ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ ನಡೆದಿದೆ. ಬೆಂಗಳೂರಿನ ಜೆಪಿ ನಗರ 24ನೇ ಮುಖ್ಯರಸ್ತೆಯ ಉಡುಪಿ ಉಪಹಾರ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸಮೀರ್ ಅಂಡ್ ಮೋಸಿನ್ ಎಂಬುವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ನಿನ್ನೆ ಮಧ್ಯಾಹ್ನ 2 ಗಂಟೆಗೆ ಸ್ಫೋಟ ಸಂಭವಿಸಿದೆ. ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ಗಂಭೀರ ಸ್ಥಿತಿಯಲ್ಲಿದ್ದರು. ಅದರಲ್ಲಿ ಓರ್ವ ಯುವಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೋಸಿನ್ ಎಂಬಾತ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದಾನೆ ಎನ್ನಲಾಗಿದೆ.
ಸ್ಫೋಟ ನಡೆದ ತೀವ್ರತೆಗೆ ಮನೆಯ ವಸ್ತಗಳೆಲ್ಲಾ ಚೆಲ್ಲಾಪಿಲ್ಲಿ ಆಗಿವೆ. ಕುಕ್ಕರ್ನಿಂದ ಸ್ಫೋಟ ಸಂಭವಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, NIA ಟೀಂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ಸುಟ್ಟ ವೈಯರ್ಗಳು ಪತ್ತೆ ಆಗಿರುವುದು ಸ್ಫೋಟದ ಬಗ್ಗೆ ಮತ್ತಷ್ಟು ಅನುಮಾನ ಮೂಡಿಸುವಂತಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್ಐಎ ಹಾಗೂ ಕೇಂದ್ರ ತನಿಖಾ ತಂಡಗಳು ಭೇಟಿ ನೀಡಿ ಪರೀಶಿಲನೆ ಮಾಡುವ ತನಕ ವಿಚಾರವನ್ನು ಪೊಲೀಸ್ರು ಮುಚ್ಚಿಟ್ಟಿದ್ದು ಯಾಕೆ ಅನ್ನೋ ಪ್ರಶ್ನೆ ಎದುರಾಗಿದೆ.
ಜೆ.ಪಿ.ನಗರದ ರೂಮ್ನಲ್ಲಿ ಸ್ಫೋಟ ಪ್ರಕರಣ ನಡೆದಿದ್ದು, ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟವಾಗಿದೆ ಅಂತ ಗಾಯಾಳುಗಳು ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ. ಕುಕ್ಕರ್ ಬ್ಲಾಸ್ಟ್ ಆಗಿದ್ರೆ ವೈಯರ್ಗಳು ಬಂದಿದ್ದು ಹೇಗೆ ಅನ್ನೋ ಬಗ್ಗೆ NIA ಟೀಂ ತನಿಖೆ ಬಳಿಕ ಮಾಹಿತಿ ಹೊರಬರಬೇಕಿದೆ. ಇಬ್ಬರು ಗಾಯಾಳುಗಳು ಸ್ಥಳೀಯ ಸಲ್ಯೂನ್ ಶಾಪ್ನಲ್ಲಿ ಕೆಲಸ ಮಾಡ್ತಿದ್ರು ಅಂತಾ ಪೊಲೀಸ್ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಸ್ಫೋಟ ನಡೆದ ಸ್ಥಳದಲ್ಲಿ ಪುಟ್ಟೇನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದು, ಎನ್ಐಎ ಹಾಗೂ ಐಎಸ್ಡಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಿದ್ದಾರೆ.. ಸ್ಫೋಟದ ಸ್ಥಳದಲ್ಲಿ ಸಿಗುವ ವಸ್ತುಗಳನ್ನು ಕಲೆ ಹಾಕಲಾಗುತ್ತಿದೆ. ನಾಳೆ ಸ್ವಾತಂತ್ರ್ಯೋತ್ಸವ ಆಚರಣೆ ಇದ್ದು, ಮಂಗಳೂರಿನಂತೆ ಬೆಂಗಳೂರಿನಲ್ಲೂ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಯ್ತಾ..? ಅನ್ನೋ ಅನುಮಾನ ದಟ್ಟವಾಗುತ್ತಿದೆ. ಗಾಯಾಳುಗಳು ಉತ್ತರ ಭಾರತೀಯ ಮೂಲದವರಾಗಿದ್ದು, ಕುಕ್ಕರ್ ಬ್ಲಾಸ್ಟ್ ಮಾಡುವಾಗ ಸ್ಫೋಟ ಸಂಭವಿಸಿದ್ಯಾ..? ಅನ್ನೋ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.
ಕೃಷ್ಣಮಣಿ