• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದರ್ಶನ್​​ ಜಾಮೀನು ಅರ್ಜಿ ಯಾಕೆ ಸಲ್ಲಿಸಿಲ್ಲ..? ಮನೆಯೂಟಕ್ಕೆ ಕೋರ್ಟ್​ ಹೇಳಿದ್ದೇನು.?

ಕೃಷ್ಣ ಮಣಿ by ಕೃಷ್ಣ ಮಣಿ
July 18, 2024
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ದರ್ಶನ್​​ ಜಾಮೀನು ಅರ್ಜಿ ಯಾಕೆ ಸಲ್ಲಿಸಿಲ್ಲ..? ಮನೆಯೂಟಕ್ಕೆ ಕೋರ್ಟ್​ ಹೇಳಿದ್ದೇನು.?
Share on WhatsAppShare on FacebookShare on Telegram

ಚಾಲೆಂಜಿಂಗ್​ ಸ್ಟಾರ್​.. ಬಾಕ್ಸ್​ ಆಫೀಸ್​ ಸುಲ್ತಾನ.. ಗಲ್ಲಾ ಪೆಟ್ಟಿಗೆ ಬೇಟೆಗಾರ ಅನ್ನೋ ಹಲವಾರು ಬಿರುದಾಂಕಿತ ನಟ ದರ್ಶನ್​, ಕೊಲೆ ಕೇಸ್​ನಲ್ಲಿ ಜೈಲು ಸೇರಿ ತಿಂಗಳು ಕಳೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಇನ್​​ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಸಂದೇಶ ಕಳುಹಿಸಿದ್ದ ಅನ್ನೋ ಕಾರಣಕ್ಕೆ ಪಟ್ಟಣಗೆರೆ ಶೆಡ್​ಗೆ ಕರೆದು ಹಲ್ಲೆ ಮಾಡಿದ್ರು. ಹಲ್ಲೆ ಬಳಿಕ ನೋವು ತಾಳಲಾರದೆ ಸಾವನ್ನಪ್ಪಿದ್ದು, ಬರೋಬ್ಬರಿ 17 ಜನರನ್ನು ಪೊಲೀಸ್ರು ಬಂಧನ ಮಾಡಿದ್ದಾರೆ. ಅದರಲ್ಲಿ ದರ್ಶನ್​ ಆಪ್ತ ಗೆಳತಿ ಪವಿತ್ರಾ ಗೌಡ A1 ಆರೋಪಿ ಆದರೆ ನಟ ದರ್ಶನ್​ A2 ಆರೋಪಿ. ಆದರೆ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್​ ಪರ ಯಾಕಿನ್ನೂ ಜಾಮೀನು ಅರ್ಜಿ ಸಲ್ಲಿಸಿಲ್ಲ ಎನ್ನುವ ಗುಮಾನಿ ದರ್ಶನ್​ ಅಭಿಮಾನಿಗಳು ಹಾಗು ದರ್ಶನ್​ ಆಪ್ತವಲಯದಲ್ಲಿ ಮೂಡಿರುವ ಅನುಮಾನ.

ADVERTISEMENT

ಜಾಮೀನು ಅರ್ಜಿ ಸಲ್ಲಿಕೆಗೂ ಮುನ್ನ ಇಂದು ಹೈಕೋರ್ಟ್​ನಲ್ಲಿ ನಟ ದರ್ಶನ್​ ಸಲ್ಲಿಸಿದ್ದ ರಿಟ್​ ಅರ್ಜಿ ವಿಚಾರಣೆ ನಡೆದಿದೆ. ನಟ ದರ್ಶನ್ ಪರ ವಕೀಲ ಕೆ.ಎನ್ ಫಣೀಂದ್ರ ಹಾಜರಾಗಿದ್ದರು. ಈ ವೇಳೆ ಸರ್ಕಾರದ ಪರವಾಗಿ ಹಾಜರಿದ್ದ SPP ಪ್ರಸನ್ನಕುಮಾರ್​, ಆಕ್ಷೇಪಣೆ ಸಲ್ಲಿಕೆ ಮಾಡಿ ​ಸೋಮವಾರಕ್ಕೆ ವಾದ ಮಾಡಲು ಅವಕಾಶ ಕೇಳಿದ್ರು. ಇದಕ್ಕೆ ದರ್ಶನ್​ ಪರ ವಕೀಲರು ವಿರೋಧ ವ್ಯಕ್ತಪಡಿಸಿ, ಇಂದೇ ವಾದ ಮಾಡುವಂತೆ ಕೋರ್ಟ್​ಗೆ ಕೋರಿದ್ರು. ಆದರೆ ಕೋರ್ಟ್​ ಸೋಮವಾರದ ಬದಲು ನಾಳೆ ನಿಮ್ಮ ವಾದ ಮಂಡಿಸಿ, ನಾಳೆ ವಿಚಾರಣೆ ಮುಂದುವರಿಸೋಣ ಎಂದರು. ಇದೇ ವೇಳೆ ಕಾನೂನಿನಲ್ಲಿ ಇರುವ ಅವಕಾಶಗಳ ಬಗ್ಗೆ ನೋಡೋಣ ಅಂತಾ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣಕುಮಾರ್ ಪೀಠ ಹೇಳಿದ್ದು, ಶುಕ್ರವಾರಕ್ಕೆ ಅರ್ಜಿ ಮುಂದೂಡಿಕೆ ಮಾಡಿದೆ.

ಈ ನಡುವೆ ಜಾಮೀನು ಅರ್ಜಿ ಬಗ್ಗೆ ಭಾರೀ ಚರ್ಚೆ ಶುರುವಾಗಿದೆ. ಖ್ಯಾತ ಕ್ರಿಮಿನಲ್​ ವಕೀಲ ಸಿ.ವಿ ನಾಗೇಶ್​ ದರ್ಶನ್​ ಪರ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದವು. ಆದರೆ ಇನ್ನೂ ವಿಚಾರಣೆ ಹಂತದಲ್ಲಿ ಇರುವಾಗ ಜಾಮೀನು ಕೋರಿ ಅರ್ಜಿ ಸಲ್ಲಿಸಿದರೆ ಸರ್ಕಾರ ಆಕ್ಷೇಪ ವ್ಯಕ್ತಪಡಿಸುತ್ತದೆ. ಇನ್ನೂ ವಿಚಾರಣೆ ನಡೆಯುವಾಗ ಆರೋಪಿಗಳು ಜಾಮೀನು ಮೇಲೆ ಬಿಡುಗಡೆ ಆದರೆ ಸಾಕ್ಷಿಗಳಿಗೆ ಬೆದರಿಕೆ ಹಾಕಿಸುತ್ತಾರೆ. ವಿಚಾರಣೆ ಅಡ್ಡಿಯಾಗುತ್ತಾರೆ. ಪ್ರಕರಣ ಗಂಭೀರವಾಗಿದ್ದು ಆರೋಪಿಗಳು ಕೂಡ ಪ್ರಭಾವಿಗಳಾಗಿದ್ದಾರೆ. ಆರೋಪಿಗಳು ತಾವೇ ಸಾಕ್ಷಿಗಳನ್ನು ಬೆದರಿಸಬೇಕು ಎಂದೇನಿಲ್ಲ. ಕೇವಲ ಕಣ್ಣಲ್ಲಿ ತೋರಿಸಿದರೆ ಸಾಕ್ಷಿಗಳನ್ನು ಬೆದರಿಸುತ್ತಾರೆ. ಕಾನೂನು ಕಣ್ಣಿಗೆ ಬೇರೆ ರೀತಿ ಕಾಣುತ್ತದೆ. ಅದರ ಉದ್ದೇಶ ಇದೇ ಪ್ರಕರಣ ಆಗಿರುತ್ತದೆ ಎಂದು ವಾದಿಸಿದರೆ ಖಂಡಿತವಾಗಿಯೂ ಜಾಮೀನು ಸಿಗುವುದಿಲ್ಲ.

ಜಮೀನು ಸಿಗುವುದಿಲ್ಲ ಅನ್ನೋದ್ರ ಜೊತೆಗೆ ಅರ್ಜಿ ವಜಾ ಆಗುತ್ತದೆ. ಮುಂದೆ ಆರೋಪ ಪಟ್ಟಿ ಕೋರ್ಟ್​ಗೆ ಸಲ್ಲಿಕೆ ಆದ ಬಳಿಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದರೆ ಜಾಮೀನು ಪಡೆದುಕೊಳ್ಳುವುದು ಸುಲಭ ಎನ್ನುವುದು ದರ್ಶನ್​ ಪರ ವಕೀಲರ ನಿಲುವು. ಈಗಲೇ ಒಮ್ಮೆ ಅರ್ಜಿ ಹಾಕಿ ಜಾಮೀನು ಸಿಗದೆ ಒದ್ದಾಡುವ ಬದಲು, ಆರೋಪ ಪಟ್ಟಿ ಸಲ್ಲಿಕೆ ಆದ ಬಳಿಕ ಕೆಳ ನ್ಯಾಯಾಲದಲ್ಲೇ ನಿಖರ ವಾದ ಮಂಡಿಸಿ ಜಾಮೀನು ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಹೈಕೋರ್ಟ್​​ಗೆ ಹೋಗಬೇಕಾಗಿ ಬರಬಹುದು ಅನ್ನೋ ಲೆಕ್ಕಾಚಾರದಲ್ಲಿ ಇದ್ದಾರೆ. ಇನ್ನು ಪೊಲೀಸರು ಅಷ್ಟೆ, ಕೊಲೆ ಪ್ರಕರಣದ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲು 90 ದಿನಗಳ ಕಾಲಾವಕಾಶವಿದೆ. ಚಾರ್ಜ್​ಶೀಟ್​ ಸಲ್ಲಿಕೆ ಆದರೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದೇ ಇರುತ್ತದೆ. ಹಾಗಾಗಿ ಕಾನೂನು ಪ್ರಕಾರ ಇರುವ ಅವಕಾಶವನ್ನು ಪೊಲೀಸರೂ ಬಳಸಿಕೊಳ್ತಿದ್ದಾರೆ ಅಷ್ಟೆ ಎನ್ನುವುದು ಕಾನೂನು ಪರಿಣಿತರ ಅಭಿಪ್ರಾಯ.

ಕೃಷ್ಣಮಣಿ

Tags: Darshandarshan and gangDarshan Arrest
Previous Post

ಬಿಜೆಪಿಗರ ಮೇಲೆ ರೊಚ್ಚಿಗೆದ್ದು ಪೇಪರ್ ಬಿಸಾಕಿದ ಸಿಎಂ ಸಿದ್ದರಾಮಯ್ಯ

Next Post

ಹಳಿತಪ್ಪಿದ ದಿಬ್ರುಗಢ ಎಕ್ಸ್‌ಪ್ರೆಸ್; ನಾಲ್ವರು ಸಾವು, 60 ಮಂದಿಗೆ ಗಾಯ

Related Posts

Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
0

https://youtube.com/live/7ZoYaDBylA0

Read moreDetails
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

July 10, 2025
Next Post

ಹಳಿತಪ್ಪಿದ ದಿಬ್ರುಗಢ ಎಕ್ಸ್‌ಪ್ರೆಸ್; ನಾಲ್ವರು ಸಾವು, 60 ಮಂದಿಗೆ ಗಾಯ

Recent News

Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada