• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ | ‘ಬುಡಾ’ ಮಾಜಿ ಅಧ್ಯಕ್ಷ, ಆಯುಕ್ತರಿಗೆ ಬಂಧನದ ಭೀತಿ

ಪ್ರತಿಧ್ವನಿ by ಪ್ರತಿಧ್ವನಿ
July 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಿಯಮಗಳನ್ನು ಉಲ್ಲಂಘಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಾ ಮಾಜಿ ಅಧ್ಯಕ್ಷ ಬಾಬುವಾಲಿ, ಹಿಂದಿನ ಆಯುಕ್ತ ಅಭಯ್‌ ಕುಮಾರ್‌ ಹಾಗೂ ಇತರೆ ಮೂವರ ವಿರುದ್ಧ ನಗರದ ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧನದ ಭೀತಿ ಎದುರಾಗಿದೆ.ಸರ್ಕಾರದ ಸೂಚನೆ ಅನ್ವಯ, ಬುಡಾ ಹಾಲಿ ಆಯುಕ್ತ ಶ್ರೀಕಾಂತ ಚಿಮಕೋಡೆ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಪತ್ರ ಬರೆದ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ADVERTISEMENT

ಜುಲೈ 11ರಂದೇ ಆಯುಕ್ತರು ಎಸ್ಪಿಗೆ ಪತ್ರ ಬರೆದಿದ್ದಾರೆ. ಆದರೆ, ಜುಲೈ 24ರಂದು ಪ್ರಕರಣ ದಾಖಲಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ರಾಜಕೀಯ ಹಸ್ತಕ್ಷೇಪದಿಂದ ಪೊಲೀಸರು ವಿಳಂಬ ಮಾಡಿದ್ದಾರೆ. ಬಂಧನಕ್ಕೂ ಮುಂದಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.ಬುಡಾದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಎರಡೂ ತನಿಖಾ ತಂಡಗಳು ವರದಿ ಸಲ್ಲಿಸಿ ಹಲವು ತಿಂಗಳಾಗಿವೆ.

ಆದರೆ, ತ್ವರಿತ ಗತಿಯಲ್ಲಿ ಕ್ರಮಗಳಾಗುತ್ತಿಲ್ಲ. ಈ ಸಂಬಂಧ ದೂರುದಾರ, ವಿಧಾನ ಪರಿಷತ್‌ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ತಮ್ಮದೇ ಸರ್ಕಾರದ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿದ್ದರು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರಿಗೂ ಮನವಿ ಸಲ್ಲಿಸಿದ್ದರು.ಮುಖ್ಯಮಂತ್ರಿಯವರಿಗೂ ಮನವಿ ಸಲ್ಲಿಸುವುದಾಗಿ ತಿಳಿಸಿದ್ದರು.

ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.2020ರ ನವೆಂಬರ್‌ 27ರಿಂದ 2023ರ ಮೇ 23ರ ಅವಧಿಯಲ್ಲಿ ನಿವೇಶನಗಳ ಹಂಚಿಕೆಯಲ್ಲಿ ‘ಬುಡಾ’ದಲ್ಲಿ ನಿಯಮಗಳನ್ನು ಅನುಸರಿಸಿಲ್ಲ. ಇದರಿಂದ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ಅರವಿಂದಕುಮಾರ ಅರಳಿ ಅವರು ನಗರಾಭಿವೃದ್ಧಿ ಇಲಾಖೆಗೆ ದೂರು ಸಲ್ಲಿಸಿದ್ದರು. ಅವರ ದೂರು ಆಧರಿಸಿ ಇಲಾಖೆಯು ಕಲಬುರಗಿ ವಿಭಾಗೀಯ ಕಚೇರಿಯ ನಗರ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕ ಎ.ಎಸ್‌. ಕಾಂಬಳೆ, ಜಂಟಿ ನಿರ್ದೇಶಕಿ ಶಾಂತಲಾ ಎಂ.ಎಸ್‌. ಹಾಗೂ ಧಾರವಾಡ ವಲಯ ಕಚೇರಿಯ ನಗರ ಮತ್ತು ಗ್ರಾಮಾಂತರ ಯೋಜನಾ ಹೆಚ್ಚುವರಿ ನಿರ್ದೇಶಕ ವಿವೇಕ ಎನ್‌. ಕಾರೇಕರ್‌ ಅವರನ್ನು ಒಳಗೊಂಡ ಜಂಟಿ ಪರಿವೀಕ್ಷಣಾ ತಂಡ ರಚಿಸಿತ್ತು.

ಜಂಟಿ ಪರಿವೀಕ್ಷಣಾ ತಂಡದ ಮೂವರು ಅಧಿಕಾರಿಗಳ ತಂಡವು 2023ರ ಸೆಪ್ಟೆಂಬರ್‌ 13ರಿಂದ ಸೆಪ್ಟೆಂಬರ್‌ 15ರ ವರೆಗೆ ಬುಡಾದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ, ಲೇಔಟ್‌ಗಳಿಗೆ ಭೇಟಿ ನೀಡಿ ನಿವೇಶನಗಳನ್ನು ಪರಿಶೀಲಿಸಿ ವರದಿ ಸಲ್ಲಿಸಿತ್ತು.

ನಿಯಮಗಳನ್ನು ಪಾಲಿಸದೆ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿತ್ತು. ಅದರ ಪ್ರಕಾರ ಅಂದಿನ ಬುಡಾ ಆಯುಕ್ತ ಅಭಯ್‌ ಕುಮಾರ್‌ ಅವರನ್ನು ನಗರಾಭಿವೃದ್ಧಿ ಇಲಾಖೆಯು 2023ರ ಫೆ. 14ರಂದು ಸೇವೆಯಿಂದ ಅಮಾನತುಗೊಳಿಸಿತ್ತು. ಆದರೆ, ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಲು ಏಕೆ ಹಿಂದೇಟು ಹಾಕಲಾಗುತ್ತಿದೆ ಎಂದು ದೂರುದಾರರು ಆಕ್ಷೇಪ ಎತ್ತಿದ್ದರು. ಪ್ರಕರಣ ಸಂಬಂಧ ಬಾಬುವಾಲಿ ಅವರನ್ನು

Tags: #[pratidhvanidigital#police departmentbudaGovernment of Karnataka
Previous Post

ಹೆಚ್ಚಿದ ಭಯೋತ್ಪಾದಕ ಧಾಳಿ ; ಪಾಕಿಸ್ಥಾನದ ವಿರುದ್ದ ಸೇನಾ ಕಾರ್ಯಾಚರಣೆಗೆ ಶಿವಸೇನೆ ಆಗ್ರಹ

Next Post

ಬೀದರ್|: ಮಳೆಯಲ್ಲೇ ಕೊಡೆ ಹಿಡಿದು ಪ್ರತಿಭಟನೆ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post

ಬೀದರ್|: ಮಳೆಯಲ್ಲೇ ಕೊಡೆ ಹಿಡಿದು ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada