ಶಿವಮೊಗ್ಗ: ವಾಕಿಂಗ್ ಮಾಡುತ್ತಿದ್ದ MBBS ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯಾರ್ಥಿ ಪೃಥ್ವಿರಾಜ್ (20) ಹೃದಯಾಘಾತದಿಂದ ಸಾವ್ನಪ್ಪಿದ ವಿದ್ಯಾರ್ಥಿ ಆಗಿದ್ದಾನೆ.
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಯಾಗಿರುವ ಪೃಥ್ವಿರಾಜ್, ನಿನ್ನೆ ಸಂಜೆ ಪ್ರವಾಸಿ ಮಂದಿರದ ಬಳಿ ವಾಕಿಂಗ್ ಮಾಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದ. ತಕ್ಷಣ ಸಮೀಪದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದರು ವಾಯು ವಿಹಾರಿಗಳು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ 2 ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಪೃಥ್ವಿರಾಜ್, ಪ್ರತಿದಿನ ಪ್ರವಾಸಿ ಮಂದಿರದ ಬಳಿ ವಾಕ್ ಮಾಡುತ್ತಿದ್ದನು ಎನ್ನಲಾಗಿದೆ. ಔಷಧ ಸಗಟು ವ್ಯಾಪಾರಿ ಪುತ್ರನಾಗಿರುವ ಪೃಥ್ವಿರಾಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.