• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಯುವತಿಯ ಭೀಕರ ಹತ್ಯೆ :ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
September 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬಸವಕಲ್ಯಾಣ :ತಾಲೂಕಿನ ಗಾಂಧಿ ವೃತ್ತದಿಂದ ತ್ರಿಪುರಾಂತನ ವಾಲ್ಮೀಕಿ ವೃತ್ತದವರಿಗೆ ಕು.ಭಾಗ್ಯಶ್ರೀ ಭೀಕರ ಹತ್ಯೆ ಖಂಡಿಸಿ, ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕಾಗಿ ಆಗ್ರಹಿಸಿ ಮಂಗಳವಾರ ಬೃಹತ್ ಪ್ರತಿಭಟನೆ ಜರುಗಿತು.

ADVERTISEMENT

ತಾಲೂಕು ಟೋಕರೆ ಕೋಳಿ ಸಮಾಜ ಹಾಗೂ ವಿವಿಧ ಸಂಘಟನೆಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಪಾಲ್ಗೊಂಡಿದ್ದು, ಕು.ಭಾಗ್ಯಶ್ರೀ ಅವರನ್ನು ಅಪಹರಿಸಿ ಹತ್ಯೆ ಗೈದ ಆರೋಪಿಯನ್ನ ಎನ್ಕೌಂಟರ್ ಮಾಡಬೇಕಾಗಿ ಉಪವಿಭಾಗ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರಿಗೆ ಪತ್ರ ನೀಡಿ ಒತ್ತಾಯಿಸಿದರು.

ಗಾಂಧಿ ವೃತ್ತದಿಂದ ಪ್ರಾರಂಭವಾದ ಯಾರ್ಲಿ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ವಾಲ್ಮೀಕಿ ವೃತ್ತದ ವರೆಗೆ ಜರುಗಿದ್ದು, ರ್ಯಾಲಿ ಉದ್ದಕ್ಕೂ ಭಾಗ್ಯಶ್ರೀ ಹತ್ಯೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂಬ ಘೋಷಣೆಗಳು ಕೇಳಿ ಬಂದವು.

ಪ್ರಕರಣದ ಹಿನ್ನೆಲೆ :ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಭಾಗ್ಯಶ್ರೀ, ಆಗಸ್ಟ್ 29ರಂದು ರಾತ್ರಿ ಮನೆಯಿಂದ ಹೊರಗೆ ಹೋದ ನಂತರ ನಾಪತ್ತೆಯಾಗಿದ್ದಳು. ಮನೆಗೆ ಬಾರದಿದ್ದಕ್ಕೆ ಹೆತ್ತವರು ಚಿಂತಾಕ್ರಾಂತರಾಗಿದ್ರು. ಮಗಳಿಗಾಗಿ ಊರೆಲ್ಲಾ ಹುಡುಕಿದ್ರು, ನೆಂಟರೆಲ್ಲರನ್ನೂ ವಿಚಾರಿಸಿದ್ರು. ಆದ್ರೂ, ಯಾವುದೇ ಪ್ರಯೋಜವಾಗಿರಲಿಲ್ಲ.ಎರಡು ದಿನಗಳಾದ ಬಳಿಕ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 31ರಂದು ಮಿಸ್ಸಿಂಗ್ ಕಂಪ್ಲೆಂಟ್ ಕೂಡಾ ದಾಖಲಿಸಿದ್ರು.ಬಸವಕಲ್ಯಾಣ ಪೊಲೀಸರು ಭಾಗ್ಯಶ್ರೀ ಪತ್ತೆಗಾಗಿ ಹುಡುಕಾಟ‌ ನಡೆಸಿದ್ರು. ಪೊಲೀಸರು, ಹೆತ್ತವರು ಅಷ್ಟೆಲ್ಲಾ ಹುಡುಕಿದ್ರೂ ಭಾಗ್ಯಶ್ರೀಯ ಸಣ್ಣ ಸುಳಿವು ಸಿಕ್ಕಿರಲಿಲ್ಲ. ನಾಪತ್ತೆಯಾದ ಬಳಿಕ ಮೂರ್ನಾಲ್ಕು ದಿನ ಅಂದ್ರೆ ಸೆಪ್ಪಂಬರ್ 1ರಂದು ಗುಣತೀರ್ಥವಾಡಿ ಗ್ರಾಮದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಭೀಕರವಾಗಿ ಕೊಲೆ ಮಾಡಿ ಯಾರಿಗೂ ಕಾಣದಂತೆ ಗುಣತೀರ್ಥವಾಡಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದಲ್ಲಿರೋ ಮುಳ್ಳು ಕಂಟಿಯಲ್ಲಿ ಎಸೆದು ಹೋಗಿದ್ದು, ಕೊಳೆತ ಸ್ಥಿತಿಯಲ್ಲಿ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.ಯುವತಿಯ ಶವ ಬಹುತೇಕ ವಿವಸ್ತ್ರವಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಅಲ್ಲದೇ, ಕೊಲೆಯಾದ ಯುವತಿಯ ಕುಟುಂಬಸ್ಥರಿಗೆ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ್ ಸಾಂತ್ವನ ಹೇಳಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಆರೋಪಿಗಳನ್ನ ಎನ್‌ಕೌಂಟರ್ ಮಾಡುವಂತೆ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮುಖಂಡ ಹಣಮಂತ ಬೊಕ್ಕೆ, ರಾಮಣ್ಣ ಮಂಠಾಳೆ, ಶ್ರೀನಿವಾಸ್ ರೆಡ್ಡಿ, ರೇಖಾ ರಾಜಕುಮಾರ್, ಮಲ್ಲಿಕಾರ್ಜುನ್ ಬೊಕ್ಕೆ, ಪೋಪಟ್ ಜಮಾದಾರ್, ಶಂಕರ್ ಜಮಾದಾರ್, ಆಕಾಶ್ ಖಂಡಾಳೆ, ರವಿ ಕೊಳಕೂರ್, ಪಿಂಟು ಕಾಂಬಳೆ, ಯುವರಾಜ್ ಬೆಂಡೆ, ಪ್ರಕಾಶ ನಾಗುರೆ, ಸೇರಿದಂತೆ ಪ್ರಮುಖರು ಗಣ್ಯರು ಉಪಸ್ಥಿತರಿದ್ದರು

Tags: BIDAR SPDistrict collector Shilpa SharmaMala B.Narayan Rao
Previous Post

ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ:ಬಸವರಾಜ ಬೊಮ್ಮಾಯಿ

Next Post

ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಗಮನಕೊಡಿ – ಸಿಎಂ ಗೆ F.I.R.E ಸಂಸ್ಥೆ ಮನವಿ !|

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಗಮನಕೊಡಿ – ಸಿಎಂ ಗೆ F.I.R.E ಸಂಸ್ಥೆ ಮನವಿ !|

ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಗಮನಕೊಡಿ - ಸಿಎಂ ಗೆ F.I.R.E ಸಂಸ್ಥೆ ಮನವಿ !|

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada