![](https://pratidhvani.com/wp-content/uploads/2024/07/WhatsApp-Image-2024-07-02-at-09.50.35-1024x576.jpeg)
ಕಳೆದ ವರ್ಷ ಮಳೆ ಕೊರತೆಯಿಂದಾಗಿ ಬರಗಾಲಕ್ಕೆ ತುತ್ತಾಗಿ ನಾಟೀ ಮಾಡಿದ ಯಾವುದೇ ಬೆಳೆ ರೈತನ ಕೈಗೆ ಬಾರದೆ ನಷ್ಟವನ್ನ ಅನುಭವಿಸಿದ್ದರು. ಈ ವರ್ಷ ಜಿಲ್ಲೆಯಲ್ಲಿ ಉತ್ತಮವಾದ ಮಳೆಯಾಗಿದ್ದು, ರೈತರು ಬಿತ್ತಿದ ಬೆಳೆ ಚೆನ್ನಾಗಿ ಫಸಲು ಬಂದಿದೆ. ಆದರೆ, ಆ ಬೆಳೆಗಳಿಗೆ ಈಗ ಜಿಂಕೆಗಳ ಕಾಟ ಜಾಸ್ತಿಯಾಗಿದ್ದು, ರೈತರು ಬೆಳೆದ ಬೆಳೆಯನ್ನ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸಬೇಕಾಗಿದೆ.
ಹೌದು, ಬೀದರ್(Bidar) ಜಿಲ್ಲೆಯಲ್ಲಿ ಜಿಂಕೆ ಹಾಗೂ ಕೃಷ್ಣ ಮೃಗಗಳ (Krishna Beast)ಸಂಖ್ಯೆ ಹೆಚ್ಚಾಗಿದೆ. ಒಂದು ಅಂದಾಜಿನ ಪ್ರಕಾರ ಜಿಲ್ಲೆಯಲ್ಲಿ 20 ಸಾವಿರಕ್ಕೂ (More Than 20 Thousand) ಅಧಿಕ ಜಿಂಕೆ-ಕೃಷ್ಣಮೃಗಳಿರಬಹುದೆಂದು ಅರಣ್ಯ ಇಲಾಖೆಯ(Forest Department) ಅಧಿಕಾರಿಗಳು ಅಭಿಪ್ರಾಯವಾಗಿದೆ.
ರೈತರ ಪಾಲಿಗೆ ಶಾಪವಾದ ಜಿಂಕೆಗಳು(Deers)
![](https://pratidhvani.com/wp-content/uploads/2024/07/sdsd.jpeg)
ಇನ್ನು ಜಿಂಕೆಗಳು ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿವೆ. ಹಿಂಡು ಹಿಂಡಾಗಿ ಹೊಲಗಳಿಗೆ ನುಗ್ಗುವ ಈ ಕಾಡು ಪ್ರಾಣಿಗಳು ಎಕರೆಗಟ್ಟಲೇ ಬೆಳೆಯನ್ನ ತಿಂದು ನಾಶ ಮಾಡಿಹೋಗುತ್ತವೆ. ಆದರೆ, ರೈತರ ಸಮಸ್ಯೆಗೆ ಸ್ಫಂಧಿಸಬೇಕಾದ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ. ನಮ್ಮ ನೋವನ್ನ ಯಾರಿಗೆ ಹೇಳಬೇಕೆಂದು ಇಲ್ಲಿನ ರೈತರ ಅಳಲಾಗಿದೆ.
ಇದರ ಜೊತೆಗೆ ಜಿಂಕೆಯನ್ನ ಹೊಡೆಯಲು ಬಾರದೆ, ಅವುಗಳನ್ನ ಹೆದರಿಸಲು ಬಾರದಂತಹ ಸ್ಥಿತಿ ನಮ್ಮಲ್ಲಿದೆ, ಒಂದು ವೇಳೆ ಏನಾದರೂ ನಾವೂ ಜಿಂಕೆಯನ್ನ ಹೊಡೆದರೆ, ಇಲ್ಲ, ಅದು ಆಕಸ್ಮಿಕವಾಗಿ ಮರಣಹೊಂದಿದರು ಕೂಡ ನಮ್ಮ ಮೇಲೆ ಕೇಸ್ ಹಾಕುವ ಬೆದರಿಕೆಯನ್ನ ಅರಣ್ಯ ಇಲಾಖೆಯವರು ಮಾಡುತ್ತಿದ್ದಾರೆ. ಜೊತೆಗೆ ಜಿಂಕೆಗಳು ನಮ್ಮ ಬೆಳೆಯನ್ನ ತಿಂದರೂ ಪರವಾಗಿಲ್ಲ, ನಮ್ಮ ಬೆಳೆನಾಶವಾದರೇ ಅದಕ್ಕೆ ಅರಣ್ಯ ಇಲಾಖೆಯವರು ಪರಿಹಾರ ಕೊಡಬೇಕು ಎಂದು ಇಲ್ಲಿನ ರೈತರು ಕೇಳಿಕೊಳ್ಳುತ್ತಿದ್ದಾರೆ.