• Home
  • About Us
  • ಕರ್ನಾಟಕ
Friday, September 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದರ್ಶನ್‌‌ ಬರೆದ ಮೂರು ಪತ್ರಗಳು.. ಅದರಲ್ಲಿ ಇದ್ದಿದ್ದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
July 31, 2024
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ದರ್ಶನ್‌‌ ಬರೆದ ಮೂರು ಪತ್ರಗಳು.. ಅದರಲ್ಲಿ ಇದ್ದಿದ್ದೇನು..?
Share on WhatsAppShare on FacebookShare on Telegram

‘ಜೈಲೂಟ ಬೇಡ.. ಮನೆಯೂಟಕ್ಕೆ ಅವಕಾಶ ಕೊಡಿ’ ಎಂದು ಹೈಕೋರ್ಟ್‌ಗೆ ರಿಟ್‌ ಅರ್ಜಿ ಹಾಕಿದ್ದ ದರ್ಶನ್‌ ಆ ಬಳಿಕ ಹೈಕೋರ್ಟ್‌ ಸೂಚನೆಯಂತೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಅರ್ಜಿ ವಜಾ ಆದ ಬಳಿಕ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅದಕ್ಕೂ ಮೊದಲು ಹೈಕೋರ್ಟ್‌ನಲ್ಲಿದ್ದ ರಿಟ್‌ ಅರ್ಜಿಯನ್ನು ವಾಪಸ್‌ ಪಡೆದಿದ್ದರು. ಇದೀಗ ದರ್ಶನ್‌‌, ಬರೆದಿದ್ದ ಮೂರು ಪತ್ರಗಳು ಬಯಲಾಗಿವೆ. ಮನೆಯೂಟಕ್ಕಾಗಿ ದರ್ಶನ್‌‌ ನೇರ ಮನವಿ ಮಾಡಿದ್ದರು ಎನ್ನುವುದು ಬಯಲಾಗಿದೆ.

ADVERTISEMENT

ಜೂನ್‌ 8ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ನಡೆದ ಬಳಿಕ ಮೈಸೂರಿನಲ್ಲಿ ಜೂನ್‌ 11ರಂದು ದರ್ಶನ್‌ ಬಂಧನ ಮಾಡಲಾಗಿತ್ತು. ವಿಚಾರಣೆ ಬಳಿಕ ಜೂನ್‌ 22ರಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಈ ನಡುವೆ ಜೈಲಿನ ಊಟ ನನಗೆ ಒಗ್ಗುತ್ತಿಲ್ಲ. ಮನೆಯೂಟಕ್ಕೆ ಅವಕಾಶ ಮಾಡಿಕೊಡಿ ಎಂದು ದರ್ಶನ್‌ ಕೋರ್ಟ್‌ಗೆ ಮನವಿ ಮಾಡಿದ್ದರು. ಅದಕ್ಕೂ ಮೊದಲು ದರ್ಶನ್‌ ಮೂವರಿಗೆ ಪತ್ರ ಬರೆದಿರುವುದು ಗೊತ್ತಾಗಿದೆ. ಕಾರಾಗೃಹ ಮತ್ತು ಸೇವೆಗಳ DG, ಜೈಲಿನ ಮುಖ್ಯ ವೈದ್ಯಾಧಿಕಾರಿ ಹಾಗು 24ನೇ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರಿಗೆ ದರ್ಶನ್‌ ಪತ್ರ ಬರೆದು ಮನೆಯೂಟ ನೀಡುವಂತೆ ಮನವಿ ಮಾಡಿದ್ದಾರೆ.

ದರ್ಶನ್‌ ಮನೆಯೂಟಕ್ಕಾಗಿ ಮೂರು ಪತ್ರ ಬರೆದಿದ್ದು, ಜೈಲು ಅಧಿಕಾರಿ ಮೂಲಕ ಕಾರಾಗೃಹ ಮತ್ತು ಸೇವೆಗಳ DG, ಜೈಲಿನ ಮುಖ್ಯ ವೈದ್ಯಾಧಿಕಾರಿ ಹಾಗು 24ನೇ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರಿಗೆ ಪತ್ರದ ಮೂಲಕ ಮನವಿ ಮಾಡಿಕೊಳ್ಳಲಾಗಿದೆ. ಜೂನ್‌ 22ರಂದು ನಾನು ಕೇಂದ್ರ ಕಾರಾಗೃಹಕ್ಕೆ ಬಂದಿದ್ದು, ದಿನನಿತ್ಯ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದೆ, ಅದರ ಜೊತೆಗೆ ಪೌಷ್ಠಿಕಾಂಶ ಉಳ್ಳ ಆಹಾರ ಸೇವಿಸುತ್ತಿದ್ದೆ. ಆದರೆ ಕೇಂದ್ರ ಕಾರಾಗೃಹದಲ್ಲಿ ನನಗೆ ಬೇಕಾದ ಆಹಾರದ ಕೊರತೆ ಎದುರಾಗಿದ್ದು, ನನ್ನ ದೇಹದ ತೂಕದಲ್ಲಿ ಸುಮಾರು 10 ಕೆಜಿಯಷ್ಟು ಇಳಿದಿದೆ. ಆದ ಕಾರಣ ಮನೆಯೂಟಕ್ಕೆ ಅವಕಾಶ ಮಾಡಿಕೊಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕಾರಾಗೃಹ ಮತ್ತು ಸೇವೆಗಳ DG ಅವರಿಗೆ ಬರೆದ ಪತ್ರದಂತೆಯೇ ಮತ್ತೊಂದು ಪತ್ರವನ್ನು 24ನೇ ಅಪರ ಮುಖ್ಯ ಮಹಾನಗರ ದಂಡಾಧಿಕಾರಿಗಳಿಗೂ ಬರೆದಿದ್ದಾರೆ. ಜೈಲಿನ ವೈದ್ಯಾಧಿಕಾರಿಗಳಿಗೂ ದರ್ಶನ್‌ ಪತ್ರ ಬರೆದಿದ್ದು, ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಸೇವಿಸಿ, ನನ್ನ ಆರೋಗ್ಯ ಮತ್ತು ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ ಎಕ್ಸ್‌ಟ್ರಾ ಪ್ರೋಟಿನ್‌ ಡಯಟ್‌‌ಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಆದರೆ ಕಾನೂನು ಪ್ರಕಾರ ಇದೆಲ್ಲಾ ಸಾಧ್ಯವಿಲ್ಲ ಅನ್ನೋ ಕಾರಣಕ್ಕೆ ಮನವಿಯನ್ನು ತಳ್ಳಿ ಹಾಕಲಾಗಿತ್ತು. ಆ ಬಳಿಕ ಹೈಕೋರ್ಟ್‌ ರಿಟ್‌ ಹಾಗು ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಮತ್ತೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲಾಗಿದೆ. ಮನೆಯೂಟ ಸಿಗುತ್ತಾ ಇಲ್ವಾ ಅನ್ನೋದು ಇನ್ನಷ್ಟೇ ತಿಳಿಯಬೇಕಿದೆ.

ಕೃಷ್ಣಮಣಿ

Tags: bailDarshandarshan and gangDarshan ArrestRenukaswamyRenukaswamy Murder Case
Previous Post

ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಸಿಎಂ ಸಿದ್ದರಾಮಯ್ಯ

Next Post

ಸಿಎಂ ಮತ್ತು ಡಿಸಿಎಂ ನಡುವೆ ಬೆಂಕಿ ಹಚ್ಚಲು ಯತ್ನಾಳ್‌ ಯತ್ನ: ಲಕ್ಷ್ಮಿ ಹೆಬ್ಬಾಳ್ಕರ್ ಟೀಕೆ!

Related Posts

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
0

ವೃತ್ತಿ ಜೀವನದಲ್ಲಿ ವಿರಾಮದ ನಂತರ, ವಿಶೇಷವಾಗಿ ತಾಂತ್ರಿಕ ಕರ್ತವ್ಯಗಳಲ್ಲಿ ಮಹಿಳೆಯರು ಮತ್ತೆ ಕಾರ್ಯಪಡೆಗೆ ಸೇರಲು ಸಹಾಯ ಮಾಡುವಲ್ಲಿ ಮತ್ತು ಮಹಿಳೆಯರು ಮರುಕೌಶಲ್ಯ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಅಭ್ಯರ್ಥಿಗಳನ್ನು ಹುರಿದುಂಬಿಸುತ್ತಿರುವ...

Read moreDetails
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

September 4, 2025

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

September 4, 2025

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

September 4, 2025
Next Post

ಸಿಎಂ ಮತ್ತು ಡಿಸಿಎಂ ನಡುವೆ ಬೆಂಕಿ ಹಚ್ಚಲು ಯತ್ನಾಳ್‌ ಯತ್ನ: ಲಕ್ಷ್ಮಿ ಹೆಬ್ಬಾಳ್ಕರ್ ಟೀಕೆ!

Recent News

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ
Top Story

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

by ನಾ ದಿವಾಕರ
September 4, 2025
Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada