• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಯನಾಡು ಭೂಕುಸಿತ: ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ವಯನಾಡು ಭೂಕುಸಿತ: ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ.

ADVERTISEMENT

ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ.

ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ 70 ಮಂದಿ ವಿವಿಧ ರ್ಯಾಂಕಿನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಈ ಎನ್ ಡಿ ಆರ್ ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾನಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ.

ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್ ಗಳನ್ನು ಹೆಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ.
ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ.

ಕನ್ನಡಿಗರ ರಕ್ಷಣೆಗೆ ಪ್ರಯತ್ನ

ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Tags: BJPCongress PartyKeralaKerala FloodsWaynadಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರು ನಗರಾದ್ಯಂತ ಅಕ್ರಮ ‘ಫ್ಲೆಕ್ಸ್-ಬ್ಯಾನರ್’ ಸಂಪೂರ್ಣ ಬ್ಯಾನ್ : ಬಿ.ದಯಾನಂದ್

Next Post

ಭಾರಿ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಖಡಕ್ ಸೂಚನೆ

Related Posts

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

by ಪ್ರತಿಧ್ವನಿ
April 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
Next Post
ಭಾರಿ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಖಡಕ್ ಸೂಚನೆ

ಭಾರಿ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಖಡಕ್ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada