• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ:ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
September 4, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್  ಸರ್ಕಾರ ಇರುವುದಿಲ್ಲ:ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹಾವೇರಿ (ಶಿಗ್ಗಾವಿ) :ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ.ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಹೇಳಿದರು.ಅವರು ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಏರ್ಪಡಿಸಿದ ಸದಸ್ಯತಾ ಅಭಿಯಾನದಲ್ಲಿ ಪಾಲ್ಗೊಂಡು ಅಭಿಯಾನಕ್ಕೆ ಚಾಲನೆ ಕೊಟ್ಟು ಮಾತನಾಡಿದರು.

ADVERTISEMENT

ಸೆಪ್ಟಂಬರ್ 6 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಲಿದೆ. ಅದಕ್ಕೂ ಪೂರ್ವದಲ್ಲಿ ಸವಣೂರು ಶಿಗ್ಗಾವಿ ತಾಲೂಕಿನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಬೇಕೆಂದು ಎರಡೂ ತಾಲೂಕು ಅಧ್ಯಕ್ಷರು‌ ಹಾಗೂ ಪಕ್ಷದ ಕಾರ್ಯಕರ್ತರು ಅಪೇಕ್ಷೆ ಪಟ್ಟಿರುವುದರಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಡುತ್ತಿದ್ದೇವೆ. ಹೋತನಹಳ್ಳಿ ಗ್ರಾಮದಿಂದ ಶ್ರೀಮಠದ ಆಶೀರ್ವಾದದಿಂದ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಇದೊಂದು ಶುಭ ಸಂಕೇತ, ಈ ಶುಭ ಸಂಕೇತದ ಅಭಿಯಾನವನ್ನು ಪ್ರತಿಯೊಂದು ಗ್ರಾಮಗಳಿಗೆ ತಲುಪಿಸಬೇಕು ಎಂದು ಹೇಳಿದರು.

ಭಾರತೀಯ ಜನತಾ ಪಕ್ಷದ ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರಿರುವ ದೊಡ್ಡ ಪಕ್ಷ, ಕಳೆದ ಬಾರಿ 7 ಕೋಟಿ ಜನರು ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದರು. ಈ ಬಾರಿ 10 ಕೋಟಿ ಸದಸ್ಯರನ್ನು ಮಾಡುವ ಗುರಿಯೊಂದಿಗೆ ನಮ್ಮ ರಾಷ್ಟ್ರೀಯ ನಾಯಕರು ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ.ಅವರ ಜನಪ್ರೀಯತೆ ಎಷ್ಟಿದೆ ಎಂದರೆ, ಪಂಡಿತ್ ಜವಾಹರಲಾಲ್ ನೆಹರು ಅವರ ನಂತರ ಸತತ ಮೂರನೆ ಬಾರಿಗೆ ಪ್ರಧಾನಿಯಾಗಿರುವ ದಾಖಲೆ ಇವರದ್ದಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಅತ್ಯಂತ ಬಲಿಷ್ಠವಾಗಿ ಬೆಳೆಯುತ್ತಿರುವ ಪಕ್ಷ ಬಿಜೆಪಿ. ವಿರೋಧ ಪಕ್ಷಗಳು ಎಷ್ಟೇ ಅಪಪ್ರಚಾರ ಮಾಡಿದರೂ ಭಾರತದ ಜನ ಹಾಗೂ ಕರ್ನಾಟಕದ ಜನರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದರಿಂದ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಂದು ವಿಪರ್ಯಾಸ ಏನಂದರೆ ನಾವು ಮೂರನೇ ಬಾರಿ ಅಧಿಕಾರ ನಡೆಸುತ್ತಿರುವಾಗ 50 ಸ್ಥಾನ ಗಳಿಸಿದ್ದ ಕಾಂಗ್ರೆಸ್ 99 ಸ್ಥಾನ ಗಳಿಸಿ ಏನೋ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದರು.

ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಹಾವೇರಿ ಲೋಕಸಭಾ ಸದಸ್ಯನಾಗಿ ದೆಹಲಿ ಸಂಸತ್ತಿನಲ್ಲಿ ಪಾಲ್ಗೊಳ್ಳುವಂತಾಗಿದೆ. ಯಾವ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆಯೋ ಅಲ್ಲಿನ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಮತ್ತೆ ಅಧಿಕಾರ ಹಿಡಿಯಲಿದೆ. ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿಯವರು ನಾಲ್ಕನೇ ಬಾರಿಗೂ ಪ್ರಧಾನಿಯಾಗುತ್ತಾರೆ ಎಂದು ಹೇಳಿದರು.

ಶಿಗ್ಗಾವಿ ಜನರನ್ನು ಮರೆಯುವ ಪ್ರಶ್ನೆಯೇ ಇಲ್ಲ.

ಹೋತನಹಳ್ಳಿ ಗ್ರಾಮ ನನಗೆ ಅತ್ಯಂತ ಅಭಿಮಾನ ಇರುವ ಗ್ರಾಮ ಇಲ್ಲಿನ ಹಿರಿಯರು, ಯುವಕರು ,ಎಲ್ಲರೂ ಬಹಳ ಆತ್ಮೀಯತೆಯಿಂದ ನಿಮ್ಮ ಕುಟುಂಬದ ಒಬ್ಬ ಸದಸ್ಯನಾಗಿ ನನ್ನನ್ನು ಕಂಡಿದ್ದೀರಿ, ನಿಮಗೆ ಕೋಟಿ ಕೋಟಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.ಅಧಿಕಾರ ಬರುತ್ತದೆ ಹೋಗುತ್ತದೆ.ನಾನು ನಿಮ್ಮ ಶಾಸಕನೂ ಅಲ್ಲ, ಆದರೂ ನೀವೆಲ್ಲ ಬಂದಿರುವುದು ಇದೊಂದು ಪ್ರೀತಿಯ ಸಂಕೇತ ಎಂದು ನಾನು ಭಾವಿಸಿದ್ದೇನೆ.ಬಹಳಷ್ಟು ಜನರು ನಾನು ಲೋಕಸಭೆಗೆ ಹೋದಮೇಲೆ ನೀವು ನಮ್ಮನ್ನು ಬಿಟ್ಟು ಹೋದಿರಿ ಎನ್ನುತ್ತಾರೆ. ನಾನು ನಿಮ್ಮನ್ನು ಯಾವತ್ತೂ ಬಿಡುವುದಿಲ್ಲ. ನಾನು ಎಂಪಿನೇ ಆಗಬೇಕು, ಮಂತ್ರಿನೇ ಆಗಬೇಕು ಅಂತ ಇಲ್ಲ. ಏನೂ ಇಲ್ಲದಿದ್ದರೂ ಎದೆಕೊಟ್ಟು ನಿಮ್ಮ ಕೆಲಸ ಮಾಡುವ ಶಕ್ತಿಯನ್ನು ಭಗವಂತ ಹಾಗೂ ನೀವು ಕೊಟ್ಟಿದ್ದೀರಿ. ನನ್ನ ಜೀವನದ ಉಸಿರು ಇರುವವರೆಗೂ ಈ ಕ್ಷೇತ್ರದ ಜನರ ಸೇವೆಯನ್ನು ನಾನು ಮಾಡುತ್ತೇನೆ ಎಂದು ಹೇಳಿದರು.

ಶಿಗ್ಗಾವಿ ಕ್ಷೇತ್ರ ಮೊದಲು ಹೇಗಿತ್ತು ಈಗ ಹೇಗಾಗಿದೆ ಎನ್ನುವುದು ನಿಮ್ಮ ಅನುಭವಕ್ಕೆ ಬಂದಿದೆ. ಇಲ್ಲಿನ ಹಿರಿಯರಾದ ರುದ್ರಗೌಡರು ಈಗ ನಮ್ಮೊಂದಿಗಿಲ್ಲ. ಅವರು ಅಭಿವೃದ್ಧಿಯ ಬಗ್ಗೆ ಅವರದೇ ಆದ ಒಂದು ಕಲ್ಪನೆ ಇಟ್ಟುಕೊಂಡು ಕೆಲಸ ಮಾಡಿದರು. ನಾವು ಶಿಗ್ಗಾವಿ ಏತ ನೀರಾವರಿ ಯೋಜನೆ ಮಾಡಿದಾಗ ಹೋತನಳ್ಳಿ ಅತಿ ಎತ್ತರದ ಪ್ರದೇಶಕ್ಕೆ ನೀರು ತರಬೇಕು ಎಂದು ನಮಗೆ ಯಾರಿಗೂ ಕಲ್ಪನೆಯಿಲ್ಲ, ನಿಮ್ಮನ್ನೆಲ್ಲ ಕರೆದುಕೊಂಡು ಬಂದು ಹೋತನಹಳ್ಳಿ ನೀರಾವರಿ ಕೆರೆ ತುಂಬಿಸುವ ಯೋಜನೆ ಮಾಡುವಂತೆ ಮಾಡಿದ್ದಾರೆ. ನೀವು ಏನೇ ಕೆಲಸ ಹೇಳಿದರೂ ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುವ ಕೆಲಸ ಮಾಡಿದ್ದೇನೆ ಎಂದರು.

ಸರ್ಕಾರದ ಬಳಿ ಹಣವಿಲ್ಲ

ನಾವಿದ್ದಾಗ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಕೊಡುತ್ತಿದ್ದೆವು ಅದನ್ನು ನಿಲ್ಲಿಸಿದರು. ಡಿಸೆಲ್ ಸಬ್ಸಿಡಿ ಕೊಡುತ್ತಿದ್ದೇವು ಅದನ್ನು ನಿಲ್ಲಿಸಿದರು. ಇದು ರೈತರು ಹಾಗೂ ವಿದ್ಯಾರ್ಥಿಗಳ ವಿರೋಧಿ ಸರ್ಕಾರ ಗ್ಯಾರೆಂಟಿಯಿಂದ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಜಾಗ ಇಲ್ಲದಂತಾಗಿದೆ. ಹಣಕಾಸಿನ ದಿವಾಳಿತನಕ್ಕೆ ಬಂದಿದೆ. ಇದೇ ರೀತಿ ಮುಂದುವರೆದರೆ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗನವಾಡಿ ಕಾರ್ಯಕರ್ತರ ವೇತನ ನಿಲ್ಲುತ್ತದೆ. ನಾವು ಒಂದು ಭವಿಷ್ಯ ಹೇಳುತ್ತೇನೆ. ನಾವು ದೊಡ್ಡ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ಮಾಡಬೇಕು. ರೈತರು, ಮಹಿಳೆಯರು, ಯುವಕರನ್ನು ಬೂತ್ ಮಟ್ಟದಲ್ಲಿ ಸದಸ್ಯರನ್ನಾಗಿ ಮಾಡಬೇಕು. ನಂತರ ದೊಡ್ಡ ಸಮಾವೇಶ ಮಾಡೋಣ, ಬರುವ ನವೆಂಬರ್‌ನಲ್ಲಿ ಉಪ ಚುನಾವಣೆ ಬರಲಿದ್ದು ಅದಕ್ಕೂ ಮುನ್ನ ಸದಸ್ಯತ್ವ ಅಭಿಯಾನ ಯಶಸ್ವಿಯಾಗಬೇಕು. ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಗಳಲ್ಲಿ ನಾವು ಜಯಭೇರಿ ಬಾರಿಸಬೇಕು ಎಂದು ಹೇಳಿದರು.

Tags: BJPCongress PartyEx CM Basavaraj BommaiPM Modiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಾವೇರಿ | ₹1.17 ಕೋಟಿ ಅಕ್ರಮ ಆಸ್ತಿ: ಆರ್‌ಎಫ್‌ಒ ಅಮಾನತು

Next Post

ಯುವತಿಯ ಭೀಕರ ಹತ್ಯೆ :ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post

ಯುವತಿಯ ಭೀಕರ ಹತ್ಯೆ :ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada