ರಾಜ್ಯ ರಾಜಕಾರಣದ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ಲಾಕ್ ಮೇಲ್ ಆರೋಪ ಮಾಡಿದ್ದಾರೆ ಸಚಿವರು ಶಾಸಕರು ತಮ್ಮನ್ನು ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ ಆದರೆ ತಾವು ಇದಕ್ಕೆಲ್ಲ ಜಗ್ಗುವುದಿಲ್ಲ ಎಂದು ಖಡಕ್ಕಾಗಿ ತಿರುಗೇಟು ಕೊಟ್ಟಿದ್ದಾರೆ.
ರಾಜ್ಯಪಾಲರು ಸಿಎಂ ವಿರುದ್ಧ ಪ್ರಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವ ಕಾರಣಕ್ಕೆ, ನನ್ನನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಬೆದರಿಸುವ ತಂತ್ರ ಹೂಡಿದೆ. ಹಳೆಯ ಪ್ರಕರಣಗಳಿಗೆ ಮರು ಜೀವ ನೀಡುವ ಪ್ರಯತ್ನಕ್ಕೆ ಕೈ ಹಾಕುವ ಮೂಲಕ ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದೆ ಎಂದು ಗುಡುಗಿದ್ದಾರೆ.
ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಮೇಲೆ ಬಂದ ಆಪಾದನೆಗಳನ್ನು ಒಪ್ಪಂಟಿಯಾಗಿ ಎದುರಿಸಿದ್ದೇನೆ ಆದರೆ ಸಿಎಂ ಸಿದ್ದರಾಮಯ್ಯ ಸಚಿವರು ಶಾಸಕರ ದಂಡನೆ ಕಟ್ಟಿಕೊಂಡು ರಾಜ್ಯಪಾಲರ ವಿರುದ್ಧ ಮುಗಿಬಿದ್ದಿದ್ದಾರೆ ಈ ದುರ್ವರ್ತನೆ ಸರಿಯಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹರಿಹಾಯಿದಿದ್ದಾರೆ.