ಬೆಂಗಳೂರಿನಾದ್ಯಂತ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಕೆಲವೆಡೆ ಜನಜೀವನಕ್ಕೆ ತೊಂದರೆಯಾಗಿದ್ದು ಇಂದು ಹೆಬ್ಬಾಳ ಸಮೀಪದ ಯೋಗೇಶ್ವರ ನಗರ, ನಾಗವಾರ ಜಂಕ್ಷನ್ ಹಾಗೂ ಎಚ್ಬಿಆರ್ ಲೇಔಟ್ 5ನೇ ಬ್ಲಾಕ್ ಸೇರಿದಂತೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆಯಿಂದಾಗಿ ಹಲವೆಡೆ ರಸ್ತೆ ಗುಂಡಿಗಳು ಸೃಷ್ಟಿಯಾಗಿರುವುದು ಹಾಗೂ ಫುಟ್ಪಾತ್ಗಳ ಮೇಲೆ ಕಸ, ಮಣ್ಣು ಸುರಿದಿರುವುದರಿಂದ ಅದು ಚರಂಡಿ ಸೇರಿ ನೀರು ರಸ್ತೆ ಮೇಲೆ ಹರಿಯುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶ ನೀಡಿರುವಾಗಿ ಹೇಳಿದರು.
