ಮೂಡ ಪ್ರಕರಣದಲ್ಲಿ (MUDA scam) ತಮ್ಮ ವಿರುದ್ಧ ಬಿಜೆಪಿ ಹೂಡಿರುವ ಅಸ್ತ್ರಕ್ಕೆ ಸಿಎಂ ಸಿದ್ದರಾಮಯ್ಯ (Cm Siddaramiah) ಕೌಂಟರ್ ಕೊಡಲು ಸಜ್ಜಾಗಿದ್ದಾರೆ. ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿನ ಹಗರಣ ಬಗ್ಗೆ ತನಿಖೆ ವೇಗ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಕೊವೀಡ್ ಹಗರಣ (Coved scam), ಪಿಎಸ್ಐ ಹಗರಣ (Psi scam), 40% ಕಮಿಷನ್, ಭೋವಿ ಅಭಿವೃದ್ಧಿ ನಿಗಮದ ಹಗರಣ ತನಿಖೆಗೆ ಸಿಎಂ ಸಿದ್ದರಾಮಯ್ಯ ತನಿಖಾ ಪ್ರಗತಿ, ಸಮನ್ವಯ ಸಮತಿ ರಚನೆ ಮಾಡಿದ್ದಾರೆ. ಸರ್ಕಾರ, ತನಿಖಾ ಸಂಸ್ಥೆಗಳು ನಡೆಸುತ್ತಿರುವ ತನಿಖಾ ಪ್ರಗತಿ ಪರಿಶೀಲನೆ ಜೊತೆಗೆ ಸಮನ್ವಯಕ್ಕೆ ಐವರು ಸಚಿವರನ್ನೊಳಗೊಂಡ ಸಮಿತಿ ರಚನೆ ಮಾಡಲಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr.G. Parameshwar) ನೇತೃತ್ವದಲ್ಲಿ ರಚನೆಯಾಗಿದ್ದು, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಚಿವರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಮಿತಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಎರಡು ತಿಂಗಳಲ್ಲಿ ತಮಗೆ ನೀಡಿರುವ ಜವಾಬ್ದಾರಿ ಪೂರ್ಣಗೊಳಿಸಲು ಸಿಎಂ ಸೂಚನೆಯನ್ನ ನೀಡಿದ್ದಾರೆ.