• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಬೀದರ್‌: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕದಲ್ಲಿ ಲೋಪ; ಸಾಬೀತು

ಪ್ರತಿಧ್ವನಿ by ಪ್ರತಿಧ್ವನಿ
July 9, 2024
in ಅಂಕಣ, ಅಭಿಮತ, ಇದೀಗ, ಕರ್ನಾಟಕ
0
ಬೀದರ್‌: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕದಲ್ಲಿ ಲೋಪ; ಸಾಬೀತು
Share on WhatsAppShare on FacebookShare on Telegram

ಬೀದರ್‌: ಜಿಲ್ಲೆಯಲ್ಲಿ 2021-2022ರ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕದಲ್ಲಿ ಗಂಭೀರ ಸ್ವರೂಪದ ಕರ್ತವ್ಯ ಲೋಪವಾಗಿದ್ದು, ಅಂದಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರೇ ಇದಕ್ಕೆ ಜವಾಬ್ದಾರರು ಎನ್ನುವುದು ತನಿಖೆಯಿಂದ ಗೊತ್ತಾಗಿದೆ.2021ರಲ್ಲಿ ತಿಪ್ಪಣ್ಣ ಸಿರಸಗಿ, 2022ರಲ್ಲಿ ರವೀಂದ್ರ ರತ್ನಾಕರ್‌ ಅವರು ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕರಾಗಿದ್ದರು. ತಿಪ್ಪಣ್ಣ ಅವರ ಅವಧಿಯಲ್ಲಿ ಕರ್ತವ್ಯಲೋಪವಾದರೆ, ಆನಂತರ ಬಂದ ರವೀಂದ್ರ ರತ್ನಾಕರ್‌ ಅವರು ಈ ಕುರಿತು ಸರ್ಕಾರಕ್ಕೆ ಅನುಪಾಲನಾ ವರದಿ ಸಲ್ಲಿಸಲು ವಿಳಂಬ ಮಾಡಿ, ಅಧಿಕಾರಿಗಳನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ ಎಂದು ತನಿಖಾ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.ಈ ಸಂಬಂಧ ತಿಪ್ಪಣ್ಣ ಸಿರಸಗಿ ಹಾಗೂ ರವೀಂದ್ರ ರತ್ನಾಕರ್‌ ಅವರಿಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್‌. ಅವರು ಕಾರಣ ಕೇಳಿ ನೋಟಿಸ್‌ ಕೊಟ್ಟಿದ್ದಾರೆ. ಅದರ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.ಕ್ರಿಮಿನಲ್‌ ಹಿನ್ನೆಲೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರನ್ನು ಅಮಾನತುಗೊಳಿಸಲು ವಿಳಂಬ ತೋರಿಸಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಿಲ್ಲ. ಪೌಷ್ಟಿಕ ಆಹಾರಕ್ಕೆ ಸಂಬಂಧಿಸಿದಂತೆ ಅಂಗನವಾಡಿ ಕಟ್ಟಡ ಸ್ಥಳದ ಕೊರತೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ. ನಿಗದಿತ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿಲ್ಲ. ದಿಶಾ ಸಮಿತಿಯಲ್ಲಿ ಸದಸ್ಯ ಶಿವಯ್ಯ ಸ್ವಾಮಿ ಅವರು, ಎಂಟು ಜನರು ಸುಳ್ಳು ದಾಖಲಾತಿಗಳನ್ನು ಸಲ್ಲಿಸಿ ಆಯ್ಕೆಯಾಗಿದ್ದಾರೆ ಎಂದು ದಾಖಲೆಗಳ ಸಮೇತ ತಿಳಿಸಿದ್ದರೂ ಕ್ರಮ ಜರುಗಿಸಿಲ್ಲ.ದಿಶಾ ಸಮಿತಿ ಸಭೆಗೆ ಮಾಹಿತಿ ನೀಡಲು ಉದಾಸೀನತೆ ತೋರಿದ್ದಾರೆ. ಇದು ಗಂಭೀರ ಸ್ವರೂಪದ ಕರ್ತವ್ಯಲೋಪ ಎಂದು ತಿಪ್ಪಣ್ಣ ಸಿರಸಗಿ ವಿರುದ್ಧದ ತನಿಖಾ ವರದಿಯಲ್ಲಿ ಉಲ್ಲೇಖಿಸಿದೆ.ಇನ್ನು, ರವೀಂದ್ರ ರತ್ನಾಕರ್‌ ಅವರು 2022ರ ಜೂನ್‌ 14ರಂದು ನಡೆದ ದಿಶಾ ಸಮಿತಿ ಸಭೆಗೆ ತಪ್ಪು ಮಾಹಿತಿ ನೀಡಿದ್ದಾರೆ. ಅನುಪಾಲನಾ ವರದಿ ಸಲ್ಲಿಸಲು ವಿಳಂಬ ಮಾಡಿದ್ದಾರೆ. ಜಿಲ್ಲಾಮಟ್ಟದ ಪ್ರಮುಖ ಸಭೆಗೆ ಮಾಹಿತಿ ನೀಡಲು ಉದಾಸೀನತೆ ತೋರಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಪ್ರಸ್ತಾಪಿಸಲಾಗಿದೆ.

ADVERTISEMENT
Tags: Anganawadi WorkersBidarBidar District
Previous Post

ಇಂಜಿನಿಯರಿಂಗ್ ಹಾಸ್ಟೆಲ್‌ ಆಹಾರದ ಚಟ್ನಿಯಲ್ಲಿ ಈಜುತ್ತಿರುವ ಇಲಿ!

Next Post

ಕೂಡ್ಲಿಗಿ ಪ ಪಂ: ಸೊಳ್ಳೆ ನಿವಾರಣೆಗೆ ಹಾಸ್ಟೆಲ್ ಗಳ ಆವರಣದಲ್ಲಿ ಫಾಗಿಂಗ್..

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಕೂಡ್ಲಿಗಿ ಪ ಪಂ: ಸೊಳ್ಳೆ ನಿವಾರಣೆಗೆ ಹಾಸ್ಟೆಲ್ ಗಳ ಆವರಣದಲ್ಲಿ ಫಾಗಿಂಗ್..

ಕೂಡ್ಲಿಗಿ ಪ ಪಂ: ಸೊಳ್ಳೆ ನಿವಾರಣೆಗೆ ಹಾಸ್ಟೆಲ್ ಗಳ ಆವರಣದಲ್ಲಿ ಫಾಗಿಂಗ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada