
ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ನಾಯಕಿ ಅತಿಶಿ ಇಂದು ದೆಹಲಿಯ ಮುಖ್ಯಮಂತ್ರಿಯಾಗಿ (Atishi as Chief Minister )ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡರು.ವಿಶೇಷ ಅಂದ್ರೆ ಅತಿಶಿ ಅವರು ತಮ್ಮ ಹಿಂದಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್( Former Chief Minister Arvind Kejriwal )ಬಳಸುತ್ತಿದ್ದ ಆಸನವನ್ನ ಖಾಲಿ ಬಿಟ್ಟು ಪಕ್ಕದಲ್ಲೇ ಬೇರೆ ಚೇರ್ನಲ್ಲಿ ಕುಳಿತಿರುವುದು ಎಲ್ಲರ ಗಮನ ಸೆಳೆದಿದೆ.

ಈ ಮೂಲಕ ಕೇಜ್ರಿವಾಲ್ ಜೊತೆಗಿನ ಭಾವನಾತ್ಮಕ ಸಂಬಂಧವನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದರು.ಅಧಿಕಾರ ಸ್ವೀಕಾರ ಮಾಡಿದ ಬಳಿಕ ಸುದ್ದಿಗಾರತರೊಂದಿಗೆ ಮಾತನಾಡಿದ ಅವರು, ತಮ್ಮ ಸ್ಥಿತಿಯನ್ನು ರಾಮಾಯಣಕ್ಕೆ ಹೋಲಿಕೆ ಮಾಡಿದರು. ರಾಮಾಯಣದಲ್ಲಿ ರಾಮನ ಅನುಪಸ್ಥಿತಿಯಲ್ಲಿ ಭರತನು ಸಿಂಹಾಸನದ ಮೇಲೆ ಆತನ ಪಾದುಕೆಗಳನ್ನಿಟ್ಟು ರಾಜ್ಯಭಾರ ಮಾಡಿದ್ದನು ಎಂದರು.
आज मैंने दिल्ली के मुख्यमंत्री की ज़िम्मेदारी सँभाली है। आज मेरे मन में वो ही व्यथा है जो भरत के मन में थी जब उनके बड़े भाई भगवान श्री राम 14 साल के वनवास पर गए थे, और भरत जी को अयोध्या का शासन सँभालना पड़ा था। जैसे भरत ने 14 साल भगवान श्री राम की खड़ाऊँ रख कर अयोध्या का शासन… pic.twitter.com/OkNEgtYIq4
— Atishi (@AtishiAAP) September 23, 2024
ಭರತ ಹೊತ್ತ ಹೊರೆಯನ್ನೇ ನಾನು ಕೂಡ ಇಂದು ಹೊತ್ತಿದ್ದೇನೆ. ಆತ ರಾಮನ ಪಾದುಕೆಗಳನ್ನು ಸಿಂಹಾಸನದ ಮೇಲಿರಿಸಿ ರಾಜ್ಯಭಾರ ನಡೆಸಿದಂತೆಯೇ, ಮುಂದಿನ ನಾಲ್ಕು ತಿಂಗಳ ಕಾಲ ನಾನು ದೆಹಲಿಯಲ್ಲಿ ಆಡಳಿತ ನಡೆಸುತ್ತೇನೆ ಎಂದರು.
ಮುಂಬರುವ ಚುನಾವಣೆಯಲ್ಲಿ ದೆಹಲಿಯ ಜನ ಮತ್ತೆ ಅರವಿಂದ್ ಕೇಜ್ರಿವಾಲ್ರನ್ನು ಅಧಿಕಾರಕ್ಕೆ ಮರಳಿ ತರಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಅತಿಶಿ ವಿಶ್ವಾಸ ವ್ಯಕ್ತಪಡಿಸಿದರು.