• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಪಾಲರೇ ನೀವು ಬೇಡ ವಾಪಸ್‌ ಹೋಗಿ.. ಕಂಡಲ್ಲಿ ಘೇರಾವ್..

ಕೃಷ್ಣ ಮಣಿ by ಕೃಷ್ಣ ಮಣಿ
September 4, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ರಾಜ್ಯಪಾಲರೇ ನೀವು ಬೇಡ ವಾಪಸ್‌ ಹೋಗಿ.. ಕಂಡಲ್ಲಿ ಘೇರಾವ್..
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರವಾಗಿ, ಗವರ್ನರ್ ವಿರುದ್ಧ ಘೇರಾವ್‌ಗೆ ಶೋಷಿತ ಒಕ್ಕೂಟಗಳು ನಿರ್ಧಾರ ಮಾಡಿವೆ. ರಾಜ್ಯಾದ್ಯಂತ ಕಪ್ಪು ಪಟ್ಟಿ ಪ್ರದರ್ಶನದ ಮೂಲಕ ಘೇರಾವ್ ಹಾಕಲು ಕರೆ ಕೊಡಲಾಗಿದೆ. ಬೆಂಗಳೂರಲ್ಲಿ ಕರ್ನಾಟಕ ಶೋಷಿತ ಸಮುದಾಯದ ಮಹಾ ಒಕ್ಕೂಟ ಘೋಷಣೆ ಮಾಡಿದೆ.

ADVERTISEMENT

ಶೋಷಿತ ಒಕ್ಕೂಟಗಳ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ರಾಜ್ಯಪಾಲರ ನಿರ್ಧಾರ ಖಂಡಿಸಿ ಕಪ್ಪು ಬಟ್ಟೆ ಪ್ರದರ್ಶನ ಮಾಡುತ್ತೇವೆ. ಘಟಿಕೋತ್ಸವ ವೇಳೆ ಕಪ್ಪು ಬಟ್ಟೆ ಪ್ರದರ್ಶನ ಮಾಡುತ್ತೇವೆ. ವಿದ್ಯಾರ್ಥಿಗಳು, ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗ್ತಾರೆ. ರಾಜ್ಯಪಾಲರೇ ಗೋ ಬ್ಯಾಕ್ ಅಂತ ಘಟಿಕೋತ್ಸವ ವೇಳೆ ಕೂಗುತ್ತೇವೆ. ರಾಜ್ಯಪಾಲರನ್ನು ತೊಲಗಿಸಿ, ಕರ್ನಾಟಕ ರಕ್ಷಿಸಿ, ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಘೇರಾವ್‌ ಹಾಕಲು ಕರೆ ಕೊಡಲಾಗಿದೆ.

ಬೆಂಗಳೂರು, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದ್ದು, ಘಟಿಕೋತ್ಸವ ಕಾರ್ಯಕ್ರಮ ನಡೆಯುವ ವೇಳೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲರು ಭಾಗಿಯಾಗಲಿದ್ದು, ಆ ವೇಳೆ ಮುಜುಗರ ಉಂಟು ಮಾಡಲು ನಿರ್ಧಾರ ಮಾಡಲಾಗಿದೆ.

ಶೋಷಿತ ಸಮುದಾಯ ಮಹಾ ಒಕ್ಕೂಟ ಪ್ರಧಾನ ಸಂಚಾಲಕ ಕೆ .ಎಂ ರಾಮಚಂದ್ರಪ್ಪ ಮಾತನಾಡಿ, ಎಲ್ಲೆಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯುತ್ತೆ ಅಲ್ಲೆಲ್ಲಾ ಪ್ರತಿಭಟನೆ ಮಾಡುತ್ತೇವೆ. ರಾಜ್ಯಪಾಲರು ಘಟಿಕೋತ್ಸವದಲ್ಲಿ ಭಾಗಿಯಾಗಿ ಹೋಗುವವರೆಗೂ ಪ್ರತಿಭಟಿಸುತ್ತೇವೆ. ರಾಷ್ಟ್ರಪತಿಗಳನ್ನು ಭೇಟಿ ಮಾಡಲು ನಿರ್ಧಾರ ಮಾಡಲಾಗಿದೆ. ದೆಹಲಿಯಲ್ಲು ಪ್ರತಿಭಟಿಸಲು ಸಿದ್ಧತೆ ನಡೆಸಲಾಗ್ತಿದೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯರ ಅವರನ್ನು ಬದಲಾವಣೆ ಮಾಡಬಾರದು. ಈ ಬಗ್ಗೆ ಹಿಂದಿನಿಂದಲೂ ನಮ್ಮ ನಿಲುವು ಒಂದೇ, ಮುಂದೆಯೂ ಅದೇ ನಿಲುವು. ಸತೀಶ್ ಜಾರಕಿಹೊಳಿ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾರು ಬೇಕಾದ್ರು ಸಿಎಂ ಆಗಬಹುದು. ಅವರ ಬೆಂಬಲಕ್ಕೆ ನಾವು ನಿಲ್ಲುತ್ತೇವೆ ಎಂದು ಇದೇ ವೇಳೆ ಅನಂತ ನಾಯ್ಕ್ ಹೇಳಿದ್ದಾರೆ.

ಸಿಎಂ ಅವರನ್ನು ಮುಡಾ ಪ್ರಕರಣದಲ್ಲಿ ಎಳೆದು ತಂದು ಸರ್ಕಾರದ ಶಕ್ತಿಯನ್ನು ಡೈವರ್ಟ್ ಮಾಡಲಾಗ್ತಿದೆ. ಇದು ಜೆಡಿಎಸ್, ಬಿಜೆಪಿ ರಾಜಕೀಯ ಕುತಂತ್ರ. ನ್ಯಾಯಾಲಯದಲ್ಲಿ ಎಲ್ಲರು ಗಮನಿಸುತ್ತಿದ್ದಾರೆ. ಸಿಎಂ ಪಾತ್ರದ ಬಗ್ಗೆ ನ್ಯಾಯಮೂರ್ತಿಗಳು ಕೇಳ್ತಿದ್ದಾರೆ. ಇದಕ್ಕೆ ಯಾರು ಉತ್ತರ ಕೊಟ್ಟಿಲ್ಲ. ಉಳಿದ ಸೈಟ್ ಹಂಚಿಕೆ ಬಗ್ಗೆ ಮಾಹಿತಿ ಬಗ್ಗೆ ಯಾರು ಮಾತಾಡ್ತಿಲ್ಲ. ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಲಾಗ್ತಿದೆ ಎಂದಿದ್ದಾರೆ.

ರಾಜ್ಯಪಾಲರ ವಿರುದ್ಧ ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡ್ತಿದ್ದೇವೆ. ರಾಜ್ಯಪಾಲರು ಕಾನೂನು ವ್ಯವಸ್ಥೆಯನ್ನು ಹಾಳು ಮಾಡ್ತಿದ್ದಾರೆ. ಸಿದ್ದರಾಮಯ್ಯ ವಿರೋಧಿ ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರು ನಡೆದುಕೊಳ್ತಿದ್ದಾರೆ. 11 ಮಸೂದೆಗಳನ್ನು ವಾಪಸ್ಸು ಕಳಿಸಿದ್ದಾರೆ. ಪ್ರಜಾಪ್ರಭುತ್ವ ಸಂವಿಧಾನಕ್ಕೆ ಬೆಲೆಕೊಡದ ರಾಜ್ಯಪಾಲರು ರಾಜ್ಯಕ್ಕೆ ಬೇಡ. ರಾಜ್ಯಪಾಲರು ಕರ್ನಾಟಕದಲ್ಲಿ ಇರುವ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ರಾಷ್ಟ್ರಪತಿಗಳು ರಾಜ್ಯಪಾಲರನ್ನು ವಾಪಸ್ಸು ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags: BJPCM Siddaramaiahcm siddaramaiah casecm siddaramaiah in muda scamcm siddaramaiah latest newscm siddaramaiah reactioncm siddaramaiah reliefcm siddaramaiah vs govermorcm siddaramaiah wife in muda scamcongress govt vs governorCongress Partygovernment vs governorGovernorkumaraswamy vs siddaramaiahmuda scam cm siddaramaiahr ashok slams cm siddaramaiahsiddaramaiahsiddaramaiah muda scamsiddaramaiah vs by vijayendra over muda scamಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

Next Post

ಸಿಎಂ ವಿರುದ್ಧ ಗುಡುಗಿ.. ಕ್ಷಮೆ ಕೋರಿದ ಬಿಜೆಪಿ ಶಾಸಕ..

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

April 25, 2026
Next Post
ಸಿಎಂ ವಿರುದ್ಧ ಗುಡುಗಿ.. ಕ್ಷಮೆ ಕೋರಿದ ಬಿಜೆಪಿ ಶಾಸಕ..

ಸಿಎಂ ವಿರುದ್ಧ ಗುಡುಗಿ.. ಕ್ಷಮೆ ಕೋರಿದ ಬಿಜೆಪಿ ಶಾಸಕ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada