ಮುಡಾ ಪ್ರಕರರಣದಲ್ಲಿ (Muda case) ಸಿಎಂ ಸಿದ್ದರಾಮಯ್ಯ (m siddaramaiah) ವಿರುದ್ಧ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತಕ್ಕೆ ನಿನ್ನೆಯಷ್ಟೇ ಸೂನೆನೀಡಿದೆ. ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಕೇಸ್ ದಾಖಲಿಸಿ, ಡಿಸೆಂಬರ್ 24ರ ಒಳಗೆ ತನಿಖಾ ವರದಿ ನೀಡುವಂತೆ ಸೂಚಿಸಿದೆ.
ಈ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದುಗೆ ಬಿಗ್ ಶಾಕ್ ನೀಡಿರುವ ಕೋರ್ಟ್, IPC 1208, 166, 403, ಭ್ರಷ್ಟಾಚಾರ ನಿಗ್ರಹ ಕಾಯ್ದೆಯ (Prevention of corruption) ಸೆಕ್ಷನ್ 9 ಮತ್ತು 13ರ ಅಡಿ, ಬೇನಾಮಿ ಆಸ್ತಿ ನಿಷೇಧ ಕಾಯ್ದೆಯಡಿ ಸೆಕ್ಷನ್ 53 & 54, ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ಸೆಕ್ಷನ್ 3, 4ರ ಅಡಿ ಕೇಸ್ ದಾಖಲಿಸಲು ಸೂಚನೆ ನೀಡಿದೆ.
ಇನ್ನು ಕೋರ್ಟ್ ಪರಿಗಣಿಸಿರುವ ಅಂಶಗಳ ಪ್ರಕಾರ ಈ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರ ಇರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಹೀಗಾಗಿಯೇ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ನೀಡಿದ್ದು, ಸಿದ್ದರಾಮಯ್ಯವೇ ಎ1 ಆರೋಪಿ ಆಗಲಿದ್ದಾರೆ.






