• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah).

ಪ್ರತಿಧ್ವನಿ by ಪ್ರತಿಧ್ವನಿ
June 20, 2024
in Top Story, ರಾಜಕೀಯ
0
Share on WhatsAppShare on FacebookShare on Telegram

ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದಾಮಯ್ಯ(Chief Minister Siddaramaiah) ಕರೆ ನೀಡಿದರು.

ADVERTISEMENT

ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ(West Gate) ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿದ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಮಾತೃಭಾಷೆಯಲ್ಲಿ ಮಾತನಾಡುವುದು ಹೆಮ್ಮೆಯ ಸಂಗತಿಯಾಗಬೇಕು
ಪ್ರತಿಯೊಬ್ಬರೂ ಕೂಡ ಕರ್ನಾಟಕದಲ್ಲಿ ಬಾಳಿ ಬದುಕುವವರೊಂದಿಗೆ ಕನ್ನಡದಲ್ಲಿಯೇ ಮಾತನಾಡುತ್ತೇನೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೆ ಬದುಕುವ ವಾತಾವರಣ ಕರ್ನಾಟಕದಲ್ಲಿದೆ. ತಮಿಳುನಾಡು(Tamilnadu), ಆಂಧ್ರ (Andrapradesh), ಕೇರಳಕ್ಕೆ(Kerala) ಹೋದರೆ ಅವರ ಮಾತೃಭಾಷೆಯಲ್ಲಿಯೇ(Mother Language) ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು. ಅದರಲ್ಲಿ ಕೀಳರಿಮೆ ಅಗತ್ಯವಿಲ್ಲ ಎಂದರು.

ಕರ್ನಾಟಕದಲ್ಲಿ ವಾಸ ಮಾಡುವವರು ಕನ್ನಡ ಕಲಿಯಬೇಕು
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ.ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲಾರೂ ಕನ್ನಡವನ್ನು ಕಲಿಯಲೇಬೇಕು. ಹಾಗೆಂದು ನಾವು ಸುಮ್ಮನಿರುವಂತಿಲ್ಲ. ಕನ್ನಡಿಗರು ದುರಭಿಮಾನಿಗಳಲ್ಲ. ಆದರೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿ ದುರಭಿಮಾನಿಗಳಂತೆ ನಾವು ಆಗಬೇಕಿಲ್ಲ. ಆದರೆ ನಮ್ಮ ಭಾಷೆ, ನೆಲ, ನಾಡಿನ ಬಗೆ ಗೌರವ, ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು.

ನವೆಂಬರ್ ಒಂದರೊಳಗೆ ಕಾಮಗಾರಿ ಪೂರ್ಣಗೊಳಬೇಕು
ಭುವನೇಶ್ವರಿ ತಾಯಿ ಎಲ್ಲರಿಗೂ ಈ ನಿಟ್ಟಿನಲ್ಲಿ ಎಲ್ಲರಿಗೂ ಸ್ಪೂರ್ತಿ ಕೊಡಲಿ ಎಂದು ಆಶಿಸುತ್ತೇನೆ ಎಂದರು. ನವೆಂಬರ್ 01, 2024 ರೊಳಗೆ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ.ಇದೊಂದು ಉತ್ತಮವಾದ ಕೆಲಸ. ವಿಧಾನ ಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ.ಅನೇಕ ರಾಜಕಾರಣಿಗಳ ಪ್ರತಿಮೆಗಳನ್ನು ಸ್ಥಾಪಿಸಿದ್ದೇವೆ. ಪ್ರತಿಮೆ ವಿಧಾನಸೌಧದ ಆಕರ್ಷಣೆಯನ್ನು ಇಮ್ಮಡಿಗೊಳಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದರು.
2023, ನವೆಂಬರ್ 01 ರಂದು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳ ತುಂಬಿವೆ. ಈ ಸಂದರ್ಭದಲ್ಲಿ ಇಡಿ ವರ್ಷ ಕರ್ನಾಟಕ ಸಂಭ್ರಮ ಎಂಬ ಹೆಸರಿನಡಿ ಹೆಸರಾಯಿತು ‘ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯ ವನ್ನು ಇಟ್ಟು ಇಡೀ ವರ್ಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ನವೆಂಬರ್ 01 2023 ರಂದು ಹಂಪಿಯಿಂದ ಕಾರ್ಯಕ್ರಮ ಪ್ರಾರಂಭವಾಗಿತ್ತು. ಗದಗಿನಲ್ಲಿಯೂ ದೊಡ್ಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಾಮಕರಣವಾದ ನಂತರ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ಅಲ್ಲಿಗೆ ಭೇಟಿ ನೀಡಿದ್ದರು. ಅವರ ಕಾಲದಲ್ಲಿಯೇ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ. ಅಲ್ಲಿಯವರೆಗೆ ಮೈಸೂರು ರಾಜ್ಯ ಎಂದಿತ್ತು. ತಾಯಿ ಭುವನೇಶ್ವರಿಯ ಪೂಜೆ ಯನ್ನು ಬಹಳ ವರ್ಷಗಳಿಂದ ರಾಜಮಹಾರಾಜರು ಮಾಡಿಕೊಂಡು ಬರುತ್ತಿದ್ದಾರೆ. ಕರ್ನಾಟಕದಲ್ಲಿಯೂ ತಾಯಿ ಭುವನೇಶ್ವರಿಯ ಪೂಜೆ ಮಾಡುತ್ತೇವೆ. ಏಕೀಕರಣದ ನಂತರ ಅದಕ್ಕೂ ಮುನ್ನವೇ ಪೂಜೆ ಮಾಡಿ ಗೌರವಿಸಿ, ಸ್ಮರಿಸುವ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ ಎಂದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕರು ಮೊದಲಾದವರು ಉಪಸ್ಥಿತರಿದ್ದರು

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಏನಾಯ್ತು ಯಶ್ ಮುಂದಿನ ಸಿನಿಮಾ ಟಾಕ್ಸಿಕ್ ?! ಸಿನಿಮಾ ತಂಡದಿಂದ ಸಿಕ್ತು ಮತ್ತೊಂದು ಅಪ್ಲೇಟ್ !

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ..!

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ರೇಣುಕಾಸ್ವಾಮಿ ಕೊಲೆ ಪ್ರಕರಣ..!

ರೇಣುಕಾಸ್ವಾಮಿ ಕೊಲೆ ಪ್ರಕರಣ..!

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada