ಬೆಂಗಳೂರು:ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ (Ganesha’s discharge at Nagamangala )ವೇಳೆ ಕಿಡಿಗೇಡಿಗಳು ಕಲ್ಲು ಮತ್ತು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಕೋಮುಗಲಭೆ ಅಲ್ಲ.ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಅದೊಂದು ಸಣ್ಣ ಗಲಾಟೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ Minister Dr. G. Parameshwar ಹೇಳಿದ್ದಾರೆ.
ಮಂಡ್ಯ ಜನರಲ್ಲಿ ಭಯ ಹುಟ್ಟಿಸಿರುವ ನಾಗಮಂಗಲದ ಘಟನೆ ಪೂರ್ವ ನಿಯೋಜಿತ ಕೃತ್ಯವಲ್ಲ.ಆ ಕ್ಷಣದಲ್ಲಿ ಅಚಾನಕ್ಕಾಗಿ ನಡೆದಿದೆ ಅಷ್ಟೆ. ಇದರಲ್ಲಿ ರಾಜಕೀಯ ಮಾಡಬೇಡಿ ಪೊಲೀಸರಿಗೆ ತನಿಖೆ ಮಾಡಲು ಬಿಡಿ ಎಂದು ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ನಾಗಮಂಗಲದಲ್ಲಿ ನಿನ್ನೆ ನಡೆದಿರುವ ಘಟನೆ ಕೋಮುಗಲಭೆ ಅಲ್ಲ.ಗಲಾಟೆ ಆಗಬಾರದಾಗಿತ್ತು. ಆದರೆ ದೊಡ್ಡ ಪ್ರಮಾಣದಲ್ಲಿ ಆಗಿದೆ. ಈಗ ಪರಿಸ್ಥಿತಿ ಶಾಂತವಾಗಿದೆ. ಯಾರಿಗೂ ಏನು ಗಾಯಗಳಾಗಿಲ್ಲ. ಪೊಲೀಸರು ಕಂಟ್ರೋಲಿಗೆ ತೆಗೆದುಕೊಂಡಿದ್ದಾರೆ. ಇದರ ತನಿಖೆ ಆಗಲಿ. ರಾಜಕೀಯ ಮಾಡೋದ ಬೇಡ ಎಂದು ಪರಮೇಶ್ವರ್ ಹೆಳಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕರು ಆರೋಪಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.