• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಸೆಯೇ ದುಃಖಕ್ಕೆ ಮೂಲ ಎನ್ನುವಂತೆ ಗ್ಯಾರಂಟಿಗಳೇ ಬೆಲೆ ಏರಿಕೆಗೆ ಮೂಲ

ಪ್ರತಿಧ್ವನಿ by ಪ್ರತಿಧ್ವನಿ
June 22, 2024
in Top Story, ಕರ್ನಾಟಕ, ರಾಜಕೀಯ
0
ಆಸೆಯೇ ದುಃಖಕ್ಕೆ ಮೂಲ ಎನ್ನುವಂತೆ ಗ್ಯಾರಂಟಿಗಳೇ ಬೆಲೆ ಏರಿಕೆಗೆ ಮೂಲ
Share on WhatsAppShare on FacebookShare on Telegram

ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದ ಸರಕಾರಕ್ಕೆ ಚಾಟಿ ಬೀಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಎನ್ ಡಿಎ ಸಂಸದರ ಅಭಿನಂದನಾ ಸಭೆಯಲ್ಲಿ ಭಾಗಿಯಾಗಿದ್ದ HDK

ADVERTISEMENT

ಆಸೆಯೇ ದುಃಖಕ್ಕೆ ಮೂಲ ಎಂದು ಗೌತಮ ಬುದ್ಧ ಹೇಳಿದ್ದರು. ಸಿದ್ದರಾಮಯ್ಯ ಅವರು ಗ್ಯಾರಂಟಿಯೇ ಬೆಲೆ ಏರಿಕೆಗೆ ಮೂಲ ಎಂದು ಹೇಳುತ್ತಿದ್ದಾರೆ ಎಂದು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಹಾರ ನಡೆಸಿದರು.

ನಗರದಲ್ಲಿ ಇಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ವತಿಯಿಂದ ನೂತನ ಕೇಂದ್ರ ಸಚಿವರು, ಸಂಸದರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿದೆ. ಅದಕ್ಕಾಗಿ ಜನರನ್ನು ದೋಚುತ್ತಿದೆ. ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ಬೆಳೆಗಳ ಏರಿಕೆಗೆ ಗ್ಯಾರಂಟಿಗಳೇ ಕಾರಣ ಎಂದು ಕೇಂದ್ರ ಸಚಿವರು ದೂರಿದರು.

ಈ ನಾಡಿಗೆ ಕುಮಾರಸ್ವಾಮಿ ಪರಿಚಯ ಆಗಿದ್ದು 2006ರಲ್ಲಿ ಬಿಜೆಪಿ ಜತೆ ಸರ್ಕಾರ ರಚನೆ ಮಾಡಿದಾಗ. ನನಗಿಂತ ಹಿರಿಯರಾದ ಯಡಿಯೂರಪ್ಪ ಅವರು ಸಹಕಾರ ನೀಡಿದರು. ಮುಕ್ತವಾಗಿ ಅಧಿಕಾರ ನಡೆಸಲು ಬಿಟ್ಟರು.
ಆದರೆ, ಕೆಲವರ ಕುತಂತ್ರದಿಂದ ಅಧಿಕಾರ ಹಸ್ತಾಂತರ ಆಗಲಿಲ್ಲ. ಅದು ನನ್ನ ತಪ್ಪಲ್ಲ‌. ನಾವು ಆವತ್ತು ಅಧಿಕಾರದಲ್ಲಿ ಮುಂದುವರಿದಿದ್ದರೆ ಇವತ್ತು ಕಾಂಗ್ರೆಸ್ ಇರುತ್ತಿರಲಿಲ್ಲ. ಸಂಪೂರ್ಣ ನೆಲಕಚ್ಚಿ ಹೋಗುತ್ತಿತ್ತು ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ನಮ್ಮದು ಸಹಜ ಮೈತ್ರಿ

ಜೆಡಿಎಸ್ ಬಿಜೆಪಿಯದ್ದು ಸಹಜ ಮೈತ್ರಿ. 2018ರಲ್ಲೂ ನನಗೆ ಬಿಜೆಪಿ ಜತೆ ಸೇರಿಯೇ ಸರ್ಕಾರ ಮಾಡುವ ಆಸಕ್ತಿ ಇತ್ತು. ಈಗ ಮುಕ್ತವಾಗಿ ಎಲ್ಲಾ ವಿಷಯಗಳನ್ನು ಚರ್ಚೆ ಮಾಡುವುದಿಲ್ಲ. ಅದು ಮುಗಿದು ಹೋಗಿರುವ ಪ್ರಸಂಗ. ಆಗಿರುವ ಎಲ್ಲಾ ಕಹಿ ಘಟನೆಗಳನ್ನು ಮರೆಯಬೇಕಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಯಡಿಯೂರಪ್ಪ ಅವರು ಎಲ್ಲೆಡೆ ಓಡಾಟ ಮಾಡಿದ್ದಾರೆ. 82ರ ವಯಸ್ಸಿನಲ್ಲಿಯೂ ಅಭ್ಯರ್ಥಿಗಳ ಗೆಲುವಿಗೆ ಓಡಾಡಿದ್ದಾರೆ. ಅವರಿಗೆ ನಾನು ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು ಕೇಂದ್ರ ಸಚಿವರು.

ಮೈತ್ರಿ ಮುಂದುವರಿಯಲಿದೆ

ಲೋಕಸಭೆ ಚುನಾವಣೆಯಲ್ಲಿ ಮಾಡಿಕೊಂಡ ಮೈತ್ರಿ ಮುಂದುವರಿಯಬೇಕು. ಮೈಸೂರು ಪಾಲಿಕೆ ಚುನಾವಣೆ ಇರಬಹುದು, ಮುಂಬರುವ ಯಾವುದೇ ಚುನಾವಣೆ ಹೊಂದಾಣಿಕೆ ಇರಬಹುದು. ಎರಡೂ ಪಕ್ಷಗಳು ಹೊಂದಾಣಿಕೆಯಿಂದ ಹೋಗಬೇಕಿದೆ. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗೂ ನಾವು ಸಜ್ಜಾಗಬೇಕಿದೆ ಎಂದು ಕುಮಾರಸ್ವಾಮಿ ಅವರು ಕರೆ ನೀಡಿದರು.

ನಮ್ಮಲ್ಲಿ ಯಾವುದೇ ಒಡಕು ತರಬಾರದು. ನಮ್ಮಲ್ಲಿ ಯಾರೂ ಹೆಚ್ಚು ಕಡಿಮೆ ಎನ್ನುವ ಪ್ರಶ್ನೆ ಇಲ್ಲ. ಒಂದು ಕುಟುಂಬದ ಅಣ್ಣ ತಮ್ಮಂದಿರ ರೀತಿ ಹೋಗಬೇಕು. ಯಾರೇ ಒಗ್ಗಟ್ಟು ಮುರಿಯಲು ಮುಂದಾದರೆ ಅದನ್ನು ಕಿವಿ ಮೇಲೆ ಹಾಕಿಕೊಳ್ಳಬಾರದು ಎಂದು ಸಚಿವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಪಾಲ್ಗೊಂಡಿದ್ದರು. ಅಲ್ಲದೆ, ಜೆಡಿಎಸ್ ಸಂಸದ ಮಲ್ಲೇಶ್ ಬಾಬು ಸೇರಿದಂತೆ ಎಲ್ಲಾ ಸಂಸದರು ಭಾಗಿಯಾಗಿ ಅಭಿನಂದನೆ ಸ್ವೀಕರಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯದಾದ್ಯಂತ ಅಬ್ಬರಿಸುತ್ತಿರುವ ಮಳೆ

Next Post

Kannada actor Darshan Thoogudeepa 13 ವರ್ಷಗಳ ನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್

Related Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!
Top Story

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

by ಪ್ರತಿಧ್ವನಿ
April 18, 2026
0

ದೇವಸ್ಥಾನಗಳಲ್ಲಿ ಸಂಗ್ರಹವಾಗಿರುವ ಟನ್‌ಗಟ್ಟಲೆ ಚಿನ್ನವನ್ನು ಸಾರ್ವಜನಿಕ ಹಿತಕ್ಕಾಗಿ ಬಳಸಬೇಕು ಎಂಬ ಫಾದರ್ ಪೌಲ್ ಥಲೆಕ್ಕಟ್ ಅವರ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಿಧ ವಲಯಗಳಿಂದ ತೀವ್ರ ಆಕ್ರೋಶ...

Read moreDetails
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
Next Post
Kannada actor Darshan Thoogudeepa 13 ವರ್ಷಗಳ ನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್

Kannada actor Darshan Thoogudeepa 13 ವರ್ಷಗಳ ನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada