• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆಟಿಕೆಗಾಗಿ ತಂಗಿಯೊಂದಿಗೆ ಜಗಳವಾಡಿದ ಮಗಳನ್ನೇ ಹೊಡೆದು ಕೊಂದ ತಂದೆ

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, ಇತರೆ / Others
0
ಆಟಿಕೆಗಾಗಿ ತಂಗಿಯೊಂದಿಗೆ ಜಗಳವಾಡಿದ ಮಗಳನ್ನೇ ಹೊಡೆದು ಕೊಂದ ತಂದೆ
Share on WhatsAppShare on FacebookShare on Telegram

ಜಂಜಗಿರ್ ಚಂಪಾ (ಛತ್ತೀಸ್‌ಗಢ): ಹೆಣ್ಣು ಮಕ್ಕಳಿಗೆ ಅವರ ತಂದೆಯೇ ಆದರ್ಶ, ಸೂಪರ್‌ಹೀರೋನಂತೆ. ಒಬ್ಬ ತಂದೆ ತನ್ನ ಹೆಣ್ಣುಮಕ್ಕಳ ಸುರಕ್ಷತೆಗಾಗಿ ಮತ್ತು ಅವರ ಜೀವನವನ್ನು ಉತ್ತಮಗೊಳಿಸಲು ಎಲ್ಲವನ್ನೂ ಪಣಕ್ಕಿಡುತ್ತಾನೆ. ಆದರೆ ಜಾಂಜ್ಗೀರ್ ಚಂಪಾದಲ್ಲಿ ವಿಕೃತ ತಂದೆಯೊಬ್ಬ ತನ್ನ ಹಿರಿಯ ಮಗಳನ್ನು ಹೊಡೆದು ಸಾಯಿಸಿದ್ದಾನೆ.

ADVERTISEMENT

ಕಿರಿಯ ಮಗಳ ಮೇಲೂ ತಂದೆ ಹಲ್ಲೆ ಮಾಡಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.ಈ ಇಬ್ಬರೂ ಮಕ್ಕಳೂ ಆಟಿಕೆಗಳಿಗಾಗಿ ತಮ್ಮೊಳಗೆ ಜಗಳವಾಡುತ್ತಿದ್ದರು.ಹೆಣ್ಣು ಮಕ್ಕಳ ನಡುವಿನ ಜಗಳದಿಂದ ಕಂಟ್ರೋಲ್ ಕಳೆದುಕೊಂಡ ತಂದೆ ಕೋಪದ ಭರದಲ್ಲಿ ಅವರನ್ನು ಥಳಿಸಿದ್ದಾನೆ.ಘಟನೆಯ ದಿನ ಹಿರಿಯ ಮತ್ತು ಕಿರಿಯ ಹೆಣ್ಣು ಮಕ್ಕಳು ಆಟಿಕೆಗಳೊಂದಿಗೆ ಆಟವಾಡುತ್ತಿದ್ದರು. ಆಟವಾಡುವಾಗ ಇಬ್ಬರೂ ಒಂದೇ ಆಟಿಕೆಯಿಂದ ಆಟವಾಡಲು ಜಗಳವಾಡಿದರು.

ಇಬ್ಬರು ಸಹೋದರಿಯರ ನಡುವಿನ ಜಗಳದಿಂದ ಸಲ್ಮಾನ್ ಎಂದು ಗುರುತಿಸಲಾದ ವ್ಯಕ್ತಿ ಸಿಟ್ಟಿಗೆದ್ದಿದ್ದಾನೆ. ಕೆಲವೇ ನಿಮಿಷಗಳಲ್ಲಿ, ತಂದೆಗೆ ಕ್ರೂರತೆಯ ಪರಿ ಹೇಗಿತ್ತು ಎಂದರೆ ಅವನು ಇಬ್ಬರನ್ನೂ ನಿರ್ದಯವಾಗಿ ಹೊಡೆಯಲು ಪ್ರಾರಂಭಿಸಿದನು.ಸ್ಥಳೀಯರು ಇಬ್ಬರು ಹೆಣ್ಣು ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ಬಳಿಕ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾಗ ಮತ್ತೊಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಪಂಚನಾಮ ಸಿದ್ಧಪಡಿಸಿದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ’’ ಎಂದು ಚಂಪಾ ಎಸ್‌ಡಿಒಪಿ ಯದುಮಣಿ ಸಿದರ್ ತಿಳಿಸಿದ್ದಾರೆ.ಪೊಲೀಸರ ಆರಂಭಿಕ ತನಿಖೆಯ ಪ್ರಕಾರ, ಇವನ ವಿಕೃತಿ ಮತ್ತು ಕ್ರೂರತೆಗೆ ಜಿಗುಪ್ಸೆಗೊಂಡು ಅವನ ಹೆಂಡತಿ ಅವನನ್ನು ತೊರೆದು ಹೋಗಿದ್ದು ಆರೋಪಿ ಪ್ರತಿದಿನ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ಪೊಲೀಸರು ತನಿಖೆಯಲ್ಲಿ ತಿಳಿಸಿದ್ದಾರೆ.

ಹೀಗಾಗಿ ಆಕೆ ಆತನನ್ನು ತೊರೆದಿದ್ದಾಳೆ ಎನ್ನಲಾಗಿದೆ. ಪತ್ನಿ ಹೋದ ಬಳಿಕ ಆರೋಪಿ ತಂದೆ ಇಬ್ಬರು ಹೆಣ್ಣು ಮಕ್ಕಳನ್ನು ತನ್ನ ಬಳಿಯೇ ಇಟ್ಟುಕೊಂಡಿದ್ದ. ಹೆಂಡತಿ ತನ್ನ ಹೆಣ್ಣು ಮಕ್ಕಳನ್ನು ಭೇಟಿಯಾಗಲು ಬರುತ್ತಿದ್ದಳು.

Tags: Department of Women and Child WelfareHome Minister Amit ShahPolice department
Previous Post

ಒಡಿಶಾದಲ್ಲಿ ಸಿಡಿಲು ಬಡಿದು ಆರು ಜನರು ಸಾವು

Next Post

ಪ್ರಾಸಿಕ್ಯೂಷನ್‌ ವಿರುದ್ಧ ಸಿದ್ದು ಕಾನೂನು ಸಮರ ! ಇಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ !

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

October 28, 2025
Next Post
ಪ್ರಾಸಿಕ್ಯೂಷನ್‌ ವಿರುದ್ಧ ಸಿದ್ದು ಕಾನೂನು ಸಮರ ! ಇಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ !

ಪ್ರಾಸಿಕ್ಯೂಷನ್‌ ವಿರುದ್ಧ ಸಿದ್ದು ಕಾನೂನು ಸಮರ ! ಇಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ !

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada