
ಬೆಂಗಳೂರಿನಲ್ಲಿ ಚರಂಡಿಗೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕ ಜಾವೇದ್ಗೆ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದ್ದು, ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸ್ಥಿತಿ ಗಂಭೀರ ಆಗಿದೆ. ಯುವಕನ ಪರಿಸ್ಥಿತಿ ಕ್ರಿಟಿಕಲ್ ಆಗಿದೆ ಎಂದಿದ್ದಾರೆ ಅಂಬೇಡ್ಕರ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್. ಸದ್ಯ ವೆಂಟಿಲೇಟರ್ನಲ್ಲಿ ಉಸಿರಾಟಕ್ಕೆ ವ್ಯವಸ್ಥೆ ಮಾಡಿದ್ದು, ಕುಟುಂಬಸ್ಥರು ಹೇಳುವವರೆಗೆ ವೆಂಟಿಲೇಟರ್ ಮುಂದುವರಿಸುತ್ತೇವೆ. ನಾವು ವೆಂಟಿಲೇಟರ್ ತೆಗೆಯುವ ನಿರ್ಧಾರ ಮಾಡುವುದಿಲ್ಲ. ಮುಂದಿನ ನಿರ್ಧಾರ ಕುಟುಂಬಸ್ಥರಿಗೆ ಬಿಟ್ಟಿದ್ದು ಎಂದಿದ್ದಾರೆ.

ಈ ನಡುವೆ ಚರಂಡಿಗೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕ ಜಾವೇದ್ ಪರಿಸ್ಥಿತಿ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗ್ತಿದ್ದ ಹಾಗೆ ಅಂಬೇಡ್ಕರ್ ಆಸ್ಪತ್ರೆಗೆ ಸಚಿವ ಕೆಜೆ ಜಾರ್ಜ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆ ವೈದ್ಯರು ಹಾಗು ಕುಟುಂಬಸ್ಥರ ಜೊತೆಗೂ ಚರ್ಚೆ ನಡೆಸಿದ್ದು, ಮೋರಿಗೆ ಬಿದ್ದಿದ್ದ ಯುವಕ ಕೋಮಾ ಸ್ಥಿತಿಗೆ ತಲುಪಿದ್ದಾನೆ. ವೆಂಟಿಲೇಟರ್ ತೆಗೆದ ಮೇಲೆ ಪ್ರಾಣ ಉಳಿಸಿಕೊಳ್ಳುವುದು ಕಷ್ಟ ಎಂದು ವೈದ್ಯರು ಸ್ಪಷ್ಟವಾಗಿ ಹೇಳಿದ್ದಾರೆ.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಗೋವಿಂದಪುರದಲ್ಲಿ ಮೋರಿ ಕಾರ್ಯ ಸಂಪೂರ್ಣಗೊಳಿಸಿದ ಕಾರಣಕ್ಕೆ ಯುವಕ ಬಿದ್ದು ಜೀವನ್ಮರಣದಲ್ಲಿ ಹೋರಾಟ ಮಾಡುತ್ತಿದ್ದಾನೆ ಎನ್ನಲಾಗಿತ್ತು. ಡಾ ಬಿ ಆರ್ ಅಂಬೇಡ್ಕರ್ ಅಸ್ಪತ್ರೆಗೆ ಭೇಟಿ ನೀಡಿದ ಸಚಿವ ಕೆ ಜೆ ಜಾರ್ಜ್, ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕ ಸೈಯದ್ ಪೋಷಕರನ್ನು ಭೇಟಿ ಮಾಡಿ, ವೈದ್ಯಕೀಯ ಚಿಕಿತ್ಸೆ ಹಾಗೂ ಇತರೆ ಸೌಲಭ್ಯ ನೀಡುವುದಾಗಿ ಭರವಸೆ ನೀಡಿದ್ದಾರೆ. ತಲೆ, ಬೆನ್ನಿಗೆ ಗಂಭೀರ ಗಾಯಗೊಂಡಿರುವ ಯುವಕ ಸೈಯದ್ ಜಾವೆದ್ ಸ್ಥಿತಿ ಗಂಭೀರವಾಗಿದೆ.