ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅಂಡ್ ಗ್ಯಾಂಗ್ಗೆ (Actor darshan and gang) ಇವತ್ತು ಕಸ್ಟಡಿ ಅಂತ್ಯವಾಗಲಿದ್ದು ಪೊಲೀಸರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಕಳೆದ ಜೂನ್ 11ರಂದು ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ (Renuka swamy murder case) ದರ್ಶನ್ ಅಂಡ್ ಗ್ಯಾಂಗ್ ಬಂಧನ ಆಗಿದೆ.
ಪೊಲೀಸ್ ಕಸ್ಟಡಿಯಲ್ಲಿ 10 ದಿನ ಕಳೆದಿರುವ ಡಿ ಗ್ಯಾಂಗ್ (D gang) ಕಸ್ಟಡಿ ವೇಳೆ ಸ್ವ ಇಚ್ಚಾ ಹೇಳಿಕೆ ದಾಖಲಿಸಿದ್ದಾರೆ. ಇನ್ನು ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಹೀಗಾಗಿ ಇವತ್ತು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ರೆ ದರ್ಶನ್ ಅಂಡ್ ಗ್ಯಾಂಗ್ ಗೆ ಜೈಲಾಗಲಿದೆ. ನಟ ದರ್ಶನ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
2011ರಲ್ಲಿ ಪತ್ನಿ ವಿಜಯಲಕ್ಷ್ಮಿ (Vijaya lakshmi) ಮೇಲೆ ಹಲ್ಲೆ ಮಾಡಿ ಜೈಲು (Jall) ಸೇರಿದ್ದ ನಟ ದರ್ಶನ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಕಳೆದ 10 ದಿನಗಳಿಂದ ಕಸ್ಟಡಿಯಲ್ಲಿರುವ ದರ್ಶನ್ನನ್ನು ಪೊಲೀಸರು ಒಂದು ಪ್ರಕರಣದಲ್ಲಿ 14 ದಿನ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.