..!

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada