• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಗಮಂಗಲಕ್ಕೆ ಕುಮಾರಸ್ವಾಮಿ ಭೇಟಿ.. ಚಲುವರಾಯಸ್ವಾಮಿ ಗುದ್ದು..

ಕೃಷ್ಣ ಮಣಿ by ಕೃಷ್ಣ ಮಣಿ
September 19, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ನಾಗಮಂಗಲಕ್ಕೆ ಕುಮಾರಸ್ವಾಮಿ ಭೇಟಿ.. ಚಲುವರಾಯಸ್ವಾಮಿ ಗುದ್ದು..
Share on WhatsAppShare on FacebookShare on Telegram

ADVERTISEMENT

ಮಂಡ್ಯ: ನಾಗಮಂಗಲ ಗಣೇಶ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲದ ಬದ್ರಿಕೊಪ್ಪಲಿಗೆ ಕೇಂದ್ರ ಸಚಿವ H.D ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಗಲಭೆ ಬಳಿಕ ಎರಡನೇ ಬಾರಿಗೆ ನಾಗಮಂಗಲಕ್ಕೆ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಗಲಭೆ ಬಳಿಕ ಬಂಧನದ ಭೀತಿಯಿಂದ ಯುವಕರು ಊರು ತೊರೆದಿದ್ದು, ಯುವಕರ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಕುಮಾರಸ್ವಾಮಿ ಮತ್ತೊಮ್ಮೆ ಆಗಮಮಿಸಿದ್ದಾರೆ. ಇದಕ್ಕೂ ಮೊದಲು ಹಾನಿ ಸ್ಥಳಗಳಿಗೆ ಭೇಟಿ ನೀಡಿದ್ದರು.

ಬದ್ರಿಕೊಪ್ಪಲಿನ ಜನರಿಗೆ ಕುಮಾರಸ್ವಾಮಿ ನೆರವಿನ ಭರವಸೆ ನೀಡಿದ್ದಾರೆ. ಜನರ ಸಮಸ್ಯೆ ಆಲಿಸಿದ ಬಳಿಕ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ಆಮಿ ಧನ ಸಹಾಯ ಮಾಡಿದ್ದಾರೆ. ನಾಗಮಂಗಲ ಗಲಭೆ ಹಿನ್ನೆಲೆ ಬದ್ರಿಕೊಪ್ಪಲಿನ 13 ಜನ ಜೈಲು ಸೇರಿದ್ದರು. ಜೈಲು ಸೇರಿರುವ 13 ಜನ ಯುವಕರ ಕುಟುಂಬಕ್ಕೆ H.D ಕುಮಾರಸ್ಆಮಿ ಹಣದ ನೆರವು ನೀಡಿದ್ದಾರೆ. ಈ ನಡುವೆ ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ನಿರ್ಲಕ್ಷ್ಯ ಆರೋಪದಲ್ಲಿ ನಾಗಮಂಗಲ ಡಿವೈಎಸ್‌ಪಿ ಡಾ ಸುಮಿತ್ ಎ.ಆರ್ ಸಸ್ಪೆಂಡ್ ಮಾಡಿ ಮಂಡ್ಯ ಎಸ್‌ಪಿ ಮಲ್ಲಿಕಾರ್ಜು ಬಾಲದಂಡಿ ಆದೇಶ ಮಾಡಿದ್ದಾರೆ. ಇದಕ್ಕೂ ನಾಗಮಂಗಲ ಟೌನ್ ಠಾಣೆಯ ಇನ್ಸ್‌ಪೆಕ್ಟರ್‌ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿತ್ತು.

ನಾಗಮಂಗಲ ಗಲಭೆ ಬಗ್ಗೆ ಜಿಲ್ಲಾಡಳಿತದಿಂದ ವರದಿ ವಿಚಾರವಾಗಿ ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿದ್ದು, ಸರ್ಕಾರಕ್ಕೆ ವರದಿ ಬಂದಿದೆ, ಆದಷ್ಟು ಬೇಗ ಪರಿಹಾರ ಕೊಡ್ತೇವೆ ಎಂದಿದ್ದಾರೆ. ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ವಿಚಾರವಾಗಿ ಮಾತನಾಡಿ, ಮುಗಿದು ಹೋಗಿರುವ ವಿಚಾರ. ಅದನ್ನ ಇಲ್ಲಿಗೆ ಬಿಟ್ಟು ಬಿಡೋದು ಒಳ್ಳೆಯದು. ಪದೇ ಪದೇ ಹೋಗುವುದರಿಂದ ಏನು ಪ್ರಯೋಜನ. ಪರಿಹಾರ ಕೊಡಿಸುವ ವಿಚಾರವಾಗಿ ಕೆಲಸ ಮಾಡ್ತೇವೆ ಎಂದಿದ್ದಾರೆ. ಸೈಲೆಂಟ್ ಆಗಿರೋದನ್ನ ದಿನ ಬೆಳಗ್ಗೆ ಎದ್ದು ಕೆದಕುತ್ತಿದ್ದಾರೆ ನಾನು ಏನು ಮಾಡೋಕ್ಕಾಗುತ್ತೆ. ಅವರಿಗೆ ಅವರೇ ಪರಿಹಾರ ಹುಡಿಕಿಕೊಳ್ಳಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಸಿಎಂ ವಿರುದ್ದ ಹಿಟ್ಲರ್ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ವಿಚಾರಕ್ಕೆ ಉತ್ತರ ಕೊಟ್ಟಿರುವ ಚಲುವರಾಯಸ್ವಾಮಿ, ಕೇಂದ್ರದ ಸಚಿವರು ತೂಕವಾಗಿ ಮಾತನಾಡಬಹುದು. ಅವರಿಗೆ ನಾವು ಉತ್ತರ ಕೊಡಬಹುದು. ಉತ್ತರ ಕೊಟ್ಟರೆ ನಮ್ಮ ವ್ಯಕ್ತಿತ್ವ ಹಾಳಾಗುತ್ತದೆ ಎಂದಿದ್ದಾರೆ. ಇನ್ನು ಶೋಭಾ, ಅಶೋಕ್‌ಗೆ ಬೇಕಿರೋದು ಸಾರ್ವಜನಿಕರ ಹಿತ, ಶಾಂತಿ ಅಲ್ಲ. ಇಬ್ಬರು ಸೇರಿ ಕೆರಗೋಡು ಗ್ರಾಮದಲ್ಲಿ ಶುರು ಮಾಡಿದರು. ಕೆ.ಆರ್.ಪೇಟೆಯಲ್ಲಿ, ಪಾಂಡವಪುರದಲ್ಲಿ ಪ್ರಯತ್ನ ಮಾಡಿದರು. ಅದ್ಯಾವುದು ಸಕ್ಸಸ್ ಆಗಲಿಲ್ಲ. ಈಗ ಮತ್ತೆ ನಾಗಮಂಗಲಕ್ಕೆ ಪದೇ ಪದೇ ಬರ್ತಿದ್ದಾರೆ. ಘರ್ಷಣೆಗೆ ಜೆಡಿಎಸ್‌ನ ಕೆಲವರು ಕುಮ್ಮಕ್ಕು ಕೊಡಲು ನಿಂತಿದ್ದಾರೆ. ನಮ್ಮ ಜಿಲ್ಲೆಯ ಜನ ಇದನ್ನ ಸಹಿಸಲ್ಲ ಎಂದಿದ್ದಾರೆ.

Tags: BJPcommunal tension in nagamangalaCongress PartyNAGAMANGALAnagamangala ganesh newsnagamangala ganeshanagamangala ganesha processionnagamangala ganesha procession violencenagamangala incidentnagamangala latest newsnagamangala newsnagamangala news todaynagamangala news today livenagamangala riot casenagamangala riotsnagamangala today newsnagamangala violencenelamangala news today livestone pelting during nagamangala ganesha processionಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಷ್ಟ್ರೀಯ ಬಾಡ್ಮಿಂಟನ್ ಕೊಡಗಿನ ದಿಯಾ ಭೀಮಯ್ಯಗೆ ಪ್ರಥಮ ಸ್ಥಾನ.

Next Post

ಮುನಿರತ್ನ ವಿರುದ್ಧ ರೇ** ಕೇಸ್‌ ಬಗ್ಗೆ ಸುರೇಶ್‌ ಹೇಳಿದ್ದೇನು.!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post

ಮುನಿರತ್ನ ವಿರುದ್ಧ ರೇ** ಕೇಸ್‌ ಬಗ್ಗೆ ಸುರೇಶ್‌ ಹೇಳಿದ್ದೇನು.!

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada