
ಮಂಡ್ಯ:ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಶಾಸಕ ಗಣಿಗ ರವಿಕುಮಾರ್ (Ganiga Ravikumar) ಆರೋಪಿಸಿದ್ದಾರೆ.
ಮಂಡ್ಯದ (Mandya)ಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರ ರಚಿಸುತ್ತಿದ್ದ ದಿನದಿಂದಲೇ ಬಿಜೆಪಿ (BJP) ಸರ್ಕಾರ ಕೆಡಲವು ಪ್ರಯತ್ನಿಸುತ್ತಿದೆ.
ಈಗ ಸಂತೋಷ್, ಶೋಭಾ ಕರಂದ್ಲಾಜೆ, ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಸರ್ಕಾರ ಕೆಡವಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ನ ಶಾಸಕರನ್ನು ಸಂಪರ್ಕ ಮಾಡಿ 100 ಕೋಟಿ ರೂ.ಆಫರ್ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸುಮಾರು 50 ಜನ ಶಾಸಕರನ್ನು ಸಂಪರ್ಕ ಮಾಡಿದ್ದಾರೆ. ಅವರಲ್ಲಿ ನನ್ನನ್ನು ಸಹ ದೂರವಾಣಿ ಮೂಲಕ ಸಂಪರ್ಕ ಮಾಡಿ ಆಫರ್ ಮಾಡಿದ್ದಾರೆ. ನನ್ನ ಬಳಿ ಕಾಲ್ ರೆಕಾರ್ಡ್ ಇದೆ. ಅದರ ಬಗ್ಗೆ ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದೇವೆ. ಸಾಕ್ಷಿ ಸಮೇತ ರೆಡ್ ಹ್ಯಾಂಡ್ ಆಗಿ ಐಟಿ, ಇಡಿ ಅವರಿಗೆ ಹಿಡಿದು ಕೊಡುತ್ತೇವೆ. ನಮ್ಮ ಸರ್ಕಾರ ಬಂಡೆಯಂತೆ ಸ್ಥಿರವಾಗಿ ಇದೆ. ನಮ್ಮ ಸಿಎಂ ಸ್ಟ್ರಾಂಗ್ ಇದ್ದಾರೆ. ನಮ್ಮ ಸರ್ಕಾರವನ್ನು ಕೆಡವಲು ಸಾಧ್ಯವಿಲ್ಲ. 5 ವರ್ಷ ರಾಜ್ಯದಲ್ಲಿ ನಮ್ಮ ಸರ್ಕಾರ ಇರುತ್ತದೆ ಎಂದು ಗುಡುಗಿದ್ದಾರೆ.