ಮುಡಾ ಪ್ರಕರಣಕ್ಕೆ (MUDA scam) ಸಂಬಂಧಿಸಿ ಪ್ರಾಸಿಕ್ಯೂಷನ್ (Prosecution) ಕಾನೂನು ಸಮರದಲ್ಲಿ ಹಿನ್ನಡೆ ಅನುಭವಿಸಿರುವ ಸಿಎಂ ಸಿದ್ದರಾಮಯ್ಯಗೆ (Cm siddaramaiah)ಇವತ್ತು ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗಲಿದೆ. ಸಿಎಂ ಪ್ರಾಸಿಕ್ಯೂಷನ್ ವಿಚಾರದಲ್ಲಿ ನಿನ್ನೆಯಷ್ಟೇ ಹೈಕೋರ್ಟ್ (Highcourt) ಸಿಎಂ ವಿರುದ್ಧ ತನಿಖೆಗೆ ಅನುಮತಿ ಕೊಟ್ಟಿದ್ದು ಹಲವು ಬೆಳವಣಿಗೆಗಳಿಗೆ ಕಾರಣವಾಗಿದೆ.
ಇದೀಗ ಹೊಸ ಗೊಂದಲ ಶುರುವಾಗಿದ್ದು, ಸಿಎಂ ಮೇಲೆ ಯಾವ ಕೇಸ್ ಅನುಸಾರ ಎಫ್ಐಆರ್ (FIR) ಫೈಲ್ ಆಗುತ್ತೆ ಎಂಬುದು ಸದ್ಯ ಕುತೂಹಲಕ್ಕೆ ಕಾರಣವಾಗಿದ್ದು, ಇವತ್ತು ಈ ಪ್ರಶ್ನೆಗೆ ಉತ್ತರ ಸಿಗಲಿದೆ. 82ನೇ CCH ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಇಂದು ಮುಡಾ ಕೇಸ್ನಲ್ಲಿ ಆದೇಶ ಬರುವ ಸಾಧ್ಯತೆ ಇದೆ.
ಇನ್ನು ಈಗಾಗಲೇ 82ನೇ CCH ಕೋರ್ಟ್ನಲ್ಲಿ ಮುಡಾ ಕೇಸ್ ಅರ್ಜಿ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿತ್ತು. ಹೀಗಾಗಿ ಆರಂಭದಲ್ಲೇ ಆದೇಶ ನೀಡಲು ಅರ್ಜಿದಾರರು ಕೋರುವ ಸಾಧ್ಯತೆ ಇದೆ. ಮತ್ತೊಂದೆಡೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯ, ಮುಡಾ ಟೆನ್ಸನ್ ನಡುವೆಯೇ ಇವತ್ತು ಕೇರಳಕ್ಕೆ ಭೇಟಿ ನೀಡಲಿದ್ದಾರೆ.